ಮಂಡ್ಯ

ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆಗೆ ಕಡಿವಾಣ: ಲಿಂಗಾನುಪಾತ ಏರಿಕೆ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಎಗ್ಗಿಲ್ಲದೇ ನಡೆಯುತ್ತಿದ್ದ ಭ್ರೂಣ ಹತ್ಯೆಗೆ ಆರೋಗ್ಯ ಇಲಾಖೆ ಕಡಿವಾಣ ಹಾಕಿದ ಬೆನ್ನಲ್ಲೇ ಲಿಂಗಾನುಪಾತದಲ್ಲಿ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮಂಡ್ಯ, ಪಾಂಡವಪುರ, ನಾಗಮಂಗಲದಲ್ಲಿ ಸರಣಿ ಭ್ರೂಣ ಹತ್ಯೆ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಮಂಡ್ಯ ಜಿಲ್ಲೆಯನ್ನು ರಾಜ್ಯದ ಮುಂದೆ ತಲೆ ತಗ್ಗಿಸುವಂತೆ ಮಾಡಿತ್ತು.

ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಅಲರ್ಟ್‌ ಆದ ಆರೋಗ್ಯ ಇಲಾಖೆ ದಂಧೆಗೆ ಕಡಿವಾಣ ಹಾಕುವಲ್ಲಿ ಸಂಪೂರ್ಣ ಯಶಸ್ವಿಯಾಗಿದೆ.

ಈ ಹಿನ್ನೆಲೆಯಲ್ಲಿ ಇದೀಗ ಆರೋಗ್ಯ ಇಲಾಖೆ ದಿಟ್ಟ ಕ್ರಮಕ್ಕೆ ಲಿಂಗಾನುಪಾತ ಏರಿಕೆ ಆಗಿದೆ. ಕಳೆದ ವರ್ಷ ಪ್ರತಿ ಗಂಡಿಗೆ 869 ಇದ್ದ ಹೆಣ್ಣು ಮಕ್ಕಳ ಸಂಖ್ಯೆ ಈ ವರ್ಷ 930ಕ್ಕೆ ಏರಿಕೆಯಾಗಿದೆ.

ಮಂಡ್ಯ ಜಿಲ್ಲೆಗೆ ತೀವ್ರ ಕಳಂಕ ತಂದಿದ್ದ ಭ್ರೂಣ ಲಿಂಗ ಪತ್ತೆ ದಂಧೆಗೆ ಬ್ರೇಕ್‌ ಹಾಕುವಲ್ಲಿ ಆರೋಗ್ಯ ಇಲಾಖೆ ಯಶಸ್ವಿಯಾಗಿದೆ.

ಆಂದೋಲನ ಡೆಸ್ಕ್

Recent Posts

ಬಜೆಟ್‌ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ: ಸ್ಪೀಕರ್‌ ಯು.ಟಿ.ಖಾದರ್‌ ಕರೆ

ಮಂಗಳೂರು: ಬಜೆಟ್‌ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ ಎಂದು ಸ್ಪೀಕರ್‌ ಯು.ಟಿ.ಖಾದರ್‌ ಕರೆ ನೀಡಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ…

6 mins ago

ಹಾಸನ| ಒಂದೇ ವಾರದಲ್ಲಿ ಎರಡು ಚಿರತೆ ಸೆರೆ: ನೆಮ್ಮದಿಯ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ದಿಂಡಗೂರು ಗ್ರಾಮದಲ್ಲಿ ಕಳೆದ ಒಂದು ವಾರದ ಅಂತರದಲ್ಲಿ ಎರಡು ಚಿರತೆಗಳನ್ನು ಸೆರೆ ಹಿಡಿಯಲಾಗಿದ್ದು, ಗ್ರಾಮಸ್ಥರು ನೆಮ್ಮದಿಯ…

53 mins ago

ಯುದ್ಧದ ನಡುವೆ ಇರಾನ್‌ನಲ್ಲಿ ಭೂಕಂಪ: 4.1 ತೀವ್ರತೆ ದಾಖಲು

ಟೆಹರಾನ್:‌ ಯುದ್ಧದ ನಡುವೆಯೇ ಇರಾನ್‌ನಲ್ಲಿ ಇಂದು ಭೂಕಂಪ ಸಂಭವಿಸಿದೆ. ಇರಾನ್‌ನ ಆಯಕಟ್ಟಿನ ಪ್ರದೇಶದವಾದ ಬಂದರ್‌ ಅಬ್ಬಾಸ್‌ ಸಮೀಪ ರಿಕ್ಟರ್‌ ಮಾಪಕದಲ್ಲಿ…

1 hour ago

ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್‌ ವಿರುದ್ಧ ಬೆಂಗಳೂರಿನ ಕೆ.ಆರ್.‌ಪುರಂ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.…

4 hours ago

ಸಿಎಂ ಸಿದ್ದರಾಮಯ್ಯ ಅವರ ಇಂದಿನ ಮೈಸೂರು ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 11:40ಕ್ಕೆ ಮೈಸೂರು ಜಿಲ್ಲೆಯ ವರುಣದ…

4 hours ago

ಓದುಗರ ಪತ್ರ: ಯುದ್ಧ ವಿನಾಶಕಾರಿ!

ಯುದ್ಧ ವಿನಾಶಕಾರಿ! ನಿಲ್ಲುವಂತೆ ಕಾಣುವುದಿಲ್ಲ ಕೊಲ್ಲಿ ರಾಷ್ಟ್ರಗಳ ಸಂಘರ್ಷ! ಬದಲಿಗೆ ವಿಸ್ತರಿಸಿರುವುದು ನೋವು ಸಂಕಟದ ಸಂಗತಿ! ಗೆಲ್ಲಲಾಗದು ದ್ವೇಷದಲಿ ಯಾರನ್ನೂ ಪ್ರೀತಿ…

4 hours ago