Human fetus inside the womb
ಮಂಡ್ಯ: 2023ರ ಡಿಸೆಂಬರ್ನಲ್ಲಿ ರಾಜ್ಯ ಪೊಲೀಸ್ ಇಲಾಖೆ ಮಂಡ್ಯದಲ್ಲಿ ಅತಿದೊಡ್ಡ ಭ್ರೂಣಲಿಂಗ ಹತ್ಯೆ ಜಾಲವನ್ನು ಭೇದಿಸಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ಮಂಡ್ಯದಲ್ಲಿ ಮತ್ತೊಂದು ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಜಾಲವೊಂದು ಪತ್ತೆಯಾಗಿದೆ.
ಜಿಲ್ಲೆಯ ಪಾಂಡವಪುರ ಆರೋಗ್ಯ ಇಲಾಖೆಯ ಕಾರ್ಟರ್ಸ್ನಲ್ಲಿಯೇ ಭ್ರೂಣಲಿಂಗ ಹತ್ಯೆಗೆ ತಯಾರಿ ನಡೆಯುತ್ತಿದ್ದು, ಖಚಿತ ಮಾಹಿತಿ ಮೇರೆಗೆ ತಾಲೂಕು ಆರೋಗ್ಯಾಧಿಕಾರಿ ಡಾ. ಅರವಿಂದ್ ಹಾಗೂ ಪೊಲೀಸರ ತಂಡದ ಜಂಟಿ ಕಾರ್ಯಾಚರಣೆಯಿಂದ ಈ ಜಾಲ ಭೇದಿಸಿದ್ದಾರೆ.
ಮೈಸೂರು ಮೂಲದ ಮಹಿಳೆಯೊಬ್ಬರು ಗರ್ಭಪಾತಕ್ಕೆ ಆಗಮಿಸಿದ್ದ ವೇಳೆ ಕ್ವಾರ್ಟ್ರ್ಸ್ಗೆ ದಾಳಿ ನಡೆಸಿದ ಜಂಟಿ ತಂಡ ಮಹಿಳೆಯನ್ನು ರಕ್ಷಿಸಿದ್ದಾರೆ. ಈ ವೇಳೆ ಗರ್ಭಪಾತದ ಯೋತ್ರೋಪಕರಣಗಳು ಜತೆಗೆ ಈ ಕೃತ್ಯದಲ್ಲಿ ಭಾಗಿಯಾಗಿದ್ದ
ಪಾಂಡವಪುರ ತಾಲೂಕು ಆಸ್ಪತ್ರ ಆಂಬುಲೆನ್ಸ್ ಚಾಲಕ ಆನಂದ್, ಹೊರಗುತ್ತಿಗೆ ಡಿ ಗ್ರೂಪ್ ಸಿಬ್ಬಂದಿ ಅಶ್ವಿನಿ ಮತ್ತು ಮತ್ತೊಬ್ಬ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ಈ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…