ಮಂಡ್ಯ

ಸಾಲದ ವಸೂಲಾತಿಗೆ ರೈತರ ಮೇಲೆ ಕಿರುಕುಳ ನೀಡಬಾರದು: ಡಾ: ಕುಮಾರ

ಮಂಡ್ಯ :  ಮೈಕ್ರೋ ಫೈನಾನ್ಸ್ ಕಂಪನಿಯವರು ರೈತರಿಗೆ ಮತ್ತು ಸಾರ್ವಜನಿಕರಿಗೆ ನೀಡಿರುವ ಸಾಲ ವಸೂಲತಿ ಮಾಡುವ ಸಂದರ್ಭದಲ್ಲಿ ಅವರುಗಳ ಮೇಲೆ ಯಾವುದೇ ತರಹ ಕಿರುಕುಳ ಮತ್ತು ಒತ್ತಡ ನೀಡಬಾರದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮೈಕ್ರೋ ಫೈನಾನ್ಸ್ ಕಂಪನಿಗಳು ಸಭೆ ನಡೆಸಿ ಮಾತನಾಡಿದರು.

ರೈತರಿಗೆ ಸಾರ್ವಜನಿಕರಿಗೆ ನೀಡಿರುವ ಸಾಲ ವಸೂಲತಿ ಮಾಡುವಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳು ಜನಗಳ ಮೇಲೆ ಕಿರುಕುಳ ಹಾಗೂ ಒತ್ತಡ ನೀಡುತ್ತಿರುವುದು ಕಂಡು ಬಂದಿದೆ ಇದು ಅತಿರೇಖವಾದಲ್ಲಿ ಅಥವಾ ಅಹಿತಕರ ಘಟನೆಗಳು ಸಂಭವಿಸಿದಲ್ಲಿ ಸಾಲ ವಸೂಲತಿ ಮಾಡುವ ಮೈಕ್ರೋಪೈನಾನ್ಸ್ ಅವರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಹಾಗೂ ಕಿರುಕುಳ ನೀಡಿದ ಮೈಕ್ರೋಪೈನಾನ್ಸ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

2 ರಿಂದ 3 ತಿಂಗಳು ಸಾಲ ವಸೂಲಾತಿ ಮಾಡುವಂತಿಲ್ಲ ಸರ್ಕಾರ ಮಂಡ್ಯ ಜಿಲ್ಲೆಯಲ್ಲಿರುವ ಎಲ್ಲಾ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಗಳೆಂದು ಘೋಷಿಸಿ 77 ಸಾವಿರ ರೈತರಿಗೆ ರೂ 34 ಕೋಟಿ ಹಣವನ್ನು ಬರ ಪರಿಹಾರವಾಗಿ ನೀಡಿದೆ. ಬರಗಾಲ ಇರುವ ಹಿನ್ನೆಲೆಯಲ್ಲಿ ಮಾನವೀಯತೆ ದೃಷ್ಟಿಯಿಂದ ಎರಡು ಮೂರು ತಿಂಗಳುಗಳ ಕಾಲ ಸಾಲ ಮರುಪಾವತಿಗೆ ಅವಕಾಶ ನೀಡಿ ಒತ್ತಡ ಎರದಂತೆ ನೋಡಿಕೊಳ್ಳಿ ಎಂದರು.

ಬೆಳಗಿನ ಜಾವ ಹಾಗೂ ರಾತ್ರಿ ವೇಳೆಯಲ್ಲಿ ಸಾಲ ವಸೂಲಾತಿ ಮಾಡುವವರು ಪ್ರತಿದಿನ ಮನೆಗೆ ಭೇಟಿ ನೀಡುತ್ತಿದ್ದು, ಇದರಿಂದ ಸಾರ್ವಜನಿಕರು ತಮಗೆ ಪ್ರತಿದಿನದ ಕೆಲಸ ಮಾಡಲು ತೊಂದರೆ ಹಾಗೂ ಕಿರಿ ಕಿರಿ ಉಂಟಾಗುತ್ತಿದೆ ಎಂದು ದೂರುಗಳು ಬರುತ್ತಿದ್ದು, ಸಾಲ ವಸೂಲಾತಿಗೆ ಸರಿಯಾದ ಸಮಯ ನಿಗದಿಮಾಡಿಕೊಳ್ಳುವಂತೆ ತಿಳಿಸಿದರು.

ಸಾಲ ಮರುಪಾವತಿಗೆ ಸಂಬಂಧಿಸಿದಂತೆ ಮೈಕ್ರೋಪೈನಾನ್ಸ್ ಗಳು ತೊಂದರೆ ನೀಡುತ್ತಿದ್ದಲ್ಲಿ ಸಹಾಯವಾಣಿ ಸಂಖ್ಯೆ: 18004255654, 18001021080, 011 47174410, ನ್ನು ಸಂಪರ್ಕಿಸಬಹುದು ಎಂದರು.

ಸಭೆಯಲ್ಲಿಲೀಡ್ ಬ್ಯಾಂಕ್ ಮ್ಯಾನೇಜರ್ ಅರುಣ್ ಕುಮಾರ್, ಅಪರ ಜಿಲ್ಲಾಧಿಕಾರಿ ಡಾ ಎಚ್ ಎಲ್ ನಾಗರಾಜ್, ಜಿಲ್ಲಾ ವಾರ್ತಾಧಿಕಾರಿ ಎಸ್ ಎಚ್ ನಿರ್ಮಲ, ಹಾಗೂ ವಿವಿಧ ಮೈಕ್ರೋ ಫೈನಾನ್ಸ್ ನ ವ್ಯವಸ್ಥಾಪಕರು ಉಪಸ್ಥಿತರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…

3 hours ago

ಓದುಗರ ಪತ್ರ: ಜನರ ನಿರೀಕ್ಷೆಗಳಿಂದ ದೂರವಾಗುತ್ತಿರುವ ಶಾಸನಸಭೆಗಳು

ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…

3 hours ago

ಓದುಗರ ಪತ್ರ: ಬೇಸರ ತರಿಸಿದ ಜನಪ್ರತಿನಿಧಿಗಳ ವರ್ತನೆ

ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…

3 hours ago

ಸೈನ್ಯ ಯುದ್ಧ ಮಾಡುತ್ತದೆ, ತೀರ್ಮಾನ ಸರ್ಕಾರ ಮಾಡಬೇಕು…!

ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…

3 hours ago

ಇಂದು ಶನಿವಾರಸಂತೆ ಬಸ್ ನಿಲ್ದಾಣ ಉದ್ಘಾಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…

3 hours ago

ಮಡಹಳ್ಳಿ ಬಳಿಯ ಅಕ್ರಮ ಕ್ರಷರ್‌ನಿಂದ ಜನತೆ ಹೈರಾಣ

ಮಹೇಂದ್ರ ಹಸಗೂಲಿ ನಿಯಮಾವಳಿ ಪಾಲಿಸದ ಕ್ರಷರ್; ದೂಳು-ಶಬ್ದ ಮಾಲಿನ್ಯ ಆರೋಪ ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಗ್ರಾಮದ ಬಳಿ ಇರುವ ಪಾರ್ವತಿ…

3 hours ago