ಮಂಡ್ಯ

ರೈತರು ಪೂರ್ಣ ಪ್ರಮಾಣದಲ್ಲಿ ಯೋಜನೆಗಳನ್ನು ಬಳಸಿಕೊಳ್ಳಿ : ಸಚಿವ ಚಲುವರಾಯಸ್ವಾಮಿ ಕರೆ

ಮಂಡ್ಯ : ರೈತರು ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ  ಕರೆ ನೀಡಿದರು.

ಇಂದು (ಮಾ.24) ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕೃಷಿ ಇಲಾಖೆಯ ವತಿಯಿಂದ ನಡೆದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕೃಷಿ ಕವಚ ಕಾರ್ಯಕ್ರಮದ ಕೃಷಿ ಇಲಾಖೆ ಯೋಜನೆಗಳ ಒಗ್ಗೂಡಿತ ಬದು ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಕೃಷಿಯ ಮೂಲಕ ರೈತರು ಆರ್ಥಿಕವಾಗಿ ಸದೃಢರಾಗಲು ಇಂತಹ ಕಾರ್ಯಾಗಾರಗಳು ಅತ್ಯಗತ್ಯ ಎಂದು ಹೇಳಿದರು.

ಭಾರತದ ಮಾಜಿ ಪ್ರಧಾನಿ ಹಾಗೂ ಶ್ರೇಷ್ಠ ಅರ್ಥಶಾಸ್ತ್ರಜ್ಞ ದಿವಂಗತ ಡಾ. ಮನ ಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಜಾರಿಗೆ ಗೊಳಿಸಿದರು, ದೇಶದ ಯಾವುದೇ ಪ್ರಜೆಯೂ ಹಸಿವಿನಿಂದ ಬಳಲಬಾರದೆಂದು ಆಹಾರ ಸುರಕ್ಷತಾ ಕಾಯ್ದೆಯನ್ನು ಜಾರಿಗೊಳಿಸಿದ್ದರು ಎಂದು ಹೇಳಿದರು.

ಬೇಸಿಗೆ ಕಾಲದಲ್ಲಿ ಹೆಚ್ಚಿನ ನೀರಿನ ಸಮಸ್ಯೆ ಉದ್ಭವಿಸುತ್ತದೆ, ಇದರಿಂದ ಬೆಳೆಹಾನಿ ಸಂಭವ ಹೆಚ್ಚು, ಮೊದಲ ಹಂತದಲ್ಲಿ ಕೃಷಿ ಭಾಗ್ಯ ಯೋಜನೆಯಡಿ ನೀರಿನ ಕೊರತೆ ಇರುವ ರಾಜ್ಯದ 104 ತಾಲ್ಲೂಕುಗಳಲ್ಲಿ ಕೃಷಿ ಹೊಂಡ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಈಗ 224 ತಾಲ್ಲೂಕುಗಳಲ್ಲೂ ಕೃಷಿ ಹೊಂಡ ನಿರ್ಮಾಣ ಯೋಜನೆಯನ್ನು ಜಾರಿಗೆ ತರಲಾಯಿತು.ಇದರಿಂದ ನೀರಿನ ಕೊರತೆಯಾದ ಸಂದರ್ಭದಲ್ಲಿ 15-30 ದಿನಗಳ ಅವಧಿಗೆ ಕೃಷಿಗೆ ನೀರನ್ನು‌ ನೀಡಬಹುದು ಎಂದರು.

ಕೃಷಿ ಇಲಾಖೆಯಲ್ಲಿ ರೈತರಿಗೆ ಹಲವಾರು ಯೋಜನೆಗಳಿದ್ದು, ರೈತರು ಸದುಪಯೋಗ ಪಡಿಸಿಕೊಳ್ಳಬೇಕು. ತಾಲ್ಲೂಕು ಮಟ್ಟದಲ್ಲಿ ಜನಪ್ರತಿನಿಧಿಗಳ ಅಧ್ಯಕ್ಷತೆಯಲ್ಲಿ ಮನರೇಗಾ ಯೋಜನೆ ಕುರಿತು ಕಾರ್ಯಾಗಾರ ನಡೆಸಿ ಹೆಚ್ಚಿನ ಸಾಧನೆ ಮಾಡುವಂತೆ ತಿಳಿಸಿದರು.

ಸರ್ಕಾರ ಬಡವರು, ಹಿಂದುಳಿದ ಹಾಗೂ ಮಹಿಳೆಯರ ಜೀವನ ಸುಧಾರಿಸಲು ಪಂಚ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರಲಾಯಿತು. ಇಂತಹ ಯೋಜನೆಯನ್ನು ಈ ಹಿಂದೆ ಯಾವುದೇ ಸರ್ಕಾರ ಜಾರಿಗೆ ತಂದಲ್ಲಿ. ಪಂಚ ಗ್ಯಾರಂಟಿ ಯೋಜನೆಯನ್ನು ನಮ್ಮ ಸರ್ಕಾರ ಜಾರಿಗೆ ತರುವ ಮೂಲಕ ಹೃದಯ ಶ್ರೀಮಂತಿಕೆಯನ್ನು ಮೆರೆದಿದೆ ಎಂದರು.

ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ತಾಲ್ಲೂಕಿಗೆ ಒಂದು ವರ್ಷಕ್ಕೆ ರೂ 230 ಕೋಟಿ ರೂ ವೆಚ್ಚ ಮಾಡಲಾಗುತ್ತಿದೆ. ಮಂಡ್ಯ ಜಿಲ್ಲೆಗೆ ಒಂದು ವರ್ಷದಲ್ಲಿ ಪಂಚ ಗ್ಯಾರಂಟಿ ಯೋಜನೆಗಾಗಿ 1610 ಕೋಟಿ ರೂ ವೆಚ್ಚವಾಗುತ್ತದೆ. ಈ ಯೋಜನೆಯಲ್ಲಿ ಯಾವುದೇ ಮದ್ಯವರ್ತಿಗಳಲ್ಲಿ ನೇರವಾಗಿ ಹಣ ಪೋಲಾಗದೆ ಫಲಾನುಭವಿಗಳ ಖಾತೆಗೆ ಜಮೆಯಾಗುತ್ತಿದೆ. ಗ್ಯಾರಂಟಿ ಯೋಜನೆಗಳ ಜೊತೆಗೆ ಹಲವಾರು ಅಭಿವೃದ್ಧಿ ಕೆಲಸಗಳು ಸಹ ನಿರಂತರವಾಗಿ ನಡೆಯುತ್ತಿದೆ ಎಂದರು.

ಸಭೆಯಲ್ಲಿ ಶ್ರೀರಂಗಪಟ್ಟಣ ವಿಧಾನಸಭಾ ಶಾಸಕ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧ್ಯಕ್ಷರಾದ ಎ.ಬಿ. ರಮೇಶ್ ಬಂಡಿಸಿದ್ದೇಗೌಡ, ಮೈಷುಗರ್ ಅಧ್ಯಕ್ಷ ಗಂಗಾಧರ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆರ್ ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಂಟಿ ಕೃಷಿ ನಿರ್ದೇಶಕ ಅಶೋಕ್, ಬೆಲ್ಲದ ನಾಡು ರೈತ ಉತ್ಪಾದಕ ಕಂಪನಿಗಳು ಒಕ್ಕೂಟದ ಅಧ್ಯಕ್ಷ ಕಾರಸವಾಡಿ ಮಹದೇವ, ಮಂಡ್ಯ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯದ ವಿಶೇಷಾಧಿಕಾರಿ ಡಾ.ಕೆ. ಎಂ. ಹರಿಣಿ ಕುಮಾರ್, ನರೇಗಾ ಆಯುಕ್ತಾಲಯ ಜಂಟಿ ನಿರ್ದೇಶಕಿ ಲಲಿತಾ ರೆಡ್ಡಿ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

5 mins ago

ಧರ್ಮವೆಂದು ತಿಳಿದು ತಿಗಣೆ ಇತ್ಯಾದಿಗಳನ್ನು ಕೊಲ್ಲುತ್ತಿದ್ದೆ

ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…

10 mins ago

ಜೂ.28ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…

14 mins ago

ಅಕ್ರಮ ಮದ್ಯ ಮಾರಾಟ: ಕಡಿವಾಣ ಕಾರ್ಯಾಚರಣೆ

ದಿನೇಶ್ ಕುಮಾರ್ ಹೆಚ್.ಎಸ್. ಅಗ್ನಿ ಅವಘಡದ ಬಳಿಕ ಎಚ್ಚೆತ್ತ ಅಧಿಕಾರಿಗಳು ಮೈಸೂರು: ನಗರದ ದಟ್ಟಗಳ್ಳಿಯ ಮಾರಾ ರೆಸ್ಟೋ ಬಾರ್‌ನಲ್ಲಿ ನಡೆದ…

18 mins ago

ಓದುಗರ ಪತ್ರ: ವಂಚನೆ ತಡೆಗಾಗಿ ನಿರ್ಬಂಧ

ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…

2 hours ago

ಓದುಗರ ಪತ್ರ: ಮರಗಳ ಹನನ ಏಕೆ?

ಮೈಸೂರಿನ ಕುಕ್ಕರಹಳ್ಳಿ ಕೆರೆ ಬಳಿ ಮೈಸೂರು ವಿಶ್ವವಿದ್ಯಾನಿಲಯದ ಹಿಂಭಾಗ ಮೈಸೂರು - ಚಾಮರಾಜನಗರ ರೈಲ್ವೆ ಹಳಿಯ ಪಕ್ಕದಲ್ಲಿದ್ದ ೩೫ ಮರಗಳನ್ನು…

2 hours ago