ಕೆ.ಆರ್.ಪೇಟೆ:– ರೈತರು ತಾವು ಬೆಳೆದ ಬೆಳೆಗಳನ್ನು ಸಾಗಿಸಲು ಸಮರ್ಪಕವಾದ ರಸ್ತೆಯಿಲ್ಲದೇ ಹೈರಾಣಾಗಿದ್ದು ಕೂಡಲೇ ತಮ್ಮ ಬೆಳೆಗಳನ್ನು ಸಾಗಿಸಲು ಸೂಕ್ತ ರಸ್ತೆ ನಿರ್ಮಿಸಿಕೊಡುವಂತೆ ಒತ್ತಾಯಿಸಿ ತಾಲ್ಲೂಕಿನ ಶೀಳನೆರೆ ಹೋಬಳಿಯ ಮರುವನಹಳ್ಳಿ ಗ್ರಾಮದ ರೈತರು ಗುಂಡಿಬಿದ್ದ ರಸ್ತೆಯಲ್ಲಿಯೇ ಪ್ರತಿಭಟನೆ ನಡೆಸಿದರು.
ಗ್ರಾಮದ ಸ್ಮಶಾನದ ಪಕ್ಕದಲ್ಲಿ ಶೀಳನೆರೆ ಗ್ರಾಮಕ್ಕೆ ತೆರಳಲು ಈ ಹಿಂದೆಯೇ ರಸ್ತೆ ಮಾಡಲಾಗಿತ್ತು. ಆದರೆ ಆ ರಸ್ತೆಯು ಪ್ರಾಕೃತಿಕ ವಿಕೋಪಗಳಿಗೆ ಸಿಲುಕಿ ಹದಗೆಟ್ಟಿದೆ. ಈಗ ಈ ರಸ್ತೆಗಳಲ್ಲಿ ಗಿಡಗಂಟಿಗಳು ಬೆಳೆದಿದ್ದು ಹಾಗೂ ಮಣ್ಣಿನ ಸವಕಳಿಯಿಂದ ವಾಹನಗಳನ್ನಾಗಲಿ ಅಥವಾ ಎತ್ತಿನ ಗಾಡಿಗಳನ್ನಾಗಲಿ ಚಲಾಯಿಸಲು ಸಾಧ್ಯವಾಗದೇ ಪರದಾಡುವಂತಾಗಿದೆ.
ಇದೇ ರಸ್ತೆಯನ್ನುಅವಲಂಬಿಸಿರುವ ಸುಮಾರು ನೂರಾರು ರೈತರುಗಳಿಗೆ ತಾವು ಬೆಳೆದ ಬೆಳೆಗಳನ್ನು ಸಾಗಿಸಲು ಬಹಳ ಅನಾನುಕೂಲವಾಗಿದೆ. ನೂರಾರು ಎಕರೆಗೂ ಹೆಚ್ಚಿನ ಪ್ರದೇಶದಲ್ಲಿ ರೈತರು ಹೆಚ್ಚಾಗಿ ಕಬ್ಬನ್ನು ಬೆಳೆಯುತ್ತಿದ್ದು ತಾವು ಬೆಳೆದ ಬೆಳೆಗಳನ್ನು ಸಾಗಿಸಲು ಸಮರ್ಪಕ ರಸ್ತೆಯಿಲ್ಲದೇ ಚುನಾಯಿತ ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಹಾಗಾಗಿ ಸಚಿವ ಕೆ.ಸಿ.ನಾರಾಯಣಗೌಡರು ಕೂಡಲೇ ಈ ಬಗ್ಗೆ ಗಮನಹರಿಸಿ ಭೂ ದಾಖಲೆಗಳ ಸಹಾಯಕ ನಿರ್ದೇಶಕರಿಗೆ ಸೂಚಿಸಿ ಒತ್ತುವರಿಯಾಗಿರುವ ರಸ್ತೆಯನ್ನು ಸರಿಪಡಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಗ್ರಾಮದ ಮುಖಂಡರಾದ ಹನುಮೇಗೌಡ, ಶಂಕರೇಗೌಡ, ನಂಜಪ್ಪಗೌಡ, ದೇವರಾಜು, ಶೇಖರ, ಶಂಕರಣ್ಣ, ವನಜಾಕ್ಷಮ್ಮ, ಶ್ರೀಕಂಠೇಗೌಡ, ಸುಧಾಕರ, ವಿಜಯ್ಕುಮಾರ್, ಸೇರಿದಂತೆ ಹಲವರು ಹಾಜರಿದ್ದರು.
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…