ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು ಕರಕಲಾದ ಘಟನೆ ಹಲಗೂರಿನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಹಲಗೂರು ಕೆರೆ ಕೋಡಿ ಅಂಚಿನಲ್ಲಿರುವ ಪಟ್ಟಲದಮ್ಮ ದೇವಸ್ಥಾನದ ಹಿಂಭಾಗದ ಭೂ ಪ್ರದೇಶಕ್ಕೆ ಬೆಂಕಿ ತಗುಲಿದ್ದು, ಅಪಾರ ಪ್ರಮಾಣದ ಮರ ಗಿಡಗಳು ಮತ್ತು ಸಮೀಪದ ಜಮೀನಿನಲ್ಲಿ ಬೆಳೆದಿದ್ದ ಸೌತೆಕಾಯಿ ಬೆಳೆ ಬೆಂಕಿಗೆ ಆಹುತಿಯಾಗಿವೆ. ಕಸದ ರಾಶಿಗೆ ಬೆಂಕಿ ಹಚ್ಚಿದ ಪರಿಣಾಮ ಬೆಂಕಿ ನಿಯಂತ್ರಣ ತಪ್ಪಿ ವ್ಯಾಪಕವಾಗಿ ಹರಡಿದೆ. ನಂತರ ವಾಸು ಬಾರ್ ಹಿಂಭಾಗದ ಭೀಮಾ ನದಿ ಬಫರ್ ಜೋನ್ ಹಾಗೂ ಚೌಕಿ ಮಠದವರೆಗೆ ಹರಡಿಕೊಂಡಿದ್ದ ಬೆಂಕಿಯನ್ನು ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾದರು.
ಹಲಗೂರು ಬೃಹದಾಕಾರವಾಗಿ ಬೆಳೆಯುತ್ತಿದ್ದು, ಅಗ್ನಿ ಅವಘಡಗಳು ಸಂಭವಿಸಿದರೆ ಮಳವಳ್ಳಿ ಪಟ್ಟಣದಿಂದ ಅಗ್ನಿ ಶಾಮಕ ವಾಹನಗಳು ಅವಘಡ ಸ್ಥಳಕ್ಕೆ ಬರುವಷ್ಟರಲ್ಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿರುತ್ತದೆ. ಬಸವನಬೆಟ್ಟ, ಮುತ್ತತ್ತಿ ಅರಣ್ಯ ಪ್ರದೇಶಗಳಿದ್ದು ಹಲಗೂರಿನಲ್ಲಿ ಅಗ್ನಿ ಶಾಮಕ ಠಾಣೆ ತೆರೆಯಲು ಸರ್ಕಾರ ಕ್ರಮವಹಿಸಬೇಕು ಎಂದು ಮುಖಂಡರಾದ ಬಾಳೆಹೊನ್ನಿಗ ಕುಮಾರ್ ಆಗ್ರಹಿಸಿದರು.
ಬೇಸಿಗೆ ಆರಂಭಲ್ಲಿದ್ದು, ಒಣಗಿದ ಗಿಡ-ಗಂಟಿಗಳು ಮತ್ತು ತರಗೆಲೆಗಳಿಗೆ ಬೆಂಕಿ ತಗುಲಿದರೆ ವೇಗವಾಗಿ ಹರಡುವ ಸಾಧ್ಯತೆ ಇದೆ. ಈ ರೀತಿ ಬೆಂಕಿ ಹಚ್ಚುವುದು ಭಾರೀ ನಷ್ಟಕ್ಕೆ ಕಾರಣವಾಗುತ್ತದೆ. ಸಾರ್ವಜನಿಕರು ಎಚ್ಚರ ವಹಿಸಬೇಕು ಎಂದು ಅಗ್ನಿಶಾಮಕ ಠಾಣಾಧಿಕಾರಿ ಹೇಮಂತ್ ಕುಮಾರ್ ತಿಳಿಸಿದರು.
ಕಾರ್ಯಾಚರಣೆಯಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿ ಸಿದ್ದರಾಮಯ್ಯ, ಮೋಹನ್ ಕುಮಾರ್, ಗಗನ್ ಪಾಲ್ಗೊಂಡಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆ ಭಾರತೀಯ ನಾಗರಿಕರು ಒಗ್ಗಟ್ಟಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋವಿ ಸಮುದಾಯದ ಕಾಲೋನಿಗೆ…
ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಘಟಕದ 46ನೇ ತಂಡದ ಸಿವಿಲ್ ಪೊಲೀಸ್…
ಅಮೇರಿಕಾದಲ್ಲಿ ಡೊನಾಲ್ಡ್ ಟ್ರಂಪ್ ವಿರುದ್ಧವೇ ಭುಗಿಲೆದ್ದ ಆಕ್ರೋಶ 80 ಲಕ್ಷ ಜನರಿಂದ ನೋ ಕಿಂಗ್ಸ್ ಚಳುವಳಿ ಟ್ರಂಪ್ ನೀತಿ ವಿರೋಧಿಸಿ…