ಮಂಡ್ಯ

ಭಾರೀ ಪ್ರವಾಹದ ಆತಂಕ: ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವೇಶ ನಿರ್ಬಂಧ

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿರುವುದರಿಂದ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಹ ಭೀತಿ ಎದುರಾಗಿದೆ.

ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜಲಾಶಯದಿಂದ 40 ಸಾವಿರ ಕ್ಯೂಸೆಕ್ಸ್‌ಗೂ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಬಿಡಲಾಗುತ್ತಿದೆ. ಪರಿಣಾಮ ಕಾವೇರಿ ನದಿ ಪಾತ್ರದಲ್ಲಿ ಭಾರೀ ಪ್ರವಾಹದ ಆತಂಕ ಎದುರಾಗಿದ್ದು, ಜನತೆ ಸುರಕ್ಷತೆ ವಹಿಸುವಂತೆ ಸೂಚನೆ ನೀಡಲಾಗಿದೆ.

ಇನ್ನು ಕೆಆರ್‌ಎಸ್‌ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರ ಬಿಟ್ಟಿರುವುದರಿಂದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ವಿಶ್ವಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಹದ ಆತಂಕ ಎದುರಾಗಿದೆ.

ಕೆಆರ್‌ಎಸ್‌ ಜಲಾಶಯದಿಂದ ಮತ್ತಷ್ಟು ಹೊರಹರಿವು ಹೆಚ್ಚಾದರೆ ರಂಗನತಿಟ್ಟು ಪಕ್ಷಿಧಾಮದ ವಾಕಿಂಗ್‌ ಪಾಥ್‌ಗೂ ನೀರು ನುಗ್ಗುವ ಸಾಧ್ಯತೆಯಿದ್ದು, ಮುಂಜಾಗ್ರತಾ ಕ್ರಮವಾಗಿ ಪಕ್ಷಿಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

ವಿಚಾರ ತಿಳಿಯದೇ ಇಂದು ರಂಗನತಿಟ್ಟು ಪಕ್ಷಿಧಾಮಕ್ಕೆ ಆಗಮಿಸಿದ್ದ ಜನರನ್ನು ಅಧಿಕಾರಿಗಳು ಗೇಟ್‌ ಬಳಿಯೇ ವಾಪಸ್‌ ಕಳುಹಿಸುತ್ತಿದ್ದು, ಖುಷಿಯಿಂದ ಹೋದ ಪ್ರವಾಸಿಗರಿಗೆ ಭಾರೀ ನಿರಾಸೆಯಾಗಿದೆ.

ಇನ್ನೂ ಕೆಆರ್‌ಎಸ್‌ ಜಲಾಶಯದಿಂದ ಹೊರಹರಿವು ಕಡಿಮೆಯಾದರಷ್ಟೇ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವೇಶವಿದ್ದು, ಅಲ್ಲಿಯ ತನಕ ಪ್ರವಾಸಿಗರು ಪಕ್ಷಿಧಾಮ ನೋಡಲು ಹೋಗದಂತೆ ಮನವಿ ಮಾಡಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

2 hours ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

5 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

5 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

7 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

8 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

9 hours ago