ಮಂಡ್ಯ

ವಿಷಾಹಾರ | ತಪ್ಪಿಸ್ಥರಿಗೆ ಕಠಿಣ ಶಿಕ್ಷೆಗೆ ಆಗ್ರಹ

ಮಂಡ್ಯ: ಮಳವಳ್ಳಿ ತಾಲೂಕಿನ ಕಾಗೇಪುರ ಗ್ರಾಮದ ವಸತಿ ಶಾಲೆಯಲ್ಲಿ ಮೇಘಾಲಯ ಮೂಲಕ ಇಬ್ಬರು ಮಕ್ಕಳ ಸಾವಿನ ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾಕ್ಸ್‌ವಾದಿ)ದ ಜಿಲ್ಲಾ ಕಾರ್ಯದರ್ಶಿ ಟಿ.ಎಲ್.ಕೃಷ್ಣೇಗೌಡ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದರಿ ಮಕ್ಕಳ ಸಾವು ಸೈದ್ಧಾಂತಿಕ ಸಂಚಿನ ಫಲವಾಗಿದ್ದು, ರಾಜ್ಯದಲ್ಲಿ ಈ ರೀತಿ ಈಶಾನ್ಯ ರಾಜ್ಯಗಳಿಂದ ೯೨೩ಕ್ಕೂ ಹೆಚ್ಚು ಮಕ್ಕಳಿದ್ದು, ವಿವಿಧ ವಸತಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಾಹಿತಿ ಇದೆ ಎಂದರು.

ಈಶಾನ್ಯ ರಾಜ್ಯಗಳಿಂದ ಕರೆತರುವ ಮಕ್ಕಳನ್ನು ದಾಸೋಸಕ್ಕೆ ಹೆಸರಾದ ಮಠ, ವಸತಿ ಶಾಲೆಗಳಲ್ಲದೇ, ವಸತಿ ವ್ಯವಸ್ಥೆಯೇ ಇಲ್ಲದ ಶಾಲೆಗಳಲ್ಲಿ ಕಲಿಯುತ್ತಿದ್ದು, ಈ ಮಕ್ಕಳಿಗೆ ಸೈದ್ಧಾಂತಿಕ ಮತ್ತು ದೊಣ್ಣೆ ಹಾಗೂ ಕತ್ತಿ ವರಸೆಯಂತಹ ಶಸ್ತ್ರಾಭ್ಯಾಸ ತರಬೇತಿ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ಇದೀಗ ಸಾವಿಗೀಡಾದ ಮಕ್ಕಳು ಕಿರುಗಾವಲು ಶಾಳೆಯಲ್ಲಿ ದಾಖಲಾತಿ ಹೊಂದಿ ಕಾಗೇಪುರದ ಗೋಕುಲದಲ್ಲಿ ತರಬೇತಿ ಪಡೆಯುತ್ತಿದ್ದರು. ಗ್ರಾಮಗಳಲ್ಲಿ ನಡೆದ ಕಾರ್ಯಕ್ರಮಗಳ ಉಳಿದ ಊಟ ಇವರಿಗೆ ನೀಡಲಾಗುತ್ತಿತ್ತು. ಇವರನ್ನು ತೋರಿಸಿ ದಾನಿಗಳು ಮತ್ತು ಕಾರ್ಪೋರೇಟ್ ಸಂಸ್ಥೆಗಳಿಂದ ಹಣ ಸಂಗ್ರಹಿಸುವ ಹುನ್ನಾರು ಇರುವ ಸಾಧ್ಯತೆ ಇದೆ ಎಂದು ಅನುಮಾನ ವ್ಯಕ್ತಪಡಿಸಿದರು.

ಇಂತಹ ಮಕ್ಕಳನ್ನು ಕರೆತರುವ ಜಾಲದ ಹಿಂದೆ ಆರ್‌ಎಸ್‌ಎಸ್ ಸಂಘಟನೆಯ ಕೈವಾಡವಿರುವ ಸಾಧ್ಯತೆಗಳಿದ್ದು, ಮಕ್ಕಳ ಸಾಗಾಣೆ ಮಾಡುವ ಅಂತರಾಜ್ಯ ಜಾಲವೂ ಇದರಲ್ಲಿ ಕೂಡಿಕೊಂಡಿರುವುದಾಗಿ ಕಾಣುತ್ತಿದ್ದು, ಮಕ್ಕಳ ಸಾವಿನ ಪ್ರಕರಣಕ್ಕೆ ಸಂಬಂದಿಸಿದಂತೆ ಗೋಕುಲ ಸಂಸ್ಥೆಯ ಮುಖ್ಯಸ್ಥ ಲಂಕೇಶ್ ಅವರನ್ನು ಮೊದಲ ಆರೋಪಿಯಾಗಿ ಮಾಡಿ, ಮಕ್ಕಳ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿಯ ಅಧ್ಯಕ್ಷರು ಎನ್‌ಸಿಪಿಸಿಆರ್ ಪ್ರಕಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು. ಹಾಗೂ ಮೃತ ಮಕ್ಕಳ ಕುಟುಂಬಕ್ಕೆ ಸರ್ಕಾರ ತಲಾ ೨೫ ಲಕ್ಷ ರೂ ಪರಿಹಾರ ನೀಡಬೇಕು. ಸದರಿ ಪರಿಹಾರವನ್ನು ಲಂಕೇಶ್‌ನಿಂದಲೇ ವಸೂಲಿ ಮಾಡಬೇಕು ಎಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ಕಾರ್ಯದರ್ಶಿ ಮಂಡಳಿ ಸದಸ್ಯರುಗಳಾದ ಭರತ್‌ರಾಜ್.ಎನ್.ಎಲ್, ಸಿ.ಕುಮಾರಿ, ಸುಶೀಲ, ಹನುಮೇಶ್ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

2 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

2 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

5 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

5 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

5 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

6 hours ago