ಮಂಡ್ಯ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಸಬಲೀಕರಣಕ್ಕೆ ನೆರವಾಗಿವೆ ಎಂದು ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದರು.
ತಾಲ್ಲೂಕಿನ ದುದ್ದ ಗ್ರಾಮದಲ್ಲಿ ಏರ್ಪಡಿಸಿದ್ದ ದುದ್ದ ಹೋಬಳಿ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನಗಳ ಕುರಿತ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸರ್ಕಾರದ ಐದು ಗ್ಯಾರಂಟಿಗಳು ಪ್ರತಿ ಕುಟುಂಬಕ್ಕೆ ತಲುಪುವ ಮೂಲಕ ಆರ್ಥಿಕ ಶಕ್ತಿ ನೀಡಿವೆ ಎಂದರು.
ಹಳ್ಳಿಗಳಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾಗಿ ಸಾಮಾನ್ಯ ವ್ಯಕ್ತಿಗಳ ಶೋಷಣೆ ನಡೆಯುತ್ತಿದೆ. ಮಹಿಳೆಯರು ತಮ್ಮ ವ್ಯಾಪ್ತಿಯಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ನಿಗ್ರಹಿಸಬೇಕು ಎಂದು ಸಲಹೆ ನೀಡಿದರು.
ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯ ಎಚ್.ಎಂ.ಉದಯ್ಕುಮಾರ್ ಮಾತನಾಡಿ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ಕೈ ಜೋಡಿಸಬೇಕು. ಗ್ರಾ.ಪಂ. ಮಟ್ಟದಲ್ಲಿ ತಾಂತ್ರಿಕ ದೋಷಗಳನ್ನು ಸರಿಪಡಿಸಿ ಅರ್ಹ ಫಲಾನುಭವಿಗಳಗೆ ಯೋಜನೆಗಳು ಸಿಗುವಂತೆ ಕಾರ್ಯ ನಿರ್ವಹಿಸಬೇಕೆಂದು ತಿಳಿಸಿದರು.
ಅಧಿಕಾರಿಗಳ ಸಹಕಾರದಿಂದ ದುದ್ದ ಹೋಬಳಿಯ 11 ಗ್ರಾಮ ಪಂಚಾಯಿತಿಗಳಲ್ಲಿ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಕುರಿತು ಸಭೆ ನಡೆಸಿ,ಇದೀಗ ಗ್ಯಾರಂಟಿ ಯೋಜನೆಗಳ ಸಮಾವೇಶ ಮಾಡುತ್ತಿದ್ದೇವೆ ಎಂದು ತಿಳಿಸಿದರು.ಇದೇ ವೇಳೆ ಸಭೆಗೆ ಆಗಮಿಸಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಸನ್ಮಾನಿಸಲಾಯಿತು.
ಈ ವೇಳೆ ಕೆ.ಎಸ್.ಪುಟ್ಟಣ್ಣಯ್ಯ ಫೌಂಡೇಷನ್ ವತಿಯಿಂದ ಮಹಿಳೆಯರಿಗೆ ದೊರೆಯುವ ಸಾಲ ಸೌಲಭ್ಯದ ಬಗ್ಗೆ ಸ್ಮಿತಾಪುಟ್ಟಣ್ಣಯ್ಯ ತಿಳಿಸಿದರು.
ಸಮಾವೇಶದಲ್ಲಿ ಶಿಶು ಅಭಿವೃದ್ಧಿ ಯೋಜನಾಽಕಾರಿ ಕುಮಾರಸ್ವಾಮಿ, ಟಿಪಿಒ ವೆಂಕಟರಾಮ್, ಚಂಪಕಮಾಲಿನಿ, ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಹೊಸದಿಲ್ಲಿ : 77ನೇ ಗಣರಾಜ್ಯೋತ್ಸವದ ಅಂಗವಾಗಿ ದಿಲ್ಲಿಯ ಕರ್ತವ್ಯ ಪಥದಲ್ಲಿ ಭಾರತವು ಸಾಂಸ್ಕೃತಿಕ ವೈವಿಧ್ಯತೆಯೊಂದಿಗೆ ದೇಶದ ಸೇನಾ ಶಕ್ತಿ ಪ್ರದರ್ಶನ…
ಕಲ್ಕತ್ತಾ : ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು, ನ್ಯಾಯ, ಸ್ವಾತಂತ್ರ್ಯ,…
ಉಡುಪಿ : ಐಲ್ಯಾಂಡ್ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ…
ಸೋಮವಾರಪೇಟೆ : ಸಮೀಪದ ಕಾಜೂರು ಗ್ರಾಮದ ಪುಷ್ಪ ಎಂಬುವವರ ಮನೆಗೆ ನೆನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಮನೆ ಸಂಪೂರ್ಣ…
ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ…
ಬೆಂಗಳೂರು : ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ನಗರದ ಮಾಣೆಕ್ಷಾ ಪರೇಡ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ…