ಕೆ.ಆರ್.ಪೇಟೆ:– ರೈತರು ತಾವು ಬೆಳೆದ ಬೆಳೆಗಳನ್ನು ಸಾಗಿಸಲು ಸಮರ್ಪಕವಾದ ರಸ್ತೆಯಿಲ್ಲದೇ ಹೈರಾಣಾಗಿದ್ದು ಕೂಡಲೇ ತಮ್ಮ ಬೆಳೆಗಳನ್ನು ಸಾಗಿಸಲು ಸೂಕ್ತ ರಸ್ತೆ ನಿರ್ಮಿಸಿಕೊಡುವಂತೆ ಒತ್ತಾಯಿಸಿ ತಾಲ್ಲೂಕಿನ ಶೀಳನೆರೆ ಹೋಬಳಿಯ ಮರುವನಹಳ್ಳಿ ಗ್ರಾಮದ ರೈತರು ಗುಂಡಿಬಿದ್ದ ರಸ್ತೆಯಲ್ಲಿಯೇ ಪ್ರತಿಭಟನೆ ನಡೆಸಿದರು.
ಗ್ರಾಮದ ಸ್ಮಶಾನದ ಪಕ್ಕದಲ್ಲಿ ಶೀಳನೆರೆ ಗ್ರಾಮಕ್ಕೆ ತೆರಳಲು ಈ ಹಿಂದೆಯೇ ರಸ್ತೆ ಮಾಡಲಾಗಿತ್ತು. ಆದರೆ ಆ ರಸ್ತೆಯು ಪ್ರಾಕೃತಿಕ ವಿಕೋಪಗಳಿಗೆ ಸಿಲುಕಿ ಹದಗೆಟ್ಟಿದೆ. ಈಗ ಈ ರಸ್ತೆಗಳಲ್ಲಿ ಗಿಡಗಂಟಿಗಳು ಬೆಳೆದಿದ್ದು ಹಾಗೂ ಮಣ್ಣಿನ ಸವಕಳಿಯಿಂದ ವಾಹನಗಳನ್ನಾಗಲಿ ಅಥವಾ ಎತ್ತಿನ ಗಾಡಿಗಳನ್ನಾಗಲಿ ಚಲಾಯಿಸಲು ಸಾಧ್ಯವಾಗದೇ ಪರದಾಡುವಂತಾಗಿದೆ.
ಇದೇ ರಸ್ತೆಯನ್ನುಅವಲಂಬಿಸಿರುವ ಸುಮಾರು ನೂರಾರು ರೈತರುಗಳಿಗೆ ತಾವು ಬೆಳೆದ ಬೆಳೆಗಳನ್ನು ಸಾಗಿಸಲು ಬಹಳ ಅನಾನುಕೂಲವಾಗಿದೆ. ನೂರಾರು ಎಕರೆಗೂ ಹೆಚ್ಚಿನ ಪ್ರದೇಶದಲ್ಲಿ ರೈತರು ಹೆಚ್ಚಾಗಿ ಕಬ್ಬನ್ನು ಬೆಳೆಯುತ್ತಿದ್ದು ತಾವು ಬೆಳೆದ ಬೆಳೆಗಳನ್ನು ಸಾಗಿಸಲು ಸಮರ್ಪಕ ರಸ್ತೆಯಿಲ್ಲದೇ ಚುನಾಯಿತ ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಹಾಗಾಗಿ ಸಚಿವ ಕೆ.ಸಿ.ನಾರಾಯಣಗೌಡರು ಕೂಡಲೇ ಈ ಬಗ್ಗೆ ಗಮನಹರಿಸಿ ಭೂ ದಾಖಲೆಗಳ ಸಹಾಯಕ ನಿರ್ದೇಶಕರಿಗೆ ಸೂಚಿಸಿ ಒತ್ತುವರಿಯಾಗಿರುವ ರಸ್ತೆಯನ್ನು ಸರಿಪಡಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಗ್ರಾಮದ ಮುಖಂಡರಾದ ಹನುಮೇಗೌಡ, ಶಂಕರೇಗೌಡ, ನಂಜಪ್ಪಗೌಡ, ದೇವರಾಜು, ಶೇಖರ, ಶಂಕರಣ್ಣ, ವನಜಾಕ್ಷಮ್ಮ, ಶ್ರೀಕಂಠೇಗೌಡ, ಸುಧಾಕರ, ವಿಜಯ್ಕುಮಾರ್, ಸೇರಿದಂತೆ ಹಲವರು ಹಾಜರಿದ್ದರು.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…