ಮಂಡ್ಯ

ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣ ಕಡಿಮೆಯಾಗಿದೆ: ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ: ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಆತ್ಮಹತ್ಯೆಯನ್ನು ನಿಲ್ಲಿಸಬೇಕು ಅಂದುಕೊಂಡಿದ್ದೇವೆ. ಅದಕ್ಕಾಗಿಯೇ ನಾವು ಐದು ಗ್ಯಾರಂಟಿಯನ್ನು‌ ಕೊಟ್ಟಿದ್ದೇವೆ‌ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.

ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಕೊಟ್ಟರೂ ಆತ್ಮಹತ್ಯೆ ಪ್ರಕರಣಗಳು ಮುಂದುವರೆಯುತ್ತಿವೆ. ಯಾವ ಕಾರಣಕ್ಕಾಗಿ ಆತ್ಮಹತ್ಯೆ ಆಗುತ್ತಿವೆ ಎಂಬುದು ನಿಖರವಾಗಿ ತಿಳಿದುಬಂದಿಲ್ಲ. ಈ ಕುರಿತು ಪೊಲೀಸರಿಂದ ಒಂದು ತಂಡ ರಚಿಸಿ ತನಿಖೆ ಮಾಡಿಸಿದ್ದೇವೆ ಎಂದು ಹೇಳಿದರು.

ಇನ್ನು ಸಿಎಂ ಸಿದ್ದರಾಮಯ್ಯ ಖಾಸಗಿ ಸಂಸ್ಥೆಯಿಂದ ತನಿಖೆ ನಡೆಸಲು ಸೂಚನೆ ನೀಡಿದ್ದಾರೆ. ಪ್ರಸ್ತುತ ರೈತ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಕಡಿಮೆ ಆಗಿದೆ. ಆದರೆ ಕಡಿಮೆ ಆಗಿರೋದು ಖುಷಿ ತಂದಿಲ್ಲ. ಆದರೆ ರೈತರ ಆತ್ಮಹತ್ಯೆ ಸಂಪೂರ್ಣವಾಗಿ ನಿಲ್ಲಬೇಕು ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ರಸಗೊಬ್ಬರ ಕಳುಹಿಸುವುದು ಕೇಂದ್ರ ಸರ್ಕಾರ ರಸಗೊಬ್ಬರ ತಯಾರಿಕೆ ಮಾಡುವ ಅಧಿಕಾರ ಇರುವುದು ಕೇಂದ್ರ ಸರ್ಕಾರಕ್ಕೆ. ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್‌ಗೆ ಇದರ ಕುರಿತಾಗಿ ಸಾಮಾನ್ಯ ಜ್ಞಾನ ಇಲ್ಲ. ಕೇಂದ್ರದಿಂದ ರಾಜ್ಯ ಸರ್ಕಾರಕ್ಕೆ ನೀಡಬೇಕಿದ್ದ 1.25 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರವನ್ನು ಕೇಂದ್ರ ನೀಡಿಲ್ಲ. ಇದರಿಂದ ಸಣ್ಣ ಪ್ರಮಾಣದಲ್ಲಿ ರಸಗೊಬ್ಬರ ವಿತರಣೆಯಲ್ಲಿ ವಿಳಂಬವಾಗಿದೆ ಅಷ್ಟೇ ಎಂದರು.

ಆಂದೋಲನ ಡೆಸ್ಕ್

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

10 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

23 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

23 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

23 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

24 hours ago