ಮಂಡ್ಯ

ಮಂಡ್ಯ ನಗರ ಅಭಿವೃದ್ಧಿಗೆ ಮೊದಲ ಆದ್ಯತೆ: ಅಧ್ಯಕ್ಷ ಪ್ರಕಾಶ್‌ ಭರವಸೆ

ಮಂಡ್ಯ: ಸೆಪ್ಟೆಂಬರ್ 5 ರಂದು ನಗರ ಸಭೆ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡುವುದಾಗಿ ನಗರಸಭೆ ಅಧ್ಯಕ್ಷ ಎಂವಿ ಪ್ರಕಾಶ್ ತಿಳಿಸಿದರು.

ನಗರದ ಪರ್ತಕರ್ತರ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಂಡ್ಯ ನಗರದಲ್ಲಿ ಸ್ವಚ್ಛತೆ, ರಸ್ತೆ, ಆಟೋ ಶೆಟ್ಟರ್ , ಬಸ್ ಶೆಲ್ಟರ್ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡುವುದಾಗಿ ಭರವಸೆ ನೀಡಿದರು.

ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಮುಗಿದಿದೆ .ಈಗ ರಾಜಕೀಯ ಮಾಡುವ ಸಮಯವಲ್ಲ .ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುವುದಾಗಿ ತಿಳಿಸಿದರು. ಮಂಡ್ಯ ನಗರದ ವಾಣಿ ವಿಲಾಸ ರಸ್ತೆ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಬೀದಿ ಬದಿಯಲ್ಲಿ ವ್ಯಾಪಾರ ವಹಿವಾಟು ನಡೆಯುತ್ತಿದ್ದು ಹಾಗಾಗಿ ಬೀದಿಬದಿ ವ್ಯಾಪಾರಿಗಳಿಗೂ ಶೆಲ್ಟರ್ ನಿರ್ಮಿಸುವ ಗುರಿ ನಮ್ಮದಾಗಿದೆ ಎಂದರು.

ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಅವರು ,ಕೇಂದ್ರದ ಅನುದಾನ ಒದಗಿಸುವ ಭರವಸೆ ನೀಡಿದ್ದಾರೆ. ಹಾಗೆಯೇ ಸ್ಥಳೀಯ ಶಾಸಕ ಗಣಿಗ ರವಿಕುಮಾರ್ ಅವರು ಮಂಡ್ಯ ನಗರದ ಅಭಿವೃದ್ಧಿಗೆ ಸಾತ್ ನೀಡುವುದಾಗಿ ಹೇಳಿದ್ದಾರೆ ಎಂದು ಹೇಳಿದರು.

ನಗರಸಭೆಯಲ್ಲಿ ಇಂಜಿನಿಯರಿಂಗ್, ಆರೋಗ್ಯ ವಿಭಾಗ ಸೇರಿದಂತೆ ಕೆಲವು ವಿಭಾಗದಲ್ಲಿ ಸಿಬ್ಬಂದಿಗಳ ಕೊರತೆ ಇದೆ. ಹಾಗಾಗಿ ತುರ್ತಾಗಿ ಈ ಬಗ್ಗೆ ಗಮನ ಹರಿಸುವುದಾಗಿ ತಿಳಿಸಿದರು.

ಉಪಾಧ್ಯಕ್ಷ ಅರುಣ್ ಕುಮಾರ್ ಮಾತನಾಡಿ ,ನಾಗೇಶ್ ಅವರಿಗೆ ಆಡಳಿತದ ಬಗ್ಗೆ ಗೊತ್ತಿದೆ. ಅನುಭವಿಯಾಗಿದ್ದಾರೆ. ನಗರದ ಅಭಿವೃದ್ಧಿ ಬಗ್ಗೆ ಪ್ಲಾನ್ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.

ನಾನು ಅಧ್ಯಕ್ಷನಾಗಿದ್ದ ಸಂದರ್ಭದಲ್ಲೇ ಜನಸಂಖ್ಯೆ ಕಡಿಮೆ ಇತ್ತು .ಈಗ ಜಾಸ್ತಿಯಾಗಿದೆ. ನಗರವು ಬೆಳೆದಿದೆ. ಎಲ್ಲರ ಸಹಕಾರದಿಂದ ಕೆಲಸ ಮಾಡುವುದಾಗಿ ತಿಳಿಸಿದರು. ರಾಜೇಂದ್ರ ಪ್ರಸಾದ್ ರಸ್ತೆ, ವಿನೋಬಾ ರಸ್ತೆ ಒನ್ ವೇ ರಸ್ತೆಯಾಗಿದೆ .ಹಾಗೆಯೇ ವಿವಿ ರಸ್ತೆಯಲ್ಲಿಯೂ ಒನ್ ವೇ ಮಾಡಿದರೆ ಸುಗಮ ಸಂಚಾರಕ್ಕೆ ಅನುಕೂಲವಾಗುತ್ತದೆ ಎಂದರು. ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಅನುದಾನ ನೀಡುವ ಬಗ್ಗೆ ಭರವಸೆ ಕೊಟ್ಟಿದ್ದಾರೆ .ಎಲ್ಲರ ಸಹಕಾರದೊಂದಿಗೆ ಕೆಲಸ ಮಾಡುತ್ತೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ನಗರಸಭೆ ಸದಸ್ಯ ರವಿ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…

9 hours ago

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

13 hours ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

13 hours ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

13 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

14 hours ago