ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಸಾವಿನ ನರ್ತನದ ನಡುವೆಯೇ ಝೀಕಾ ವೈರಸ್ ಕಾಟ ಶುರುವಾಗಿದ್ದು, ಇಂದು ಮೊದಲ ಸಾವಾಗಿದೆ.
ಶಿವಮೊಗ್ಗದಲ್ಲಿ 74 ವರ್ಷದ ವೃದ್ಧರೋರ್ವರು ಝೀಕಾ ವೈರಸ್ ಗುಣಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಬಳಿಕ ವೃದ್ಧನನ್ನು ಮನೆಗೆ ಕಳುಹಿಸಲಾಗಿತ್ತು.
ಶಿವಮೊಗ್ಗದ ವ್ಯಕ್ತಿ ಕಳೆದ ಜುಲೈ.5 ರಂದೇ ಸಾವನ್ನಪ್ಪಿದ್ದರು. ಝೀಕಾ ವೈರಸ್ಗೆ ಸಾವನ್ನಪ್ಪಿದ ಶಂಕೆ ವ್ಯಕ್ತಪಡಿಸಿದ್ದ ಆರೋಗ್ಯ ಇಲಾಖೆ ಸ್ಯಾಂಪಲ್ ಕಲೆ ಹಾಕಿತ್ತು. ಝೀಕಾ ವೈರಸ್ನಿಂದಲೇ ಸಾವನ್ನಪ್ಪಿರುವುದು ವರದಿಯಲ್ಲಿ ಪತ್ತೆಯಾಗಿದೆ.
ಶಿವಮೊಗ್ಗ ಗಾಂಧಿ ನಗರದ 74 ವರ್ಷದ ವೃದ್ಧ ಕಳೆದ ಜೂನ್ 19 ರಂದು ತೀವರ ಜ್ವರದಿಂದ ಬಳಲುತ್ತಿದ್ದರು. ಜೂನ್.21ರಂದು ಝೀಕಾ ವೈರಸ್ ಪತ್ತೆ ಆಗಿತ್ತು. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ವೃದ್ಧನಿಗೆ ಚಿಕಿತ್ಸೆ ನೀಡಲಾಗಿತ್ತು. ಕುಟುಂಬಸ್ಥರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಮನೆಗೆ ಕರೆದುಕೊಂಡು ಹೋಗಿದ್ದರು. ಜ್ವರ ಮಾತ್ರವಲ್ಲದೇ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ವೃದ್ಧ ಝೀಕಾ ವೈರಸ್ಗೆ ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ್ದಾರೆ.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…