ಮಂಡ್ಯ

ಪ್ರವಾಹ ಭೀತಿ: ಕಂಟ್ರೋಲ್ ರೂಂ ಸ್ಥಾಪನೆ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆ ಕೆ.ಆ‌ರ್.ಎಸ್ ಜಲಾಶಯ ಭರ್ತಿಯಾಗುತ್ತಿದ್ದು, ಯಾವುದೇ ಕ್ಷಣದಲ್ಲಾದರೂ ನೀರನ್ನು ನದಿಗಳಿಗೆ ಹರಿಸಲಾಗುವುದು. ಹೀಗಾಗಿ ನದಿಪಾತ್ರದಲ್ಲಿ ನೆರೆ ಉಂಟಾಗುವ ಪರಿಸ್ಥಿತಿ ಬಂದಲ್ಲಿ ಪ್ರವಾಹ ಎದುರಿಸಲು ಕಂಟ್ರೋಲ್ ರೂಂಗಳನ್ನು ತೆರೆಯಲಾಗಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ – 53 ಗ್ರಾಮ, ಪಾಂಡವಪುರ ತಾಲ್ಲೂಕಿನ – 15 ಗ್ರಾಮ, ಮಳವಳ್ಳಿ ತಾಲ್ಲೂಕಿನ – 21 ಗ್ರಾಮ ಹಾಗೂ ಹೇಮಾವತಿ ಜಲಾನಯನ ಪ್ರದೇಶದ ಕೆ.ಆ‌ರ್ ಪೇಟೆ ತಾಲ್ಲೂಕಿನ – 03 ಗ್ರಾಮಗಳು ಸೇರಿ ಒಟ್ಟು – 92 ಗ್ರಾಮಗಳನ್ನು ನೆರೆ/ಪ್ರವಾಹ ಉಂಟಾಗುವ ಗ್ರಾಮಗಳೆಂದು ಗುರುತಿಸಲಾಗಿದ್ದು, ಮುನ್ನೆಚ್ಚರಿಕೆಯಾಗಿ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಕಂಟ್ರೋಲ್ ರೂಂ ಗಳನ್ನು ರಚಿಸಲಾಗಿದೆ.

ಸಾರ್ವಜನಿಕರು ನೆರೆ / ಪ್ರವಾಹದ ಬಗ್ಗೆ ದೂರು ಇದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಹಾಯವಾಣಿ ಸಂಖ್ಯೆ – 08232-224655, ಮಂಡ್ಯ ತಾಲ್ಲೂಕು ಕಛೇರಿ – 08232-291655, ಮದ್ದೂರು ತಾಲ್ಲೂಕು ಕಛೇರಿ – 08232-291466, ಮಳವಳ್ಳಿ ತಾಲ್ಲೂಕು ಕಛೇರಿ – 08231-242267, ಪಾಂಡವಪುರ ತಾಲ್ಲೂಕು ಕಛೇರಿ – 08236-255128, ಶ್ರೀರಂಗಪಟ್ಟಣ ತಾಲ್ಲೂಕು ಕಛೇರಿ – 08236-253001, ನಾಗಮಂಗಲ ತಾಲ್ಲೂಕು ಕಛೇರಿ – 08234-298105, ಕೆ.ಆ‌ರ್ ಪೇಟೆ ತಾಲ್ಲೂಕು ಕಛೇರಿ – 08230-262227 ಸಹಾಯವಾಣಿಯನ್ನು ಸಂಪರ್ಕಿಸಬಹುದಾಗಿದೆ.

ಕಾವೇರಿ ನೀರಾವರಿ/ಹೆಚ್.ಎಲ್.ಬಿ.ಸಿ. ಯಲ್ಲಿಯೂ ಕಂಟ್ರೋಲ್ ರೂಂ ಅನ್ನು ಸ್ಥಾಪಿಸಲಾಗಿದ್ದು, ಕೆ ಆರ್ ಸಾಗರ ಕಾರ್ಯಪಾಲಕ ಅಭಿಯಂತರರು – 08236-257976, ಬನ್ನೂರು ಕಾರ್ಯಪಾಲಕ ಅಭಿಯಂತರರು – 9480442830, ಮಂಡ್ಯ ಕಾರ್ಯಪಾಲಕ ಅಭಿಯಂತರರು – 9742454353, ಕೆ.ಆರ್ ಪೇಟೆ ಹೆಚ್.ಎಲ್.ಬಿ.ಸಿ ಕಾರ್ಯಪಾಲಕ ಅಭಿಯಂತರರು – 9242229448 ಸಹಾಯವಾಣಿಗಳಾಗಿವೆ.

ಚೆಸ್ಕಾಂ ಟೋಲ್ ಫ್ರೀ ನಂಬರ್ – 1912, 9448994777/888/999, ಶ್ರೀರಂಗಪಟ್ಟಣ ಮತ್ತು ಪಾಂಡವಪುರ ಕಾರ್ಯಪಾಲಕ ಅಭಿಯಂತರರು 9448994893, ಮಳವಳ್ಳಿ ಕಾರ್ಯಪಾಲಕ ಅಭಿಯಂತರರು – 9448994828, ಕೆ.ಆರ್ ಪೇಟೆ ಕಾರ್ಯಪಾಲಕ ಅಭಿಯಂತರರು – 9480844740 ಸಹಾಯವಾಣಿಗಳಾಗಿದ್ದು, ಇವುಗಳನ್ನು ಸಂಪರ್ಕಿಸಿ ಪ್ರವಾಹಗಳ ಬಗ್ಗೆ ಮಾಹಿತಿ ನೀಡಬಹುದಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

15 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

18 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

18 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

18 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

19 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

19 hours ago