ನಾಗಮಂಗಲ: ತಾಲೂಕಿನ ಸಾತೇನಹಳ್ಳಿ ಗ್ರಾಮದ ಪ್ರಗತಿಪರ ರೈತ ಕುಮಾರಸ್ವಾಮಿ ಅವರ ತೋಟಕ್ಕೆ ಶನಿವಾರ ದುಷ್ಕರ್ಮಿಗಳು ಬೆಂಕಿ ಹಾಕಿದ ಪರಿಣಾಮ ಸಾವಿರಾರೂ ಗಿಡಗಳು ಹಾಗೂ ಲಕ್ಷಾಂತರ ರೂ ಮೌಲ್ಯದ ಹನಿ ನೀರಾವರಿ ಪೈಪ್ಗಳು ನಾಶವಾಗಿದೆ.
ಗ್ರಾಮದಿಂದ ಸುಮಾರು ಒಂದು ಕಿ.ಮೀ ದೂರದಲ್ಲಿ ಕುಮಾರಸ್ವಾಮಿ ಅವರ ಜಮೀನಿದೆ. ಒಂದು ಮುಕ್ಕಾಲು ಎಕರೆ ಭೂಮಿಯಲ್ಲಿ 100 ತೆಂಗಿನ ಮರಗಳಿವೆ. ಈ ಪೈಕಿ 25 ರಿಂದ 30 ಮರ ಐವತ್ತೂ ಹೆಚ್ಚು ವರ್ಷವಾಗಿದೆ. ಇದಲ್ಲದೆ ಒಂದು ಸಾವಿರ ಬಾಳೆ ಗಿಡ ಹಾಗೂ 200 ಅಡಿಕೆ ಮರಗಳು ಬೆಳೆಯುತ್ತಿದ್ದವು. ಬೇಸಾಯಕ್ಕೆಂದು ಅಂದಾಜು ಎರಡೂವರೆ ಲಕ್ಷ ರೂ ಖರ್ಚು ಮಾಡಿ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಂಡಿದ್ದರು.
ಬರಗಾಲದ ನಡುವೆಯೂ ಬೋರ್ವೆಲ್ನಲ್ಲಿ ನೀರಿನ ಕೊರತೆ ಇರಲಿಲ್ಲ. ಪ್ರತಿದಿನ ಹನಿ ನೀರಾವರಿ ಪದ್ಧತಿ ಮೂಲಕ ನೀರು ಹಾಯಿಸುತ್ತಿದ್ದರು. ಗಿಡ ಮತ್ತು ಮರಗಳು ಕೂಡ ಚೆನ್ನಾಗಿ ಬೆಳೆಯುತ್ತಿದ್ದವು. ವಿಶೇಷವೆಂದರೆ ಇವರು ಜಮೀನಿನ ಉಳುಮೆ ಮಾಡುವ ಬದಲು ಕಳೆ ಸಹಿತ ಗಿಡಗಳನ್ನು ಭೂಮಿಯಲ್ಲಿಯೇ ಕೊಳೆಸಿ ಗೊಬ್ಬರ ಮಾಡುತ್ತಿದ್ದರು. ಶನಿವಾರ ಮಧ್ಯಾಹ್ನ ಯಾರೋ ದುಷ್ಕರ್ಮಿಗಳು ತೋಟಕ್ಕೆ ಬೆಂಕಿ ಹಾಕಿದ್ದಾರೆ. ಪರಿಣಾಮ ಕೆಲವೊತ್ತಿನಲ್ಲಿಯೇ ಬೆಂಕಿಯ ಕೆನ್ನಾಲಗೆ ತೋಟವನ್ನು ಆವರಿಸಿಕೊಂಡು ಗಿಡ, ಮರ ಹಾಗೂ ಪೈಪ್ಗಳು ಸುಟ್ಟು ಹೋಗಿವೆ.
ಸಂಜೆ ವೇಳೆಗೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಕುಮಾರಸ್ವಾಮಿ ಸ್ಥಳಕ್ಕೆ ಹೋಗಿದ್ದಾರೆ. ಅಷ್ಟರಲ್ಲಾಗಲೇ ಎಲ್ಲವೂ ನಾಶವಾಗಿತ್ತು.
ಕೃಷಿಯಲ್ಲಿ ಹೊಸ ವಿಧಾನ ಅಳವಡಿಸಿಕೊಂಡು ಮಾದರಿಯಾಗಿದ್ದ ಕುಮಾರಸ್ವಾಮಿ ಅವರು ಜಿಲ್ಲೆ ಮಾತ್ರವಲ್ಲದೆ ಹೊರ ಜಿಲ್ಲೆಗೆ ತೆರಳಿ ರೈತರಿಗೆ ಸಲಹೆ ನೀಡುತ್ತಿದ್ದರು. ತಮ್ಮ ಜಮೀನಿಗೆ ಬಂದವರಿಗೂ ಅಗತ್ಯ ಮಾಹಿತಿ ಕೊಡುತ್ತಿದ್ದರು. ನೆಮ್ಮದಿ ಜೀವನ ಕಟ್ಟಿಕೊಂಡಿರುವ ಕುಮಾರಸ್ವಾಮಿ ಕುಟುಂಬಕ್ಕೆ ಬೆಂಕಿ ಅವಘಡ ದಿಕ್ಕು ತೋಚದಂತಾಗಿದೆ.
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…