ಕೆ.ಆರ್.ಪೇಟೆ:– ರೈತರು ತಾವು ಬೆಳೆದ ಬೆಳೆಗಳನ್ನು ಸಾಗಿಸಲು ಸಮರ್ಪಕವಾದ ರಸ್ತೆಯಿಲ್ಲದೇ ಹೈರಾಣಾಗಿದ್ದು ಕೂಡಲೇ ತಮ್ಮ ಬೆಳೆಗಳನ್ನು ಸಾಗಿಸಲು ಸೂಕ್ತ ರಸ್ತೆ ನಿರ್ಮಿಸಿಕೊಡುವಂತೆ ಒತ್ತಾಯಿಸಿ ತಾಲ್ಲೂಕಿನ ಶೀಳನೆರೆ ಹೋಬಳಿಯ ಮರುವನಹಳ್ಳಿ ಗ್ರಾಮದ ರೈತರು ಗುಂಡಿಬಿದ್ದ ರಸ್ತೆಯಲ್ಲಿಯೇ ಪ್ರತಿಭಟನೆ ನಡೆಸಿದರು.
ಗ್ರಾಮದ ಸ್ಮಶಾನದ ಪಕ್ಕದಲ್ಲಿ ಶೀಳನೆರೆ ಗ್ರಾಮಕ್ಕೆ ತೆರಳಲು ಈ ಹಿಂದೆಯೇ ರಸ್ತೆ ಮಾಡಲಾಗಿತ್ತು. ಆದರೆ ಆ ರಸ್ತೆಯು ಪ್ರಾಕೃತಿಕ ವಿಕೋಪಗಳಿಗೆ ಸಿಲುಕಿ ಹದಗೆಟ್ಟಿದೆ. ಈಗ ಈ ರಸ್ತೆಗಳಲ್ಲಿ ಗಿಡಗಂಟಿಗಳು ಬೆಳೆದಿದ್ದು ಹಾಗೂ ಮಣ್ಣಿನ ಸವಕಳಿಯಿಂದ ವಾಹನಗಳನ್ನಾಗಲಿ ಅಥವಾ ಎತ್ತಿನ ಗಾಡಿಗಳನ್ನಾಗಲಿ ಚಲಾಯಿಸಲು ಸಾಧ್ಯವಾಗದೇ ಪರದಾಡುವಂತಾಗಿದೆ.
ಇದೇ ರಸ್ತೆಯನ್ನುಅವಲಂಬಿಸಿರುವ ಸುಮಾರು ನೂರಾರು ರೈತರುಗಳಿಗೆ ತಾವು ಬೆಳೆದ ಬೆಳೆಗಳನ್ನು ಸಾಗಿಸಲು ಬಹಳ ಅನಾನುಕೂಲವಾಗಿದೆ. ನೂರಾರು ಎಕರೆಗೂ ಹೆಚ್ಚಿನ ಪ್ರದೇಶದಲ್ಲಿ ರೈತರು ಹೆಚ್ಚಾಗಿ ಕಬ್ಬನ್ನು ಬೆಳೆಯುತ್ತಿದ್ದು ತಾವು ಬೆಳೆದ ಬೆಳೆಗಳನ್ನು ಸಾಗಿಸಲು ಸಮರ್ಪಕ ರಸ್ತೆಯಿಲ್ಲದೇ ಚುನಾಯಿತ ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಹಾಗಾಗಿ ಸಚಿವ ಕೆ.ಸಿ.ನಾರಾಯಣಗೌಡರು ಕೂಡಲೇ ಈ ಬಗ್ಗೆ ಗಮನಹರಿಸಿ ಭೂ ದಾಖಲೆಗಳ ಸಹಾಯಕ ನಿರ್ದೇಶಕರಿಗೆ ಸೂಚಿಸಿ ಒತ್ತುವರಿಯಾಗಿರುವ ರಸ್ತೆಯನ್ನು ಸರಿಪಡಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಗ್ರಾಮದ ಮುಖಂಡರಾದ ಹನುಮೇಗೌಡ, ಶಂಕರೇಗೌಡ, ನಂಜಪ್ಪಗೌಡ, ದೇವರಾಜು, ಶೇಖರ, ಶಂಕರಣ್ಣ, ವನಜಾಕ್ಷಮ್ಮ, ಶ್ರೀಕಂಠೇಗೌಡ, ಸುಧಾಕರ, ವಿಜಯ್ಕುಮಾರ್, ಸೇರಿದಂತೆ ಹಲವರು ಹಾಜರಿದ್ದರು.
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…