ಮಂಡ್ಯ

ವಿಷಾಹಾರ | ತಪ್ಪಿಸ್ಥರಿಗೆ ಕಠಿಣ ಶಿಕ್ಷೆಗೆ ಆಗ್ರಹ

ಮಂಡ್ಯ: ಮಳವಳ್ಳಿ ತಾಲೂಕಿನ ಕಾಗೇಪುರ ಗ್ರಾಮದ ವಸತಿ ಶಾಲೆಯಲ್ಲಿ ಮೇಘಾಲಯ ಮೂಲಕ ಇಬ್ಬರು ಮಕ್ಕಳ ಸಾವಿನ ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾಕ್ಸ್‌ವಾದಿ)ದ ಜಿಲ್ಲಾ ಕಾರ್ಯದರ್ಶಿ ಟಿ.ಎಲ್.ಕೃಷ್ಣೇಗೌಡ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದರಿ ಮಕ್ಕಳ ಸಾವು ಸೈದ್ಧಾಂತಿಕ ಸಂಚಿನ ಫಲವಾಗಿದ್ದು, ರಾಜ್ಯದಲ್ಲಿ ಈ ರೀತಿ ಈಶಾನ್ಯ ರಾಜ್ಯಗಳಿಂದ ೯೨೩ಕ್ಕೂ ಹೆಚ್ಚು ಮಕ್ಕಳಿದ್ದು, ವಿವಿಧ ವಸತಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಾಹಿತಿ ಇದೆ ಎಂದರು.

ಈಶಾನ್ಯ ರಾಜ್ಯಗಳಿಂದ ಕರೆತರುವ ಮಕ್ಕಳನ್ನು ದಾಸೋಸಕ್ಕೆ ಹೆಸರಾದ ಮಠ, ವಸತಿ ಶಾಲೆಗಳಲ್ಲದೇ, ವಸತಿ ವ್ಯವಸ್ಥೆಯೇ ಇಲ್ಲದ ಶಾಲೆಗಳಲ್ಲಿ ಕಲಿಯುತ್ತಿದ್ದು, ಈ ಮಕ್ಕಳಿಗೆ ಸೈದ್ಧಾಂತಿಕ ಮತ್ತು ದೊಣ್ಣೆ ಹಾಗೂ ಕತ್ತಿ ವರಸೆಯಂತಹ ಶಸ್ತ್ರಾಭ್ಯಾಸ ತರಬೇತಿ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ಇದೀಗ ಸಾವಿಗೀಡಾದ ಮಕ್ಕಳು ಕಿರುಗಾವಲು ಶಾಳೆಯಲ್ಲಿ ದಾಖಲಾತಿ ಹೊಂದಿ ಕಾಗೇಪುರದ ಗೋಕುಲದಲ್ಲಿ ತರಬೇತಿ ಪಡೆಯುತ್ತಿದ್ದರು. ಗ್ರಾಮಗಳಲ್ಲಿ ನಡೆದ ಕಾರ್ಯಕ್ರಮಗಳ ಉಳಿದ ಊಟ ಇವರಿಗೆ ನೀಡಲಾಗುತ್ತಿತ್ತು. ಇವರನ್ನು ತೋರಿಸಿ ದಾನಿಗಳು ಮತ್ತು ಕಾರ್ಪೋರೇಟ್ ಸಂಸ್ಥೆಗಳಿಂದ ಹಣ ಸಂಗ್ರಹಿಸುವ ಹುನ್ನಾರು ಇರುವ ಸಾಧ್ಯತೆ ಇದೆ ಎಂದು ಅನುಮಾನ ವ್ಯಕ್ತಪಡಿಸಿದರು.

ಇಂತಹ ಮಕ್ಕಳನ್ನು ಕರೆತರುವ ಜಾಲದ ಹಿಂದೆ ಆರ್‌ಎಸ್‌ಎಸ್ ಸಂಘಟನೆಯ ಕೈವಾಡವಿರುವ ಸಾಧ್ಯತೆಗಳಿದ್ದು, ಮಕ್ಕಳ ಸಾಗಾಣೆ ಮಾಡುವ ಅಂತರಾಜ್ಯ ಜಾಲವೂ ಇದರಲ್ಲಿ ಕೂಡಿಕೊಂಡಿರುವುದಾಗಿ ಕಾಣುತ್ತಿದ್ದು, ಮಕ್ಕಳ ಸಾವಿನ ಪ್ರಕರಣಕ್ಕೆ ಸಂಬಂದಿಸಿದಂತೆ ಗೋಕುಲ ಸಂಸ್ಥೆಯ ಮುಖ್ಯಸ್ಥ ಲಂಕೇಶ್ ಅವರನ್ನು ಮೊದಲ ಆರೋಪಿಯಾಗಿ ಮಾಡಿ, ಮಕ್ಕಳ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿಯ ಅಧ್ಯಕ್ಷರು ಎನ್‌ಸಿಪಿಸಿಆರ್ ಪ್ರಕಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು. ಹಾಗೂ ಮೃತ ಮಕ್ಕಳ ಕುಟುಂಬಕ್ಕೆ ಸರ್ಕಾರ ತಲಾ ೨೫ ಲಕ್ಷ ರೂ ಪರಿಹಾರ ನೀಡಬೇಕು. ಸದರಿ ಪರಿಹಾರವನ್ನು ಲಂಕೇಶ್‌ನಿಂದಲೇ ವಸೂಲಿ ಮಾಡಬೇಕು ಎಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ಕಾರ್ಯದರ್ಶಿ ಮಂಡಳಿ ಸದಸ್ಯರುಗಳಾದ ಭರತ್‌ರಾಜ್.ಎನ್.ಎಲ್, ಸಿ.ಕುಮಾರಿ, ಸುಶೀಲ, ಹನುಮೇಶ್ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

4 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

4 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

4 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

4 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

4 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

4 hours ago