ಮಂಡ್ಯ

ಹೆಂಡತಿ ಮೊಬೈಲ್‌ನಲ್ಲಿ ಮಾತಾಡ್ತಾಳೆ ಅಂತ ಮಕ್ಕಳನ್ನು ಕೊಂದ ತಂದೆ

ಮಂಡ್ಯ : ಕೌಟುಂಬಿಕ ಕಲಹ ಹಿನ್ನೆಲೆ ಸ್ವಂತ ತಂದೆಯೇ ತನ್ನ ಇಬ್ಬರು ಮಕ್ಕಳ ಕತ್ತು ಸೀಳಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಶ್ರೀಕಾಂತ್ ಬಂಧಿತ ಆರೋಪಿ. ಈತ ಕಲಬುರಗಿ ಜಿಲ್ಲೆಯ ಗಾಣಗಪುರದವನಾಗಿದ್ದು, ಲಕ್ಷ್ಮಿ ಎಂಬಾಕೆಯನ್ನು ವರಿಸಿದ್ದ. ಮದುವೆಯಾದಾಗಿನಿಂದ ಇವರಿಬ್ಬರ ಮಧ್ಯೆ ಒಂದಲ್ಲ ಒಂದು ವಿಚಾರಕ್ಕೆ ಗಲಾಟೆ ನಡೆಯುತ್ತಲೇ ಇತ್ತು. ಬುಧವಾರ ಈತ ತನ್ನ ತಂದೆ-ತಾಯಿಯೊಂದಿಗೆ ಜಗಳ ಮಾಡಿಕೊಂಡು ಶ್ರೀರಂಗಪಟ್ಟಣ ಸಮೀಪದ ಮರಳಗಾಲ ಗ್ರಾಮದ ವಿರೂಪಾಕ್ಷ ಎಂಬವರ ತೋಟದ ಮನೆಯಲ್ಲಿ ಕೆಲಸ ಮಾಡುತ್ತಿದ್ದ. ನಂತರ ಅತ್ತೆ-ಮಾವನ ಮನೆಗೆ ಬಂದಿದ್ದ. ಅಲ್ಲದೇ ನಮಗೆ ಇಲ್ಲಿಯೇ ಕೆಲಸ ಕೊಡಿಸಿ, ಕೆಲಸ ಮಾಡಿಕೊಂಡು ಇಲ್ಲಿಯೇ ಇರುತ್ತೇವೆ ಎಂದು ಶ್ರೀಕಾಂತ್ ಹೇಳಿದ್ದ.

ಇದಕ್ಕೆ ಒಪ್ಪಿಕೊಂಡ ಅವರ ಅತ್ತೆ-ಮಾವ ಊಟ ಮಾಡಿ ಮಲಗಿದ್ದರು. ಗುರುವಾರ ಬೆಳಗ್ಗಿನ ಜಾವ ಏಕಾಏಕಿ ಶ್ರೀಕಾಂತ್ ತನ್ನ ಹೆಂಡತಿಗೆ ಸುತ್ತಿಗೆಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಅಲ್ಲೇ ಪಕ್ಕದಲ್ಲಿದ್ದ ಆದರ್ಶ್ (4) ಮತ್ತು ಅಮೂಲ್ಯ (2) ಎಂಬ ತನ್ನ ಇಬ್ಬರು ಮಕ್ಕಳ ಕತ್ತು ಸೀಳಿ ಕೊಲೆ ಮಾಡಿ ಅಲ್ಲಿಂದ ಪರಾರಿಯಾಗಿದ್ದ. ಕೊಲೆ ಮಾಡಿದ ಪಾಪಿ ಶ್ರೀಕಾಂತ್ ಪರಾರಿಯಾಗಿ ತನ್ನ ಹುಟ್ಟೂರಾದ ಜೇವರ್ಗಿಗೆ ಬಂದು ಯಾವುದೇ ಪಾಪಪ್ರಜ್ಞೆ ಇಲ್ಲದೇ ಕುಡಿದು ಮಲಗಿದ್ದ. ಟಿವಿಯಲ್ಲಿ ಹತ್ಯೆ ವಿಚಾರ ತಿಳಿದ ಈತನ ತಂದೆ-ತಾಯಿ ಮನೆಯಲ್ಲಿ ಶ್ರೀಕಾಂತ್ ಇರುವಿಕೆಯ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಆಧಾರದ ಮೇಲೆ ಪೊಲೀಸರು ಆರೋಪಿ ಶ್ರೀಕಾಂತ್‌ನನ್ನು ಜೇವರ್ಗಿಯಲ್ಲಿ ಬಂಧಿಸಿದ್ದಾರೆ. ವಿಚಾರಣೆ ವೇಳೆ ಕೊಲೆಯ ಅಸಲಿ ಸತ್ಯವನ್ನು ಶ್ರೀಕಾಂತ್ ಬಾಯಿ ಬಿಟ್ಟಿದ್ದಾನೆ. ತನ್ನ ಹೆಂಡತಿ ಯಾವಾಗಲೂ ಯಾರದ್ದೋ ಜೊತೆ ಫೋನ್‌ನಲ್ಲಿ ಗಂಟೆಗಟ್ಟಲೆ ಮಾತನಾಡುತ್ತಿದ್ದಳು. ಈ ಹಿನ್ನೆಲೆ ಪತ್ನಿಯ ಶೀಲ ಶಂಕಿಸಿ ಮಕ್ಕಳನ್ನು ಕೊಲೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಪ್ರತಿದಿನ ಲಕ್ಷ್ಮಿ ಶೀಲ ಶಂಕಿಸಿ ಮನೆಯಲ್ಲಿ ಗಲಾಟೆ ನಡೆಯುತ್ತಿತ್ತು. ಇಬ್ಬರು ಮಕ್ಕಳು ನನ್ನದಲ್ಲ ಎಂದು ಸದಾ ಮಕ್ಕಳು ಮತ್ತು ಹೆಂಡತಿಯ ಮೇಲೆ ಹಲ್ಲೆ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಇದೀಗ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

lokesh

Recent Posts

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

1 hour ago

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

3 hours ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

4 hours ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

4 hours ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

5 hours ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

6 hours ago