ಮಂಡ್ಯ : ಮೈಕ್ರೋ ಫೈನಾನ್ಸ್ ಕಂಪನಿಯವರು ರೈತರಿಗೆ ಮತ್ತು ಸಾರ್ವಜನಿಕರಿಗೆ ನೀಡಿರುವ ಸಾಲ ವಸೂಲತಿ ಮಾಡುವ ಸಂದರ್ಭದಲ್ಲಿ ಅವರುಗಳ ಮೇಲೆ ಯಾವುದೇ ತರಹ ಕಿರುಕುಳ ಮತ್ತು ಒತ್ತಡ ನೀಡಬಾರದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮೈಕ್ರೋ ಫೈನಾನ್ಸ್ ಕಂಪನಿಗಳು ಸಭೆ ನಡೆಸಿ ಮಾತನಾಡಿದರು.
ರೈತರಿಗೆ ಸಾರ್ವಜನಿಕರಿಗೆ ನೀಡಿರುವ ಸಾಲ ವಸೂಲತಿ ಮಾಡುವಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳು ಜನಗಳ ಮೇಲೆ ಕಿರುಕುಳ ಹಾಗೂ ಒತ್ತಡ ನೀಡುತ್ತಿರುವುದು ಕಂಡು ಬಂದಿದೆ ಇದು ಅತಿರೇಖವಾದಲ್ಲಿ ಅಥವಾ ಅಹಿತಕರ ಘಟನೆಗಳು ಸಂಭವಿಸಿದಲ್ಲಿ ಸಾಲ ವಸೂಲತಿ ಮಾಡುವ ಮೈಕ್ರೋಪೈನಾನ್ಸ್ ಅವರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಹಾಗೂ ಕಿರುಕುಳ ನೀಡಿದ ಮೈಕ್ರೋಪೈನಾನ್ಸ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
2 ರಿಂದ 3 ತಿಂಗಳು ಸಾಲ ವಸೂಲಾತಿ ಮಾಡುವಂತಿಲ್ಲ ಸರ್ಕಾರ ಮಂಡ್ಯ ಜಿಲ್ಲೆಯಲ್ಲಿರುವ ಎಲ್ಲಾ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಗಳೆಂದು ಘೋಷಿಸಿ 77 ಸಾವಿರ ರೈತರಿಗೆ ರೂ 34 ಕೋಟಿ ಹಣವನ್ನು ಬರ ಪರಿಹಾರವಾಗಿ ನೀಡಿದೆ. ಬರಗಾಲ ಇರುವ ಹಿನ್ನೆಲೆಯಲ್ಲಿ ಮಾನವೀಯತೆ ದೃಷ್ಟಿಯಿಂದ ಎರಡು ಮೂರು ತಿಂಗಳುಗಳ ಕಾಲ ಸಾಲ ಮರುಪಾವತಿಗೆ ಅವಕಾಶ ನೀಡಿ ಒತ್ತಡ ಎರದಂತೆ ನೋಡಿಕೊಳ್ಳಿ ಎಂದರು.
ಬೆಳಗಿನ ಜಾವ ಹಾಗೂ ರಾತ್ರಿ ವೇಳೆಯಲ್ಲಿ ಸಾಲ ವಸೂಲಾತಿ ಮಾಡುವವರು ಪ್ರತಿದಿನ ಮನೆಗೆ ಭೇಟಿ ನೀಡುತ್ತಿದ್ದು, ಇದರಿಂದ ಸಾರ್ವಜನಿಕರು ತಮಗೆ ಪ್ರತಿದಿನದ ಕೆಲಸ ಮಾಡಲು ತೊಂದರೆ ಹಾಗೂ ಕಿರಿ ಕಿರಿ ಉಂಟಾಗುತ್ತಿದೆ ಎಂದು ದೂರುಗಳು ಬರುತ್ತಿದ್ದು, ಸಾಲ ವಸೂಲಾತಿಗೆ ಸರಿಯಾದ ಸಮಯ ನಿಗದಿಮಾಡಿಕೊಳ್ಳುವಂತೆ ತಿಳಿಸಿದರು.
ಸಾಲ ಮರುಪಾವತಿಗೆ ಸಂಬಂಧಿಸಿದಂತೆ ಮೈಕ್ರೋಪೈನಾನ್ಸ್ ಗಳು ತೊಂದರೆ ನೀಡುತ್ತಿದ್ದಲ್ಲಿ ಸಹಾಯವಾಣಿ ಸಂಖ್ಯೆ: 18004255654, 18001021080, 011 47174410, ನ್ನು ಸಂಪರ್ಕಿಸಬಹುದು ಎಂದರು.
ಸಭೆಯಲ್ಲಿಲೀಡ್ ಬ್ಯಾಂಕ್ ಮ್ಯಾನೇಜರ್ ಅರುಣ್ ಕುಮಾರ್, ಅಪರ ಜಿಲ್ಲಾಧಿಕಾರಿ ಡಾ ಎಚ್ ಎಲ್ ನಾಗರಾಜ್, ಜಿಲ್ಲಾ ವಾರ್ತಾಧಿಕಾರಿ ಎಸ್ ಎಚ್ ನಿರ್ಮಲ, ಹಾಗೂ ವಿವಿಧ ಮೈಕ್ರೋ ಫೈನಾನ್ಸ್ ನ ವ್ಯವಸ್ಥಾಪಕರು ಉಪಸ್ಥಿತರಿದ್ದರು.
ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…
ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…
ಲಕ್ಷ್ಮೀಕಾಂತ್ ಕೊಮಾರಪ್ಪ ಶೀತಗಾಳಿಯಿಂದ ಪಾರಾಗಲು ಬೆಚ್ಚನೆಯ ಬಟ್ಟೆ, ಹೊದಿಕೆ, ಬೆಂಕಿಯ ಮೊರೆ ಸೋಮವಾರಪೇಟೆ: ಶೀತಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಕಳೆದೆರಡು…
ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು…
ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್…