ಮಂಡ್ಯ

ಪೊಲೀಸ್‌ ಪೇದೆ ಮೇಲೆ ಮಾರಣಾಂತಿಕ ಹಲ್ಲೆ : ಐವರ ವಿರುದ್ಧ ಎಫ್‌ಐಆರ್‌

ಕೆ.ಆರ್‌ ಪೇಟೆ : ಪೊಲೀಸ್ ಪೇದೆಯೊಬ್ಬರ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದ್ದು, ಈ ಸಂಬಂಧ ಐವರ ವಿರುದ್ದ ಕೆ.ಆರ್‌ ಪೇಟೆ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.

ಸೈಯ್ಯದ್‌ ಮನ್ಸೂರ್ (27) ಹಲ್ಲೆಗೆ ಒಳಗಾದ ಪೊಲೀಸ್ ಕಾನ್ಸ್ ಟೇಬಲ್. ಸದ್ಯ ಮೈಸೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇದೆ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಸೈಯ್ಯದ್‌ಮನ್ಸೂರ್ ಮೆದುಳಿಗೆ ತೀವ್ರ ಪೆಟ್ಟಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಮಂಡ್ಯದ ಮೂಲದ ಕೆ.ಆರ್.ಪೇಟೆಯ ನಿವಾಸಿಯಾಗಿರುವ ಸೈಯ್ಯದ್‌ ಮನ್ಸೂರ್ ರಾಮನಗರ ಪೊಲೀಸ್ ಕಾನ್ಸ್ ಟೆಬಲ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅನಾರೋಗ್ಯ ಕಾರಣ ರಜೆ ಮೇಲೆ ಕೆ.ಆರ್‌ ಪೇಟೆಗೆ ಬಂದಿದ್ದ ಸೈಯ್ಯದ್‌, ಸ್ನೇಹಿತ ಜೊತೆ ಬೈಕ್ ರೇಸ್ ವೀಕ್ಷಣೆಗೆ ಹೋದ ವೇಳೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿದ್ದಾರೆ.

ರೇಸ್ ಸ್ಥಳದಿಂದ ಅಟ್ಟಾಡಿಸಿಕೊಂಡು‌ ಹೋಗಿ ಹತ್ಯೆಗೆ ಯತ್ನಿಸಿದ್ದು, ಡ್ರೋನ್ ಕ್ಯಾಮೆರಾದಲ್ಲಿ ಹಲ್ಲೆಯ ಇಂಚಿಂಚು‌ ದೃಶ್ಯಾವಳಿ ಸೆರೆಯಾಗಿದೆ. ಕಳೆದ ವರ್ಷ ನಾಗಮಂಗಲದ ಗಲಭೆಗೆ ಕಾರಣವಾಗಿದ್ದವರು ಈ ರೀತಿ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ನಾಗಮಂಗಲದ ಗಣೇಶ ಗಲಾಟೆಯಲ್ಲಿ‌ ಭಾಗಿಯಾಗಿದ್ದ ಕಿಡಿಗೇಡಿಗಳು ಈ ಹಲ್ಲೆ ನಡೆಸಿದ್ದು, ನಾಗಮಂಗಲದ ಮುತುಬೀರ್, ಅಜ್ಜು, ಬಾಲಿ ಸೇರಿ‌ ಐವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

4 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

9 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

13 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

13 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

13 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

16 hours ago