ಮಂಡ್ಯ

ಸಿಎಂ ಸಿದ್ದರಾಮಯ್ಯ ಮೇಲೆ ಸುಳ್ಳು ಆರೋಪ ಮುಂದುವರೆದರೆ ಉಗ್ರ ಹೋರಾಟ: ಶುಭದಾಯಿನಿ ಎಚ್ಚರಿಕೆ

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಪಾರದರ್ಶಕವಾಗಿ ಆಡಳಿತ ನಡೆಸುತ್ತಿದ್ದು ಅವರ ಏಳಿಗೆಯನ್ನು ಸಹಿಸದೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದು ಇದೇ ರೀತಿಸುಳ್ಳು ಆರೋಪ ಮಾಡುವುದನ್ನು ಮುಂದುವರೆದರೆ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ರಾಜ್ಯದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ರಾಜ್ಯ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಶುಭದಾಯಿನಿ ಎಚ್ಚರಿಸಿದರು.

ಬುಧವಾರ ಮಂಡ್ಯದ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾರದರ್ಶಕವಾಗಿ ಆಡಳಿತ ನಡೆಸುತ್ತಿದ್ದಾರೆ .ಅವರ 40 ವರ್ಷಗಳ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲದಂತೆ ಪ್ರಾಮಾಣಿಕವಾಗಿ ನಡೆದುಕೊಂಡಿದ್ದಾರೆ ಎಂದರು.

ಮೈಸೂರು ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭ್ರಷ್ಟರು ಎಂಬಂತೆ ಬಿಂಬಿಸಲಾಗುತ್ತಿದೆ . ಮುಡಾ ಹಗರಣ ನಡೆದಿರುವುದು ಬಿಜೆಪಿ ಅಧಿಕಾರದಲ್ಲಿದ್ದ ಅವಧಿಯಲ್ಲಿ. ಆದರೆ ಈ ಆರೋಪವನ್ನು ಸಿದ್ದರಾಮಯ್ಯ ಅವರ ಮೇಲೆ ಹೊರಿಸಲಾಗುತ್ತಿದೆ ಎಂದು ಆಪಾದಿಸಿದರು .

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಜ್ಯದಲ್ಲಿ ಮಾಡುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ಅವರನ್ನು ಭ್ರಷ್ಟರು ಎಂದು ಬಿಂಬಿಸಲಾಗುತ್ತಿದೆ. ರಾಜ್ಯಪಾಲರ ಮೂಲಕ ಅಧಿಕಾರ ದುರುಪಯೋಗ ಮಾಡಿಕೊಂಡು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸಲಾಗುತ್ತಿದೆ ಎಂದು ದೂರಿದರು.

ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆಯಿಂದ ಜನರಿಗೆ ಯಾವುದೇ ರೀತಿಯ ಅನುಕೂಲ ಆಗುವುದಿಲ್ಲ .ಆದರೆ ರಾಜಕೀಯಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು .

ಕಾಂಗ್ರೆಸ್ ಸರ್ಕಾರ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸುತ್ತದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ತಿಳಿಸಿದ ಅವರು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ಕೋಟ್ಯಾಂತರ ಕಾರ್ಯಕರ್ತರ ಬೆಂಬಲವಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮುಡಾ ಮಾಜಿ ಅಧ್ಯಕ್ಷೆ ಹನ್ಸಿಯಾಬಾನು, ಗ್ರಾಮ ಪಂಚಾಯಿತಿ ಸದಸ್ಯ ಶಶಿಕಲಾ, ಸೋನಿಯಾ ಬ್ರಿಗೇಡ್ ನ ವೀಣಾ ಶಂಕರ್, ಶಕುಂತಲಾ ,ಜ್ಯೋತಿ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

5 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

9 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

9 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

9 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

9 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

9 hours ago