ಮಂಡ್ಯ

ನಾಗಮಂಗಲದಲ್ಲಿ ಫ್ಲೆಕ್ಸ್‌ ರಾಜಕೀಯ: ಜೆಡಿಎಸ್ ಮುಖಂಡನ ಕಟೌಟ್ ತೆರವಿಗೆ ಕಾರ್ಯಕರ್ತರ ಆಕ್ರೋಶ

ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಫ್ಲೆಕ್ಸ್ ಪಾಲಿಟಿಕ್ಸ್ ಬೆಳಕಿಗೆ ಬಂದಿದ್ದು, ರಾತ್ರೋರಾತ್ರಿ ಜೆಡಿಎಸ್ ಕಟೌಟ್ ತೆರವಿಗೆ ಮುಂದಾಗಿದ್ದ ಪುರಸಭೆ ಸಿಬ್ಬಂದಿ ವಿರುದ್ಧ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ನಾಯಕರ ಕುಮ್ಮಕ್ಕಿನಿಂದ ಫ್ಲೆಕ್ಸ್ ತೆರವು ಎಂದು ಆರೋಪ ಮಾಡಲಾಗಿದ್ದು, ಮಧ್ಯರಾತ್ರಿ ಸಿಬ್ಬಂದಿಗಳ ಜೊತೆ ಜೆಡಿಎಸ್ ಕಾರ್ಯಕರ್ತರು ಜಟಾಪಟಿಗೆ ಇಳಿದಿದ್ದಾರೆ.

ನಾಗಮಂಗಲಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗಮಿಸುತ್ತಿದ್ದಾರೆ. ಜನತಾದಳ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ನಿಖಿಲ್‌ಗೆ ಸ್ವಾಗತ ಕೋರಿ ಕಾರ್ಯಕರ್ತರು ಪಟ್ಟಣದಲ್ಲಿ ಕಟೌಟ್ ಅಳವಡಿಸಿದ್ದಾರೆ.

ಆದರೆ ರಾತ್ರೋರಾತ್ರಿ ಪುರಸಭೆ ಸಿಬ್ಬಂದಿಗಳು ಫ್ಲೆಕ್ಸ್ ತೆರವುಗೊಳಿಸಲು ಮುಂದಾಗಿದ್ದು, ಅಧಿಕಾರಿಗಳ ನಿಲುವಿಗೆ ಜೆಡಿಎಸ್ ಕಾರ್ಯಕರ್ತರು ಕೆರಳಿ ಕೆಂಡವಾಗಿದ್ದಾರೆ.

ನಿಖಿಲ್ ನಾಗಮಂಗಲಕ್ಕೆ ಬರುತ್ತಿರುವುದನ್ನು ಯಾರಿಗೂ ಸಹಿಸಲು ಆಗುತ್ತಿಲ್ಲ. ಕಾಂಗ್ರೆಸ್ ನಾಯಕರ ಸೂಚನೆ ಮೇರೆಗೆ ಏಕಾಏಕಿ ರಾತ್ರೋರಾತ್ರಿ ಫ್ಲೆಕ್ಸ್ ತೆಗೆಯುತ್ತಿದ್ದಾರೆ. ಕಾಂಗ್ರೆಸ್ ಫ್ಲೆಕ್ಸ್‌ಗಳು ತಿಂಗಳುಗಟ್ಟಲೇ ರಾರಾಜಿಸುತ್ತಿದ್ದರೂ ಯಾರೂ ಕೂಡ ಕೇಳುತ್ತಿರಲಿಲ್ಲ. ಆದರೆ ಜೆಡಿಎಸ್ ಫ್ಲೆಕ್ಸ್ ಮೇಲೆ ಯಾಕೆ ಸೇಡು ಎಂದು ವಾಗ್ವಾದ ಮಾಡಿದ ಘಟನೆ ನಡೆದಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಉದ್ಯೋಗ ನೇಮಕಾತಿ ಯಾವಾಗ?

ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…

31 seconds ago

ಓದುಗರ ಪತ್ರ: ಉದ್ಯೋಗ ವಯೋಮಿತಿ ಹೆಚ್ಚಳ ಸ್ವಾಗತಾರ್ಹ

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…

3 mins ago

ಇಂದು ಕೇರಳ ಬೈತೂರು ದೇವಾಲಯದ ಪತ್ತೂಟ

ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ  ಹಬ್ಬಕ್ಕೆ  ಅಗತ್ಯ ಸಿದ್ಧತೆ  ವಿರಾಜಪೇಟೆ: ಕೇರಳ ಹಾಗೂ…

5 mins ago

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್ ಒತ್ತುವರಿ

ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ  ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…

10 mins ago

ಶಾಲಾ ಮಕ್ಕಳಿಗೆ ಪಾದರಕ್ಷೆ ಭಾಗ್ಯ!

‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ  ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…

16 mins ago

ಇಂದು ಹಾಸನದಲ್ಲಿ ಜಾ.ದಳ ಬೆಳ್ಳಿ ಮಹೋತ್ಸವ

ಭೇರ್ಯ ಮಹೇಶ್‌  ಸಮಾವೇಶಕ್ಕೆ ಬೃಹತ್ ವೇದಿಕೆ ನಿರ್ಮಾಣ; ೧ ಲಕ್ಷ ಆಸನಗಳ ವ್ಯವಸ್ಥೆ ಹಾಸನ: ಜಾ.ದಳ ಪ್ರಾದೇಶಿಕ ಪಕ್ಷದ ಬೆಳ್ಳಿ…

21 mins ago