ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆ ಕೆ.ಆರ್.ಎಸ್ ಜಲಾಶಯ ಭರ್ತಿಯಾಗುತ್ತಿದ್ದು, ಯಾವುದೇ ಕ್ಷಣದಲ್ಲಾದರೂ ನೀರನ್ನು ನದಿಗಳಿಗೆ ಹರಿಸಲಾಗುವುದು. ಹೀಗಾಗಿ ನದಿಪಾತ್ರದಲ್ಲಿ ನೆರೆ ಉಂಟಾಗುವ ಪರಿಸ್ಥಿತಿ ಬಂದಲ್ಲಿ ಪ್ರವಾಹ ಎದುರಿಸಲು ಕಂಟ್ರೋಲ್ ರೂಂಗಳನ್ನು ತೆರೆಯಲಾಗಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ – 53 ಗ್ರಾಮ, ಪಾಂಡವಪುರ ತಾಲ್ಲೂಕಿನ – 15 ಗ್ರಾಮ, ಮಳವಳ್ಳಿ ತಾಲ್ಲೂಕಿನ – 21 ಗ್ರಾಮ ಹಾಗೂ ಹೇಮಾವತಿ ಜಲಾನಯನ ಪ್ರದೇಶದ ಕೆ.ಆರ್ ಪೇಟೆ ತಾಲ್ಲೂಕಿನ – 03 ಗ್ರಾಮಗಳು ಸೇರಿ ಒಟ್ಟು – 92 ಗ್ರಾಮಗಳನ್ನು ನೆರೆ/ಪ್ರವಾಹ ಉಂಟಾಗುವ ಗ್ರಾಮಗಳೆಂದು ಗುರುತಿಸಲಾಗಿದ್ದು, ಮುನ್ನೆಚ್ಚರಿಕೆಯಾಗಿ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಕಂಟ್ರೋಲ್ ರೂಂ ಗಳನ್ನು ರಚಿಸಲಾಗಿದೆ.
ಸಾರ್ವಜನಿಕರು ನೆರೆ / ಪ್ರವಾಹದ ಬಗ್ಗೆ ದೂರು ಇದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಹಾಯವಾಣಿ ಸಂಖ್ಯೆ – 08232-224655, ಮಂಡ್ಯ ತಾಲ್ಲೂಕು ಕಛೇರಿ – 08232-291655, ಮದ್ದೂರು ತಾಲ್ಲೂಕು ಕಛೇರಿ – 08232-291466, ಮಳವಳ್ಳಿ ತಾಲ್ಲೂಕು ಕಛೇರಿ – 08231-242267, ಪಾಂಡವಪುರ ತಾಲ್ಲೂಕು ಕಛೇರಿ – 08236-255128, ಶ್ರೀರಂಗಪಟ್ಟಣ ತಾಲ್ಲೂಕು ಕಛೇರಿ – 08236-253001, ನಾಗಮಂಗಲ ತಾಲ್ಲೂಕು ಕಛೇರಿ – 08234-298105, ಕೆ.ಆರ್ ಪೇಟೆ ತಾಲ್ಲೂಕು ಕಛೇರಿ – 08230-262227 ಸಹಾಯವಾಣಿಯನ್ನು ಸಂಪರ್ಕಿಸಬಹುದಾಗಿದೆ.
ಕಾವೇರಿ ನೀರಾವರಿ/ಹೆಚ್.ಎಲ್.ಬಿ.ಸಿ. ಯಲ್ಲಿಯೂ ಕಂಟ್ರೋಲ್ ರೂಂ ಅನ್ನು ಸ್ಥಾಪಿಸಲಾಗಿದ್ದು, ಕೆ ಆರ್ ಸಾಗರ ಕಾರ್ಯಪಾಲಕ ಅಭಿಯಂತರರು – 08236-257976, ಬನ್ನೂರು ಕಾರ್ಯಪಾಲಕ ಅಭಿಯಂತರರು – 9480442830, ಮಂಡ್ಯ ಕಾರ್ಯಪಾಲಕ ಅಭಿಯಂತರರು – 9742454353, ಕೆ.ಆರ್ ಪೇಟೆ ಹೆಚ್.ಎಲ್.ಬಿ.ಸಿ ಕಾರ್ಯಪಾಲಕ ಅಭಿಯಂತರರು – 9242229448 ಸಹಾಯವಾಣಿಗಳಾಗಿವೆ.
ಚೆಸ್ಕಾಂ ಟೋಲ್ ಫ್ರೀ ನಂಬರ್ – 1912, 9448994777/888/999, ಶ್ರೀರಂಗಪಟ್ಟಣ ಮತ್ತು ಪಾಂಡವಪುರ ಕಾರ್ಯಪಾಲಕ ಅಭಿಯಂತರರು 9448994893, ಮಳವಳ್ಳಿ ಕಾರ್ಯಪಾಲಕ ಅಭಿಯಂತರರು – 9448994828, ಕೆ.ಆರ್ ಪೇಟೆ ಕಾರ್ಯಪಾಲಕ ಅಭಿಯಂತರರು – 9480844740 ಸಹಾಯವಾಣಿಗಳಾಗಿದ್ದು, ಇವುಗಳನ್ನು ಸಂಪರ್ಕಿಸಿ ಪ್ರವಾಹಗಳ ಬಗ್ಗೆ ಮಾಹಿತಿ ನೀಡಬಹುದಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…