ಮಂಡ್ಯ

ಹೆಣ್ಣು ಭ್ರೂಣ ಹತ್ಯೆ ಪ್ರಕರಣ:12 ಆರೋಪಿಗಳ ಬಂಧನ

ಮಂಡ್ಯ: ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳ ಆರೋಪಿಗಳನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸ್ ವಿಶೇಷ ತಂಡ ಯಶಸ್ವಿಯಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದ ಅಭಿಷೇಕ್,ವಿರೇಶ್‌ ಸೇರಿದಂತೆ ಪುಟ್ಟರಾಜು,ಕುಮಾರ್, ಶಾರದಮ್ಮ, ದಾಸೇಗೌಡ,ಲ್ಯಾಬ್ ಸತ್ಯ, lಮೀನಾ, ಮಲ್ಲಿಕಾರ್ಜುನ್, ಸೋಮಶೇಖರ್, ರತ್ನಮ್ಮ, ಪ್ರೇಮ ಆಲಿಯಾಸ್ ಪಾರ್ವತಿರವರನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಹೆಣ್ಣು ಭ್ರೂಣವನ್ನು ಅಕ್ರಮವಾಗಿ ಸ್ಕ್ಯಾನಿಂಗ್ ಮೂಲಕ ಪತ್ತೆ ಮಾಡುವುದು ಆಶಾ ಕಾರ್ಯಕರ್ತರು,ಖಾಸಗಿ ಲ್ಯಾಬ್ ಟೆಕ್ನಿಷಿಯನ್ಸ್‌ಗಳ ಮೂಲಕ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ಮಾಡುತ್ತಿರುವ ಬಗ್ಗೆ ಹಾಗೂ ಸಹಕರಿಸುತ್ತಿದ್ದವರ ಮೇಲೆ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು.

ಪಾಂಡವಪುರದ ಆರೋಗ್ಯ ಇಲಾಖೆ ವಸತಿಗೃಹದಲ್ಲಿ ಗ್ರೂಪ್ ಡಿ ಮಹಿಳಾ ನೌಕರರಾದ ಅಶ್ವಿನಿರವರ ಮನೆಯಲ್ಲಿ ನಡೆದಿದ್ದ ಪ್ರಕರಣದಲ್ಲಿ 19 ಆರೋಪಿಗಳ ಪೈಕಿ 12 ಆರೋಪಿಗಳನ್ನು ಬಂಧಿಸಲಾಗಿತ್ತು. ಇನ್ನುಳಿದ ಏಳು ಆರೋಪಿಗಳು ತಲೆಮರೆಸಿಕೊಂಡಿದ್ದರು, ಮೇಲುಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣದಲ್ಲಿ ಏಳು ಆರೋಪಿಗಳ ಪೈಕಿ ಮೂವರನ್ನು ಬಂಧಿಸಲಾಗಿತ್ತು ನಾಲ್ವರು ತಲೆಮರಸಿಕೊಂಡಿದ್ದರು. ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೆಣ್ಣು ಭ್ರೂಣ ತಪಾಸಣೆ ಮಾಡಲು ತೆರಳುತ್ತಿದ್ದಾಗ ದಾಳಿ ಮಾಡಿದ್ದ ಪ್ರಕರಣದಲ್ಲಿ ನಾಲ್ವರು ಆರೋಪಿಗಳ ಪೈಕಿ ಮೂವರನ್ನು ಬಂಧಿಸಲಾಗಿತ್ತು ಮತ್ತೋರ್ವ ನಾಪತ್ತೆಯಾಗಿ ದ್ದನು,ಅದೇ ರೀತಿ ಮೈಸೂರು ನಗರದ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಕರಣ ಹಾಗೂ ಬೆಂಗಳೂರು ನಗರದ ಬೈಯಪ್ಪನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು,
ಈ ಎಲ್ಲಾ ಪ್ರಕರಣಗಳಲ್ಲಿ ತಲೆ ಮರೆಸಿಕೊಂಡ ಆರೋಪಿಗಳ ಪತ್ತೆ ಸಂಬಂಧ ಪೊಲೀಸರ ವಿಶೇಷ ತಂಡವನ್ನು ರಚನೆ ಮಾಡಲಾಗಿತ್ತು. ತಂಡ ಕಾರ್ಯಾಚರಣೆ ನಡೆಸಿ ಪ್ರಮುಖ ಆರೋಪಿಗಳಾದ ಅಭಿಷೇಕ್ ಮತ್ತು ವಿರೇಶ್‌ ರನ್ನು ಬಂಧಿಸಿ ವಿಚಾರಣೆ ನಡೆಸಿದ್ದರಿಂದ ಪ್ರಕರಣದಲ್ಲಿ ಭಾಗಿಯಾಗಿರುವ ಇತರ 10 ಆರೋಪಿಗಳಾದ ಪುಟ್ಟರಾಜು,ಕುಮಾರ್,ಶಾರದಮ್ಮ, ದಾಸೇಗೌಡ, ಲ್ಯಾಬ್ ಸತ್ಯ, ಮೀನಾ, ಮಲ್ಲಿಕಾರ್ಜುನ್, ಸೋಮಶೇಖರ್, ರತ್ನಮ್ಮ, ಪ್ರೇಮ ಆಲಿಯಾಸ್ ಪಾರ್ವತಿರನ್ನ ಬಂಧಿಸಲಾಗಿದೆ ಎಂದು ತಿಳಿಸಿದರು.

ಬಂಧಿತರಿಂದ ಅಕ್ರಮವಾಗಿ ಕೃತ್ಯಕ್ಕೆ ಉಪಯೋಗಿಸಿದ ಎರಡು ಸ್ಕ್ಯಾನಿಂಗ್ ಉಪಕರಣ ಮಾರುತಿ ಎಸ್-ಕ್ರಾಸ್,ಮಾರುತಿ ಸಿಲಾರಿಯೋ ಮತ್ತು ಮಾರುತಿ ಓಮ್ಮಿ ಕಾರು ಹಾಗೂ ಮೂರು ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಅದೇ ರೀತಿ ಪ್ರಕರಣಗಳಲ್ಲಿ ಭಾಗಿಯಾಗಿರುವ ಕೆಲವರು ತಲೆ ಮರೆಸಿಕೊಂಡಿದ್ದು, ಇವರ ಪತ್ತೆ ಕಾರ್ಯಾಚರಣೆ ಮುಂದುವರೆದಿದೆ ಎಂದರು.

ಪತ್ತೆ ಕಾರ್ಯಾಚರಣೆಯಲ್ಲಿ ಭಾಗಿಯಾದ ಪೊಲೀಸ್ ಅಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿ ತಂಡಕ್ಕೆ ಇಲಾಖೆಯಿಂದ ಪ್ರಶಂಸನಾ ಪತ್ರ ಹಾಗೂ ನಗದು ಬಹುಮಾನ ಘೋಷಣೆ ಮಾಡಲಾಗಿದೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

5 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

6 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

7 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

11 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

12 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

18 hours ago