ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು ಕರಕಲಾದ ಘಟನೆ ಹಲಗೂರಿನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಹಲಗೂರು ಕೆರೆ ಕೋಡಿ ಅಂಚಿನಲ್ಲಿರುವ ಪಟ್ಟಲದಮ್ಮ ದೇವಸ್ಥಾನದ ಹಿಂಭಾಗದ ಭೂ ಪ್ರದೇಶಕ್ಕೆ ಬೆಂಕಿ ತಗುಲಿದ್ದು, ಅಪಾರ ಪ್ರಮಾಣದ ಮರ ಗಿಡಗಳು ಮತ್ತು ಸಮೀಪದ ಜಮೀನಿನಲ್ಲಿ ಬೆಳೆದಿದ್ದ ಸೌತೆಕಾಯಿ ಬೆಳೆ ಬೆಂಕಿಗೆ ಆಹುತಿಯಾಗಿವೆ. ಕಸದ ರಾಶಿಗೆ ಬೆಂಕಿ ಹಚ್ಚಿದ ಪರಿಣಾಮ ಬೆಂಕಿ ನಿಯಂತ್ರಣ ತಪ್ಪಿ ವ್ಯಾಪಕವಾಗಿ ಹರಡಿದೆ. ನಂತರ ವಾಸು ಬಾರ್ ಹಿಂಭಾಗದ ಭೀಮಾ ನದಿ ಬಫರ್ ಜೋನ್ ಹಾಗೂ ಚೌಕಿ ಮಠದವರೆಗೆ ಹರಡಿಕೊಂಡಿದ್ದ ಬೆಂಕಿಯನ್ನು ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾದರು.
ಹಲಗೂರು ಬೃಹದಾಕಾರವಾಗಿ ಬೆಳೆಯುತ್ತಿದ್ದು, ಅಗ್ನಿ ಅವಘಡಗಳು ಸಂಭವಿಸಿದರೆ ಮಳವಳ್ಳಿ ಪಟ್ಟಣದಿಂದ ಅಗ್ನಿ ಶಾಮಕ ವಾಹನಗಳು ಅವಘಡ ಸ್ಥಳಕ್ಕೆ ಬರುವಷ್ಟರಲ್ಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿರುತ್ತದೆ. ಬಸವನಬೆಟ್ಟ, ಮುತ್ತತ್ತಿ ಅರಣ್ಯ ಪ್ರದೇಶಗಳಿದ್ದು ಹಲಗೂರಿನಲ್ಲಿ ಅಗ್ನಿ ಶಾಮಕ ಠಾಣೆ ತೆರೆಯಲು ಸರ್ಕಾರ ಕ್ರಮವಹಿಸಬೇಕು ಎಂದು ಮುಖಂಡರಾದ ಬಾಳೆಹೊನ್ನಿಗ ಕುಮಾರ್ ಆಗ್ರಹಿಸಿದರು.
ಬೇಸಿಗೆ ಆರಂಭಲ್ಲಿದ್ದು, ಒಣಗಿದ ಗಿಡ-ಗಂಟಿಗಳು ಮತ್ತು ತರಗೆಲೆಗಳಿಗೆ ಬೆಂಕಿ ತಗುಲಿದರೆ ವೇಗವಾಗಿ ಹರಡುವ ಸಾಧ್ಯತೆ ಇದೆ. ಈ ರೀತಿ ಬೆಂಕಿ ಹಚ್ಚುವುದು ಭಾರೀ ನಷ್ಟಕ್ಕೆ ಕಾರಣವಾಗುತ್ತದೆ. ಸಾರ್ವಜನಿಕರು ಎಚ್ಚರ ವಹಿಸಬೇಕು ಎಂದು ಅಗ್ನಿಶಾಮಕ ಠಾಣಾಧಿಕಾರಿ ಹೇಮಂತ್ ಕುಮಾರ್ ತಿಳಿಸಿದರು.
ಕಾರ್ಯಾಚರಣೆಯಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿ ಸಿದ್ದರಾಮಯ್ಯ, ಮೋಹನ್ ಕುಮಾರ್, ಗಗನ್ ಪಾಲ್ಗೊಂಡಿದ್ದರು.
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…