ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸೋಮನಹಳ್ಳಿ ಕೆಸ್ತೂರು ಅಡ್ಡರಸ್ತೆಯ ಅಡಿಗಾಸ್ ಹೋಟೆಲ್ ಬಳಿ ಶುಕ್ರವಾರ ಸಂಜೆ ಜರುಗಿದೆ.
ನಗರದ ಡಾ.ಶಾಂತಾ ಹೆಚ್.ಕೆ.ಮರಿಯಪ್ಪ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾದ ಶಶಾಂಕ್ ಗೌಡ, ಹಿತಾ, ನಂದಿನಿ, ವಿಕ್ರಾಂತ್ ವಂದನಾ, ನಿಖಿತ್, ಮನ್ವಿತ್, ಹರ್ಷಿತಾ, ಹಾಗೂ ಸಾಹಿತ್ಯ ಗಾಯಗೊಂಡ ವಿದ್ಯಾರ್ಥಿಗಳಾಗಿದ್ದಾರೆ.
ಉದಯರಂಗ ಬಸ್ ನಲ್ಲಿದ್ದ ಸುಶೀಲಮ್ಮ, ಗೌರಮ್ಮ, ಶಿವರಾಂ, ಶೋಭಾ, ಶಿವಮಲ್ಲು, ಗಾಯಗೊಂಡ ವ್ಯಕ್ತಿಗಳಾಗಿದ್ದಾರೆ. ಗಾಯಗೊಂಡವರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದರಲ್ಲಿ ವಿಕ್ರಾಂತ್, ಹರ್ಷಿತಾ ಸೇರಿದಂತೆ 6 ಮಂದಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಎಂದಿನಂತೆ ಶಾಲೆಗೆ ಆಗಮಿಸಿದ್ದ ವಿದ್ಯಾರ್ಥಿಗಳು ಶಾಲೆ ಮುಗಿಸಿ ತಮ್ಮ ಗ್ರಾಮಗಳಿಗೆ ಶಾಲಾ ವಾಹನದ ಮೂಲಕ ತೆರಳುತ್ತಿದ ವೇಳೆ ಮದ್ದೂರು ಮಾರ್ಗವಾಗಿ ಆಗಮಿಸಿದ ಉದಯರಂಗ ಖಾಸಗಿ ಬಸ್ ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಕದಲೀಪುರ, ಹುಳಗನಹಳ್ಳಿ, ಹೆಮ್ಮನಹಳ್ಳಿ, ಗ್ರಾಮಗಳ ವಿದ್ಯಾರ್ಥಿಗಳನ್ನು ತಮ್ಮ ಗ್ರಾಮಕ್ಕೆ ಬಿಡಲು ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ಅಪಘಾತ ಸಂಭವಿಸಿದ ವಿಷಯ ತಿಳಿದು ಪೋಷಕರು ಆಸ್ಪತ್ರೆಗೆ ದೌಡಾಯಿಸಿ ತಮ್ಮ ಮಕ್ಕಳ ಆರೋಗ್ಯ ವಿಚಾರಿಸುತ್ತಿದ್ದಾರೆ.
ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಸಚಿವ ಡಿ.ಸಿ.ತಮ್ಮಣ್ಸ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಶೋಭಾರಾಣಿ, ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ, ಡಿವೈಎಸ್ಪಿ ಯಶವಂತ್ ಕುಮಾರ್, ಬಿಇಓ ಧನಂಜಯ, ಕದಲೂರು ಉದಯ್ ಚಾರಿಟಬಲ್ ಟ್ರಸ್ಟಿ ಕೆ.ಎಂ.ರವಿ, ಶಾಲಾ ಆಡಳಿತ ಮಂಡಳಿಯ ಅಪೂರ್ವ ಚಂದ್ರು ಆಸ್ಪತ್ರೆಗೆ ಭೇಟಿ ಗಾಯಾಳುಗಳ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು.
ಮದ್ದೂರು ಸಂಚಾರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…