ಮಂಡ್ಯ

ನಾಗಮಂಗಲದಲ್ಲಿ ಫ್ಲೆಕ್ಸ್‌ ರಾಜಕೀಯ: ಜೆಡಿಎಸ್ ಮುಖಂಡನ ಕಟೌಟ್ ತೆರವಿಗೆ ಕಾರ್ಯಕರ್ತರ ಆಕ್ರೋಶ

ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಫ್ಲೆಕ್ಸ್ ಪಾಲಿಟಿಕ್ಸ್ ಬೆಳಕಿಗೆ ಬಂದಿದ್ದು, ರಾತ್ರೋರಾತ್ರಿ ಜೆಡಿಎಸ್ ಕಟೌಟ್ ತೆರವಿಗೆ ಮುಂದಾಗಿದ್ದ ಪುರಸಭೆ ಸಿಬ್ಬಂದಿ ವಿರುದ್ಧ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ನಾಯಕರ ಕುಮ್ಮಕ್ಕಿನಿಂದ ಫ್ಲೆಕ್ಸ್ ತೆರವು ಎಂದು ಆರೋಪ ಮಾಡಲಾಗಿದ್ದು, ಮಧ್ಯರಾತ್ರಿ ಸಿಬ್ಬಂದಿಗಳ ಜೊತೆ ಜೆಡಿಎಸ್ ಕಾರ್ಯಕರ್ತರು ಜಟಾಪಟಿಗೆ ಇಳಿದಿದ್ದಾರೆ.

ನಾಗಮಂಗಲಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗಮಿಸುತ್ತಿದ್ದಾರೆ. ಜನತಾದಳ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ನಿಖಿಲ್‌ಗೆ ಸ್ವಾಗತ ಕೋರಿ ಕಾರ್ಯಕರ್ತರು ಪಟ್ಟಣದಲ್ಲಿ ಕಟೌಟ್ ಅಳವಡಿಸಿದ್ದಾರೆ.

ಆದರೆ ರಾತ್ರೋರಾತ್ರಿ ಪುರಸಭೆ ಸಿಬ್ಬಂದಿಗಳು ಫ್ಲೆಕ್ಸ್ ತೆರವುಗೊಳಿಸಲು ಮುಂದಾಗಿದ್ದು, ಅಧಿಕಾರಿಗಳ ನಿಲುವಿಗೆ ಜೆಡಿಎಸ್ ಕಾರ್ಯಕರ್ತರು ಕೆರಳಿ ಕೆಂಡವಾಗಿದ್ದಾರೆ.

ನಿಖಿಲ್ ನಾಗಮಂಗಲಕ್ಕೆ ಬರುತ್ತಿರುವುದನ್ನು ಯಾರಿಗೂ ಸಹಿಸಲು ಆಗುತ್ತಿಲ್ಲ. ಕಾಂಗ್ರೆಸ್ ನಾಯಕರ ಸೂಚನೆ ಮೇರೆಗೆ ಏಕಾಏಕಿ ರಾತ್ರೋರಾತ್ರಿ ಫ್ಲೆಕ್ಸ್ ತೆಗೆಯುತ್ತಿದ್ದಾರೆ. ಕಾಂಗ್ರೆಸ್ ಫ್ಲೆಕ್ಸ್‌ಗಳು ತಿಂಗಳುಗಟ್ಟಲೇ ರಾರಾಜಿಸುತ್ತಿದ್ದರೂ ಯಾರೂ ಕೂಡ ಕೇಳುತ್ತಿರಲಿಲ್ಲ. ಆದರೆ ಜೆಡಿಎಸ್ ಫ್ಲೆಕ್ಸ್ ಮೇಲೆ ಯಾಕೆ ಸೇಡು ಎಂದು ವಾಗ್ವಾದ ಮಾಡಿದ ಘಟನೆ ನಡೆದಿದೆ.

ಆಂದೋಲನ ಡೆಸ್ಕ್

Recent Posts

482 ಎಕರೆ ಅರಣ್ಯ ಭೂಮಿ ಕಬಳಿಕೆ ಯತ್ನ: ಸಿಐಡಿ ತನಿಖೆ ಕೋರಿ ಸಿಎಂಗೆ ಪತ್ರ ಬರೆದ ಈಶ್ವರ್‌ ಖಂಡ್ರೆ

ಬೆಳಗಾವಿ:  532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ…

8 mins ago

ಟಾಕ್ಸಿಕ್‌ ಚಿತ್ರದ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ರಾಕಿಂಗ್‌ ಸ್ಟಾರ್‌ ಯಶ್‌

ರಾಕಿಂಗ್‌ ಸ್ಟಾರ್‌ ಯಶ್‌ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್‌ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…

17 mins ago

ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜಾಗೃತಿ ರಥಯಾತ್ರೆಗೆ ಚಾಲನೆ

ಮೈಸೂರು: ಡ್ರಗ್ಸ್‌ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…

32 mins ago

ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: ಆಡಳಿತಾರೂಢ ಕಾಂಗ್ರೆಸ್‌ ನಡೆಗೆ ವಿಪಕ್ಷ ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್‌ ಶಾಸಕ ಕಾಶಪ್ಪನವರ್‌…

2 hours ago

ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್:‌ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್‌ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.…

2 hours ago

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್‌ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…

2 hours ago