N Cheluvarayaswamy
ಮಂಡ್ಯ: ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಆತ್ಮಹತ್ಯೆಯನ್ನು ನಿಲ್ಲಿಸಬೇಕು ಅಂದುಕೊಂಡಿದ್ದೇವೆ. ಅದಕ್ಕಾಗಿಯೇ ನಾವು ಐದು ಗ್ಯಾರಂಟಿಯನ್ನು ಕೊಟ್ಟಿದ್ದೇವೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.
ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಕೊಟ್ಟರೂ ಆತ್ಮಹತ್ಯೆ ಪ್ರಕರಣಗಳು ಮುಂದುವರೆಯುತ್ತಿವೆ. ಯಾವ ಕಾರಣಕ್ಕಾಗಿ ಆತ್ಮಹತ್ಯೆ ಆಗುತ್ತಿವೆ ಎಂಬುದು ನಿಖರವಾಗಿ ತಿಳಿದುಬಂದಿಲ್ಲ. ಈ ಕುರಿತು ಪೊಲೀಸರಿಂದ ಒಂದು ತಂಡ ರಚಿಸಿ ತನಿಖೆ ಮಾಡಿಸಿದ್ದೇವೆ ಎಂದು ಹೇಳಿದರು.
ಇನ್ನು ಸಿಎಂ ಸಿದ್ದರಾಮಯ್ಯ ಖಾಸಗಿ ಸಂಸ್ಥೆಯಿಂದ ತನಿಖೆ ನಡೆಸಲು ಸೂಚನೆ ನೀಡಿದ್ದಾರೆ. ಪ್ರಸ್ತುತ ರೈತ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಕಡಿಮೆ ಆಗಿದೆ. ಆದರೆ ಕಡಿಮೆ ಆಗಿರೋದು ಖುಷಿ ತಂದಿಲ್ಲ. ಆದರೆ ರೈತರ ಆತ್ಮಹತ್ಯೆ ಸಂಪೂರ್ಣವಾಗಿ ನಿಲ್ಲಬೇಕು ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ರಸಗೊಬ್ಬರ ಕಳುಹಿಸುವುದು ಕೇಂದ್ರ ಸರ್ಕಾರ ರಸಗೊಬ್ಬರ ತಯಾರಿಕೆ ಮಾಡುವ ಅಧಿಕಾರ ಇರುವುದು ಕೇಂದ್ರ ಸರ್ಕಾರಕ್ಕೆ. ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ಗೆ ಇದರ ಕುರಿತಾಗಿ ಸಾಮಾನ್ಯ ಜ್ಞಾನ ಇಲ್ಲ. ಕೇಂದ್ರದಿಂದ ರಾಜ್ಯ ಸರ್ಕಾರಕ್ಕೆ ನೀಡಬೇಕಿದ್ದ 1.25 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರವನ್ನು ಕೇಂದ್ರ ನೀಡಿಲ್ಲ. ಇದರಿಂದ ಸಣ್ಣ ಪ್ರಮಾಣದಲ್ಲಿ ರಸಗೊಬ್ಬರ ವಿತರಣೆಯಲ್ಲಿ ವಿಳಂಬವಾಗಿದೆ ಅಷ್ಟೇ ಎಂದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…