ಮಂಡ್ಯ

ನಾಲೆಗಳಿಗೆ ನೀರು ಹರಿಸಲು ಒತ್ತಾಯಿಸಿ ರೈತರ ಪ್ರತಿಭಟನೆ

ಶ್ರೀರಂಗಪಟ್ಟಣ : ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಬೆಳಗೊಳ ಹೋಬಳಿಯ ವಿವಿಧ ಗ್ರಾಮಗಳ ರೈತರು ಕೆಆರ್‌ಎಸ್‌ನ ನೀರಾವರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬೆಳಗೊಳ ರೈತ ಮುಖಂಡ ಸುನೀಲ್ ನೇತೃತ್ವದಲ್ಲಿ ವಿವಿಧ ಗ್ರಾಮಗಳ ಮುಖಂಡರು ಕಚೇರಿ ಮುಂದೆ ಜಮಾಯಿಸಿ ನಾಲೆಗಳಿಗೆ ನೀರು ಹರಿಸದ ಸರ್ಕಾರದ ಕ್ರಮವನ್ನು ಖಂಡಿಸಿದರು.

ಕೆಆರ್‌ಎಸ್ ಜಲಾಶಯ ಭರ್ತಿಯಾದರೂ ನಾಲೆಗಳಿಗೆ ನೀರು ಹರಿಸದೆ, ಕಟಾವಿನ ಹಂತಕ್ಕೆ ಬಂದ ಕಬ್ಬು ಇತರ ವಾಣಿಜ್ಯ ಬೆಳೆಗಳಾದ ತೆಂಗು, ಅಡಿಕೆ, ಬಾಳೆ ಬೆಳೆಗಳು ನೀರಿಲ್ಲದೆ ಬಾಡುತ್ತಿವೆ. ಈ ಭಾಗದಲ್ಲಿ ತಿಂಗಳಿನಿಂದ ಸರಿಯಾಗಿ ಮಳೆ ಬಿದ್ದಿಲ್ಲ. ಆಗೊಮ್ಮೆ ಈಗೊಮ್ಮೆ ಸೋನೆ ಸುರಿದಿದ್ದು ಬಿಟ್ಟರೆ ಹಳ್ಳ, ಕೊಳ್ಳಗಳಲ್ಲಿ ನೀರು ಹರಿಯುವಂತಹ ಮಳೆ ಬಂದಿಲ್ಲ. ವಿಶ್ವೇಶ್ವರಯ್ಯ ನಾಲೆ, ಸಿಡಿಎಸ್ ಹಾಗೂ ವಿರಿಜಾ ನಾಲೆಯ ವ್ಯಾಪ್ತಿಯ ಸಂಪರ್ಕ ನಾಲೆಯಲ್ಲಿ ನೂರಾರು ಎಕರೆ ಕೃಷಿ ಜಮೀನುಗಳಿಗೆ ಕಬ್ಬು ಇತರ ಬೆಳೆಗಳಿಗೆ ನೀರಿನ ಅವಶ್ಯಕತೆಯಿದೆ. ಬೆಳೆಗಳು ನೀರಿಲ್ಲದೆ ಬಾಡುವ ಪರಿಸ್ಥಿತಿ ಎದುರಾಗಿದ್ದು, ಕೂಡಲೆ ನೀರು ಹರಿಸಿ ಬೆಳೆ ಉಳಿಸಲು ಮುಂದಾಗಬೇಕು ಎಂದು ಒತ್ತಾಯಿಸಿ ನೀರಾವರಿ ಇಲಾಖೆಯ ಎಇಇ ಕಿಶೋರ್ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಹರೀಶ್, ವಿಷಕಂಠು, ವಿನಯ್, ಸಿದ್ದಪ್ಪ, ದಾಸೇಗೌಡ, ರವಿ, ಪಾಪಯ್ಯ, ಶಿವಕುಮಾರ್ ಸೇರಿದಂತೆ ಇತರ ರೈತ ಮುಖಂಡರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

1 hour ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

1 hour ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

1 hour ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

1 hour ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

14 hours ago