ಮಂಡ್ಯ

ಪ್ರವಾಹ ಭೀತಿ: ಕಂಟ್ರೋಲ್ ರೂಂ ಸ್ಥಾಪನೆ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆ ಕೆ.ಆ‌ರ್.ಎಸ್ ಜಲಾಶಯ ಭರ್ತಿಯಾಗುತ್ತಿದ್ದು, ಯಾವುದೇ ಕ್ಷಣದಲ್ಲಾದರೂ ನೀರನ್ನು ನದಿಗಳಿಗೆ ಹರಿಸಲಾಗುವುದು. ಹೀಗಾಗಿ ನದಿಪಾತ್ರದಲ್ಲಿ ನೆರೆ ಉಂಟಾಗುವ ಪರಿಸ್ಥಿತಿ ಬಂದಲ್ಲಿ ಪ್ರವಾಹ ಎದುರಿಸಲು ಕಂಟ್ರೋಲ್ ರೂಂಗಳನ್ನು ತೆರೆಯಲಾಗಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ – 53 ಗ್ರಾಮ, ಪಾಂಡವಪುರ ತಾಲ್ಲೂಕಿನ – 15 ಗ್ರಾಮ, ಮಳವಳ್ಳಿ ತಾಲ್ಲೂಕಿನ – 21 ಗ್ರಾಮ ಹಾಗೂ ಹೇಮಾವತಿ ಜಲಾನಯನ ಪ್ರದೇಶದ ಕೆ.ಆ‌ರ್ ಪೇಟೆ ತಾಲ್ಲೂಕಿನ – 03 ಗ್ರಾಮಗಳು ಸೇರಿ ಒಟ್ಟು – 92 ಗ್ರಾಮಗಳನ್ನು ನೆರೆ/ಪ್ರವಾಹ ಉಂಟಾಗುವ ಗ್ರಾಮಗಳೆಂದು ಗುರುತಿಸಲಾಗಿದ್ದು, ಮುನ್ನೆಚ್ಚರಿಕೆಯಾಗಿ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಕಂಟ್ರೋಲ್ ರೂಂ ಗಳನ್ನು ರಚಿಸಲಾಗಿದೆ.

ಸಾರ್ವಜನಿಕರು ನೆರೆ / ಪ್ರವಾಹದ ಬಗ್ಗೆ ದೂರು ಇದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಹಾಯವಾಣಿ ಸಂಖ್ಯೆ – 08232-224655, ಮಂಡ್ಯ ತಾಲ್ಲೂಕು ಕಛೇರಿ – 08232-291655, ಮದ್ದೂರು ತಾಲ್ಲೂಕು ಕಛೇರಿ – 08232-291466, ಮಳವಳ್ಳಿ ತಾಲ್ಲೂಕು ಕಛೇರಿ – 08231-242267, ಪಾಂಡವಪುರ ತಾಲ್ಲೂಕು ಕಛೇರಿ – 08236-255128, ಶ್ರೀರಂಗಪಟ್ಟಣ ತಾಲ್ಲೂಕು ಕಛೇರಿ – 08236-253001, ನಾಗಮಂಗಲ ತಾಲ್ಲೂಕು ಕಛೇರಿ – 08234-298105, ಕೆ.ಆ‌ರ್ ಪೇಟೆ ತಾಲ್ಲೂಕು ಕಛೇರಿ – 08230-262227 ಸಹಾಯವಾಣಿಯನ್ನು ಸಂಪರ್ಕಿಸಬಹುದಾಗಿದೆ.

ಕಾವೇರಿ ನೀರಾವರಿ/ಹೆಚ್.ಎಲ್.ಬಿ.ಸಿ. ಯಲ್ಲಿಯೂ ಕಂಟ್ರೋಲ್ ರೂಂ ಅನ್ನು ಸ್ಥಾಪಿಸಲಾಗಿದ್ದು, ಕೆ ಆರ್ ಸಾಗರ ಕಾರ್ಯಪಾಲಕ ಅಭಿಯಂತರರು – 08236-257976, ಬನ್ನೂರು ಕಾರ್ಯಪಾಲಕ ಅಭಿಯಂತರರು – 9480442830, ಮಂಡ್ಯ ಕಾರ್ಯಪಾಲಕ ಅಭಿಯಂತರರು – 9742454353, ಕೆ.ಆರ್ ಪೇಟೆ ಹೆಚ್.ಎಲ್.ಬಿ.ಸಿ ಕಾರ್ಯಪಾಲಕ ಅಭಿಯಂತರರು – 9242229448 ಸಹಾಯವಾಣಿಗಳಾಗಿವೆ.

ಚೆಸ್ಕಾಂ ಟೋಲ್ ಫ್ರೀ ನಂಬರ್ – 1912, 9448994777/888/999, ಶ್ರೀರಂಗಪಟ್ಟಣ ಮತ್ತು ಪಾಂಡವಪುರ ಕಾರ್ಯಪಾಲಕ ಅಭಿಯಂತರರು 9448994893, ಮಳವಳ್ಳಿ ಕಾರ್ಯಪಾಲಕ ಅಭಿಯಂತರರು – 9448994828, ಕೆ.ಆರ್ ಪೇಟೆ ಕಾರ್ಯಪಾಲಕ ಅಭಿಯಂತರರು – 9480844740 ಸಹಾಯವಾಣಿಗಳಾಗಿದ್ದು, ಇವುಗಳನ್ನು ಸಂಪರ್ಕಿಸಿ ಪ್ರವಾಹಗಳ ಬಗ್ಗೆ ಮಾಹಿತಿ ನೀಡಬಹುದಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇರಾನ್ ಮೇಲೆ ಇಸ್ರೇಲ್ ದಾಳಿ: ಇರಾನ್ ದೇಶದ ಸರ್ವೋಚ್ಚ ನಾಯಕ ಬಲಿ

ಟೆಹರಾನ್‌: ಇರಾನ್ ಮೇಲೆ ಜಂಟಿಯಾಗಿ ಇಸ್ರೇಲ್ ಮತ್ತು ಅಮೇರಿಕಾ ದಾಳಿ ನಡೆಸಿದೆ. ದಾಳಿಯ ಪರಿಣಾಮ ಇರಾನ್ ದೇಶದ ಸರ್ವೋಚ್ಚ ನಾಯಕ…

26 mins ago

ಓದುಗರ ಪತ್ರ: ರೈಲು ನಿಲ್ದಾಣದಲ್ಲಿ ಪ್ರೀಪೇಯ್ಡ್  ಆಟೋ ಕೌಂಟರ್ ಆರಂಭಿಸಿ

ಮೈಸೂರು ರೈಲು ನಿಲ್ದಾಣದಲ್ಲಿ ದಿನದ ೨೪ ಗಂಟೆಯೂ ಕಾರ್ಯನಿರ್ವಹಿಸುವ ಪ್ರೀಪೇಯ್ಡ್ ಆಟೋ ಕೌಂಟರ್ ಇಲ್ಲದೆ ಬೆಳಗಿನ ಜಾವ ಬೇರೆ ಊರುಗಳಿಂದ…

4 hours ago

ಓದುಗರ ಪತ್ರ: ನ್ಯಾಯಾಂಗದ ಬಗ್ಗೆ ಗೌರವ ಮೂಡಿಸಿ

ಕೇಂದ್ರೀಯ ಪಠ್ಯಕ್ರಮದ (ಎನ್ ಸಿಇಆರ್ ಟಿ) ೮ನೇ ತರಗತಿಯ ಪಠ್ಯ ಪುಸ್ತಕದಲ್ಲಿ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲೂ ಭ್ರಷ್ಟಾಚಾರ ಇದೆ…

4 hours ago

ಓದುಗರ ಪತ್ರ: ಅಂಬೇಡ್ಕರ್ ಸಮುದಾಯ ಭವನ ಅಭಿವೃದ್ಧಿಪಡಿಸಿ

ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಡಾ.ಬಿ .ಆರ್.ಅಂಬೇಡ್ಕರ್ ಸಮುದಾಯ ಭವನವನ್ನು ಅಂದಿನ ಸಚಿವರಾಗಿದ್ದ ಶ್ರೀನಿವಾಸ ಪ್ರಸಾದ್…

4 hours ago

ಓದುಗರ ಪತ್ರ: ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಸರಗೂರು ತಾಲ್ಲೂಕಿನ ಮುಳ್ಳೂರು, ಚಾಮಲಾಪುರ, ಕುಂದೂರು, ಕಲ್ಲಂಬಾಳು, ನಂಜೀಪುರ, ಕಟ್ಟೆಹುಣಸೂರು ಈ ಗ್ರಾಮಗಳ ಮಾರ್ಗವಾಗಿ ಹೆಚ್ಚಿನ ಸರ್ಕಾರಿ ಬಸ್ಸುಗಳ ಸಂಚಾರವಿಲ್ಲದೆ…

4 hours ago

ದಿ ಕೇರಳ ಸ್ಟೋರಿ-2 : ಸತ್ಯ V/S ಅಜೆಂಡಾ..!

ವಿವಾದಾಸ್ಪದ ‘ದಿ ಕೇರಳ ಸ್ಟೋರಿ-೨ ಗೋಸ್ ಬಿಯಾಂಡ್’ ಚಲನಚಿತ್ರ ಪ್ರದರ್ಶನಕ್ಕೆ ಕೇರಳದ ಹೈಕೋರ್ಟ್‌ನ ವಿಭಾಗೀಯ ಪೀಠ ಶುಕ್ರವಾರ ಹಸಿರು ನಿಶಾನೆ…

4 hours ago