ಮಂಡ್ಯ

ಪ್ರವಾಹ ಭೀತಿ: ಕಂಟ್ರೋಲ್ ರೂಂ ಸ್ಥಾಪನೆ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆ ಕೆ.ಆ‌ರ್.ಎಸ್ ಜಲಾಶಯ ಭರ್ತಿಯಾಗುತ್ತಿದ್ದು, ಯಾವುದೇ ಕ್ಷಣದಲ್ಲಾದರೂ ನೀರನ್ನು ನದಿಗಳಿಗೆ ಹರಿಸಲಾಗುವುದು. ಹೀಗಾಗಿ ನದಿಪಾತ್ರದಲ್ಲಿ ನೆರೆ ಉಂಟಾಗುವ ಪರಿಸ್ಥಿತಿ ಬಂದಲ್ಲಿ ಪ್ರವಾಹ ಎದುರಿಸಲು ಕಂಟ್ರೋಲ್ ರೂಂಗಳನ್ನು ತೆರೆಯಲಾಗಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ – 53 ಗ್ರಾಮ, ಪಾಂಡವಪುರ ತಾಲ್ಲೂಕಿನ – 15 ಗ್ರಾಮ, ಮಳವಳ್ಳಿ ತಾಲ್ಲೂಕಿನ – 21 ಗ್ರಾಮ ಹಾಗೂ ಹೇಮಾವತಿ ಜಲಾನಯನ ಪ್ರದೇಶದ ಕೆ.ಆ‌ರ್ ಪೇಟೆ ತಾಲ್ಲೂಕಿನ – 03 ಗ್ರಾಮಗಳು ಸೇರಿ ಒಟ್ಟು – 92 ಗ್ರಾಮಗಳನ್ನು ನೆರೆ/ಪ್ರವಾಹ ಉಂಟಾಗುವ ಗ್ರಾಮಗಳೆಂದು ಗುರುತಿಸಲಾಗಿದ್ದು, ಮುನ್ನೆಚ್ಚರಿಕೆಯಾಗಿ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಕಂಟ್ರೋಲ್ ರೂಂ ಗಳನ್ನು ರಚಿಸಲಾಗಿದೆ.

ಸಾರ್ವಜನಿಕರು ನೆರೆ / ಪ್ರವಾಹದ ಬಗ್ಗೆ ದೂರು ಇದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಹಾಯವಾಣಿ ಸಂಖ್ಯೆ – 08232-224655, ಮಂಡ್ಯ ತಾಲ್ಲೂಕು ಕಛೇರಿ – 08232-291655, ಮದ್ದೂರು ತಾಲ್ಲೂಕು ಕಛೇರಿ – 08232-291466, ಮಳವಳ್ಳಿ ತಾಲ್ಲೂಕು ಕಛೇರಿ – 08231-242267, ಪಾಂಡವಪುರ ತಾಲ್ಲೂಕು ಕಛೇರಿ – 08236-255128, ಶ್ರೀರಂಗಪಟ್ಟಣ ತಾಲ್ಲೂಕು ಕಛೇರಿ – 08236-253001, ನಾಗಮಂಗಲ ತಾಲ್ಲೂಕು ಕಛೇರಿ – 08234-298105, ಕೆ.ಆ‌ರ್ ಪೇಟೆ ತಾಲ್ಲೂಕು ಕಛೇರಿ – 08230-262227 ಸಹಾಯವಾಣಿಯನ್ನು ಸಂಪರ್ಕಿಸಬಹುದಾಗಿದೆ.

ಕಾವೇರಿ ನೀರಾವರಿ/ಹೆಚ್.ಎಲ್.ಬಿ.ಸಿ. ಯಲ್ಲಿಯೂ ಕಂಟ್ರೋಲ್ ರೂಂ ಅನ್ನು ಸ್ಥಾಪಿಸಲಾಗಿದ್ದು, ಕೆ ಆರ್ ಸಾಗರ ಕಾರ್ಯಪಾಲಕ ಅಭಿಯಂತರರು – 08236-257976, ಬನ್ನೂರು ಕಾರ್ಯಪಾಲಕ ಅಭಿಯಂತರರು – 9480442830, ಮಂಡ್ಯ ಕಾರ್ಯಪಾಲಕ ಅಭಿಯಂತರರು – 9742454353, ಕೆ.ಆರ್ ಪೇಟೆ ಹೆಚ್.ಎಲ್.ಬಿ.ಸಿ ಕಾರ್ಯಪಾಲಕ ಅಭಿಯಂತರರು – 9242229448 ಸಹಾಯವಾಣಿಗಳಾಗಿವೆ.

ಚೆಸ್ಕಾಂ ಟೋಲ್ ಫ್ರೀ ನಂಬರ್ – 1912, 9448994777/888/999, ಶ್ರೀರಂಗಪಟ್ಟಣ ಮತ್ತು ಪಾಂಡವಪುರ ಕಾರ್ಯಪಾಲಕ ಅಭಿಯಂತರರು 9448994893, ಮಳವಳ್ಳಿ ಕಾರ್ಯಪಾಲಕ ಅಭಿಯಂತರರು – 9448994828, ಕೆ.ಆರ್ ಪೇಟೆ ಕಾರ್ಯಪಾಲಕ ಅಭಿಯಂತರರು – 9480844740 ಸಹಾಯವಾಣಿಗಳಾಗಿದ್ದು, ಇವುಗಳನ್ನು ಸಂಪರ್ಕಿಸಿ ಪ್ರವಾಹಗಳ ಬಗ್ಗೆ ಮಾಹಿತಿ ನೀಡಬಹುದಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

12 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

12 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

12 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

12 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

13 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

13 hours ago