ಮಂಡ್ಯ: ದುಷ್ಕರ್ಮಿಗಳು ಹಚ್ಚಿದ ಬೆಂಕಿಯಿಂದಾಗಿ ನೂರಾರು ಎಕರೆ ಅರಣ್ಯ ಪ್ರದೇಶ ಸುಟ್ಟು ಬೂದಿಯಾಗುತ್ತಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ ಬಳಿಯಿರುವ ಶಿಂಷಾ ಅರಣ್ಯ ಪ್ರದೇಶದಲ್ಲಿ ಜರುಗಿದೆ.
ಶಿಂಷಾ ಅರಣ್ಯಕ್ಕೆ ಸೇರಿದ ಸೊಪ್ಪಿನ ಗುಡ್ಡೆ ಪ್ರದೇಶದಲ್ಲಿ ಸಂಜೆ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡು ನೂರಾರು ಎಕರೆ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಈ ಪ್ರದೇಶದಲ್ಲಿ ಬೆಳೆದು ನಿಂತಿದ್ದ ಅಪಾರ ಪ್ರಮಾಣದ ಮರಗಿಡಗಳು ಬಹು ಉಪಯೋಗಿ ಸಸ್ಯ ಸಂಕುಲ ಆಹುತಿಯಾಗಿದೆ. ಜೊತೆಗೆ ಈ ಪ್ರದೇಶದಲ್ಲಿ ವಾಸ ಮಾಡುತ್ತಿದ್ದ ಪ್ರಾಣಿಗಳು ಹಾಗೂ ಅನೇಕ ಜಾತಿಯ ಪಕ್ಷಿಗಳು ಮೃತಪಟ್ಟಿವೆ. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ಪ್ರಾಣಿಪ್ರಿಯರು ಕಾಡಿಗೆ ಬೆಂಕಿ ಹಚ್ಚಿರುವ ಆರೋಪಿಗಳು ಹುಡುಕಿ ಅವರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…