KRS | Large Volume of Water Released into Cauvery River: Advisory Issued for Precaution
ಶ್ರೀರಂಗಪಟ್ಟಣ : ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಬೆಳಗೊಳ ಹೋಬಳಿಯ ವಿವಿಧ ಗ್ರಾಮಗಳ ರೈತರು ಕೆಆರ್ಎಸ್ನ ನೀರಾವರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಬೆಳಗೊಳ ರೈತ ಮುಖಂಡ ಸುನೀಲ್ ನೇತೃತ್ವದಲ್ಲಿ ವಿವಿಧ ಗ್ರಾಮಗಳ ಮುಖಂಡರು ಕಚೇರಿ ಮುಂದೆ ಜಮಾಯಿಸಿ ನಾಲೆಗಳಿಗೆ ನೀರು ಹರಿಸದ ಸರ್ಕಾರದ ಕ್ರಮವನ್ನು ಖಂಡಿಸಿದರು.
ಕೆಆರ್ಎಸ್ ಜಲಾಶಯ ಭರ್ತಿಯಾದರೂ ನಾಲೆಗಳಿಗೆ ನೀರು ಹರಿಸದೆ, ಕಟಾವಿನ ಹಂತಕ್ಕೆ ಬಂದ ಕಬ್ಬು ಇತರ ವಾಣಿಜ್ಯ ಬೆಳೆಗಳಾದ ತೆಂಗು, ಅಡಿಕೆ, ಬಾಳೆ ಬೆಳೆಗಳು ನೀರಿಲ್ಲದೆ ಬಾಡುತ್ತಿವೆ. ಈ ಭಾಗದಲ್ಲಿ ತಿಂಗಳಿನಿಂದ ಸರಿಯಾಗಿ ಮಳೆ ಬಿದ್ದಿಲ್ಲ. ಆಗೊಮ್ಮೆ ಈಗೊಮ್ಮೆ ಸೋನೆ ಸುರಿದಿದ್ದು ಬಿಟ್ಟರೆ ಹಳ್ಳ, ಕೊಳ್ಳಗಳಲ್ಲಿ ನೀರು ಹರಿಯುವಂತಹ ಮಳೆ ಬಂದಿಲ್ಲ. ವಿಶ್ವೇಶ್ವರಯ್ಯ ನಾಲೆ, ಸಿಡಿಎಸ್ ಹಾಗೂ ವಿರಿಜಾ ನಾಲೆಯ ವ್ಯಾಪ್ತಿಯ ಸಂಪರ್ಕ ನಾಲೆಯಲ್ಲಿ ನೂರಾರು ಎಕರೆ ಕೃಷಿ ಜಮೀನುಗಳಿಗೆ ಕಬ್ಬು ಇತರ ಬೆಳೆಗಳಿಗೆ ನೀರಿನ ಅವಶ್ಯಕತೆಯಿದೆ. ಬೆಳೆಗಳು ನೀರಿಲ್ಲದೆ ಬಾಡುವ ಪರಿಸ್ಥಿತಿ ಎದುರಾಗಿದ್ದು, ಕೂಡಲೆ ನೀರು ಹರಿಸಿ ಬೆಳೆ ಉಳಿಸಲು ಮುಂದಾಗಬೇಕು ಎಂದು ಒತ್ತಾಯಿಸಿ ನೀರಾವರಿ ಇಲಾಖೆಯ ಎಇಇ ಕಿಶೋರ್ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಹರೀಶ್, ವಿಷಕಂಠು, ವಿನಯ್, ಸಿದ್ದಪ್ಪ, ದಾಸೇಗೌಡ, ರವಿ, ಪಾಪಯ್ಯ, ಶಿವಕುಮಾರ್ ಸೇರಿದಂತೆ ಇತರ ರೈತ ಮುಖಂಡರು ಹಾಜರಿದ್ದರು.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…