ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್.ನಲ್ಲಿ ಕಳೆದ ಎರಡು ದಿನಗಳಿಂದ ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ರೈತರು ಶುಕ್ರವಾರ ಸಂಜೆ ಮೇಣದ ಬತ್ತಿ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.
ಧರಣಿ ಸ್ಥಳದಿಂದ ಮೆರವಣಿಗೆ ಹೊರಟ ರೈತರು, ಕಾವೇರಿ ಮಾತೆ ಪ್ರತಿಮೆಗೆ ಪೂಜೆ ಸಲ್ಲಿಸಲು ನಿರ್ಧರಿಸಿ ಒಳಗಡೆ ಬಿಡುವಂತೆ ಪೊಲೀಸರನ್ನು ನಿವೇದಿಸಿದರು. ಇದಕ್ಕೆ ಪೊಲೀಸರು ಅನುಮತಿ ನೀಡದಿದ್ದಾಗ ಕಾವೇರಿ ನೀರಾವರಿ ನಿಗಮದ ಸೂಪರಿಂಟೆಂಡೆಂಟ್ ರಘುರಾಮ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಲು ಅನುಮತಿ ನೀಡುವಂತೆ ಕೋರಿದರಾದರೂ ಒಳ ಪ್ರವೇಶಕ್ಕೆ ಅನುಮತಿ ನೀಡಲಿಲ್ಲ.
ಈ ಸಂದರ್ಭ ಮಾತನಾಡಿದ ಜಿಲ್ಲಾ ರೈತ ಸಂಘದ ಅಧ್ಯಕ್ಷ ಎ.ಎಲ್. ಕೆಂಪೂಗೌಡ ಅವರು, ನಾವು ಮಳೆಗಾಗಿ ಪ್ರಾರ್ಥಿಸಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಲು ಅವಕಾಶ ನೀಡುವಂತೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳನ್ನು ಕೇಳಿದೆವು. ಆದರೆ, ಅವರು ಅನುಮತಿ ನೀಡಿಲ್ಲ. ನಾವೇನು ಉಗ್ರಗಾಮಿಗಳಾ ಎಂದು ಪ್ರಶ್ನಿಸಿದರು.
ಸರ್ಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದಂತೆ ದೀರ್ಘಾವಧಿ ಬೆಳೆ ಹಾಕದೆ ಭತ್ತವನ್ನು ನಾಟಿ ಮಾಡಿದ್ದೇವೆ. ಹೇಳಿದಂತೆ ನೀರು ಕೊಡಬೇಕು, ಇಲ್ಲದಿದ್ದರೆ ಸೂಕ್ತ ಪರಿಹಾರ ಘೋಷಣೆ ಮಾಡಬೇಕೆಂದು ಆಗ್ರಹಿಸಿದರು.
ಮೆರವಣಿಗೆಯಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ, ರೈತ ಮುಖಂಡರಾದ ಪ್ರಸನ್ನ ಎನ್.ಗೌಡ, ನಾಗರಾಜು, ಮನುಸೋಮಯ್ಯ, ಸುಜಯ್ ಬೋಪಯ್ಯ, ಜಗದೀಶ್, ಎಚ್.ಎಲ್. ಪ್ರಕಾಶ್, ದಯಾನಂದ, ನಾಗರಾಜು, ಮಂಜುನಾಥ್, ಪ್ರಿಯಾ ರಮೇಶ್ ಸೇರಿದಂತೆ ನೂರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…