ಮಂಡ್ಯ

ವಿಷಾಹಾರ : ಚಿಕಿತ್ಸೆ ಬಳಿಕ ಪರೀಕ್ಷೆಗೆ ಅವಕಾಶ ; ಜಿಲ್ಲಾಧಿಕಾರಿ ಕುಮಾರ

ಮಂಡ್ಯ : ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಗೋಕುಲ ವಿದ್ಯಾಸಂಸ್ಥೆಯಲ್ಲಿ ವಿಷಹಾರ ಸೇವನೆಯಿಂದ ಚಿಕಿತ್ಸೆ ಪಡೆಯುತ್ತಿರುವ ಮೇಘಾಲಯ ರಾಜ್ಯದ 22 ವಿದ್ಯಾರ್ಥಿಗಳು ಹಾಗೂ ಸ್ಥಳೀಯ 14 ವಿದ್ಯಾರ್ಥಿಗಳು ಗುಣಮುಖರಾದ ನಂತರ ಶೈಕ್ಷಣಿಕ ವರ್ಷದ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ: ಕುಮಾರ  ಹೇಳಿದರು.

ಬುಧವಾರ  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಮೇಘಾಲಯ‌ ರಾಜ್ಯದ 22 ವಿದ್ಯಾರ್ಥಿಗಳು 1 ರಿಂದ 9 ನೇ ತರಗತಿಯೊಳಗಿದ್ದು, ಗುಣಮುಖರಾದ ನಂತರ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಹಸ್ತಾಂತರ ಮಾಡಲಾಗುವುದು.‌ ಬಾಲಮಂದಿರದಲ್ಲಿ ಅವರಿಗೆ ವಾಸ್ತವ್ಯ ಹಾಗೂ ವೈದ್ಯರ ಸಲಹೆಯಂತೆ ಆಹಾರ ಒದಗಿಸಲಾಗುವುದು ಎಂದರು.

ಶಿಕ್ಷಣ ಇಲಾಖೆಯು ಮೇಘಾಲಯ ರಾಜ್ಯದ ವಿದ್ಯಾರ್ಥಿಗಳು ಸೇರಿದಂತೆ ಸ್ಥಳೀಯ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಬೇಕು. ಇದಲ್ಲದೇ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವೈದ್ಯರ ಸಲಹೆ ಹಾಗೂ ಪೋಷಕರ ಒಪ್ಪಿಗೆ ಪಡೆದು ಪರೀಕ್ಷೆ -1 ಬರೆಯಲಿ ಇಲ್ಲವಾದಲ್ಲಿ ಪರೀಕ್ಷೆ-2 ಬರೆಯಲು ವ್ಯವಸ್ಥೆ ಮಾಡಿ ಎಂದರು.

ಚಿಕಿತ್ಸೆ ಪಡೆಯುತ್ತಿರುವ ಮೇಘಾಲಯ ವಿದ್ಯಾರ್ಥಿಗಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಹಸ್ತಾಂತರ ಮಾಡಿದ ನಂತರ ಮೇಘಾಲಯ ಸರ್ಕಾರ ನಿಯೋಜಿಸಿರುವ ಅಧಿಕಾರಿಗಳು ಮಕ್ಕಳ ಪೋಷಕರನ್ನು ಅವರ ಆಧಾರ್ ಕಾಡ್೯ ಗುರುತಿನ ಚೀಟಿಯೊಂದಿಗೆ ಆಗಮಿಸಿ ಮಕ್ಕಳ ರಕ್ಷಣಾ ಘಟಕಕ್ಕೆ ಪತ್ರ ನೀಡಿ ನಂತರ ಮಕ್ಕಳನ್ನು ಕರೆದುಕೊಂಡು ಹೋಗಬಹುದು. ಇದಲ್ಲದೇ ಮೇಘಾಲಯ ರಾಜ್ಯದ ವಿದ್ಯಾರ್ಥಿಗಳನ್ನು ಗೋಕುಲ ಶಾಲೆಗೆ ದಾಖಲೆ ಮಾಡುವ ಸಂದರ್ಭದಲ್ಲಿ ನೀಡಿರುವ ದಾಖಲೆಗಳನ್ನು ವಶಪಡಿಸಿಕೊಂಡು ತನಿಖೆ ನಡೆಸುವಂತೆ ತಿಳಿಸಿದರು.

ಪೋಷಕರ ಸಭೆ ಹಾಗೂ ಪರೀಕ್ಷೆ ನಡೆಸಿ ಶೈಕ್ಷಣಿಕ ಸಾಲು ಅಂತ್ಯವಾಗುತ್ತಿದ್ದು, ಗೋಕಲ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸ್ಥಳೀಯ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಸಿ ವಿದ್ಯಾರ್ಥಿಗಳನ್ನು ಶಾಲೆಗೆ ಕರೆತಂದು ಪರೀಕ್ಷೆ ನಡೆಸಲು ವ್ಯವಸ್ಥೆ ಮಾಡಿ, ಅಗತ್ಯವಿದ್ದಲ್ಲಿ ಶಿಕ್ಷಣ ಇಲಾಖೆಯಿಂದಲೂ ಸಿಬ್ಬಂದಿ ನಿಯೋಜಿಸಿ. ಇನ್ನೊಂದು ಭಾಗದಲ್ಲಿ ಶಾಲೆಗೆ ನೋಟೀಸ್ ನೀಡುವ ಕೆಲಸ ನಡೆಯುತಿರಲಿ ಎಂದರು.

ಜಿಲ್ಲೆಯ ವಸತಿ ಶಾಲೆಗಳ ಪರಿಶೀಲನೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ವಸತಿ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿನ ಮೂಲಭೂತ ವ್ಯವಸ್ಥೆಗಳು, ಮಕ್ಕಳಿಗೆ ನೀಡಲಾಗುತ್ತಿರುವ ಆಹಾರ ಕುರಿತು ವರದಿ ನೀಡಲು ಆರೋಗ್ಯ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಸಮಿತಿ ರಚಿಸಲಾಗುವುದು ಎಂದರು.

ಸರ್ಕಾರದ ಆಧೀನದಲ್ಲಿ ನಡೆಯುತ್ತಿರುವ ವಸತಿ ಶಾಲೆಗಳಲ್ಲಿ ಯಾವುದೇ ಕಾರಣಕ್ಕೂ‌ ಹೊರಗಿನ ವ್ಯಕ್ತಿ ಹಾಗೂ ಸಂಸ್ಥೆಯಿಂದ ಆಹಾರ ಪಡೆಯುವಂತಿಲ್ಲ. ಯಾವುದಾದರೂ ದೂರು ಬಂದಲ್ಲಿ ಕ್ರಮ ವಹಿಸುವುದಾಗಿ ಎಚ್ಚರಿಕೆ ನೀಡಿದರು.

ನೋಡಲ್ ಅಧಿಕಾರಿಗಳ ನೇಮಕ ಸಮಾಜ ಕಲ್ಯಾಣ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ‌ ಮಾಡಲಾಗುವುದು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ಮಾತನಾಡಿ, ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬಿಸಿ ಊಟದ ಸಂದರ್ಭದಲ್ಲಿ ಬೇರೆ ದಾನಿಗಳು ಆಹಾರ ನೀಡುವುದಾಗಿ ತಿಳಿಸುವುದು ಶಾಲೆ ಅವರನ್ನು ಪ್ರೋತ್ಸಾಹಿಸುವುದು ಕಂಡುಬಂದಲ್ಲಿ ಶಿಸ್ತು ಕ್ರಮ ವಹಿಸುವುದಾಗಿ ಎಚ್ಚರಿಕೆ ನೀಡಿದರು.

ಗೋಕುಲ ವಿದ್ಯಾಸಂಸ್ಥೆಗೆ ಪರವಾನಗಿ ನೀಡುವಾಗ ಅಥವಾ ನವೀಕರಣ ಮಾಡುವ ಸಂದರ್ಭದಲ್ಲಿ ಪರಿಶೀಲನೆ ಮಾಡಿದ ಅಧಿಕಾರಿಯ ವಿವರವನ್ನು ಒದಗಿಸುವಂತೆ ತಿಳಿಸಿದರು.

ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಪರವಾನಗಿ ನವೀಕರಣ ಅಥವಾ ಪರವಾನಗಿ ನೀಡುವ ಸಂದರ್ಭದಲ್ಲಿ‌ ಸರ್ಕಾರದ ಮಾರ್ಗಸೂಚಿಯಂತೆ ಪರಿಶೀಲನೆ ಕಟ್ಟುನಿಟ್ಟಾಗಿ ‌ನಡೆಸಬೇಕು ಎಂದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಶ್ಮಿ ಮಾತನಾಡಿ, ಮಕ್ಕಳ ಆರೋಗ್ಯದ ಮೇಲೆ ಈಗಾಗಲೇ ನಿಗಾ ವಹಿಸಲು ಸಿಬ್ಬಂದಿಗಳನ್ನು ಮಿಮ್ಸ್ ಗೆ ನಿಯೋಜಿಸಲಾಗಿದೆ. ಬಾಲಕರ ಬಾಲಮಂದಿರದಲ್ಲಿ ಸ್ಥಳಾವಕಾಶ ಕಡಿಮೆಯಾಗುವುದರಿಂದ ಬಾಲಮಂದಿರದ ಪಕ್ಕದ ಕಟ್ಟಡದಲ್ಲಿ ಮಕ್ಕಳಿಗೆ ಬೇಕಿರುವ ವ್ಯವಸ್ಥೆಗಳ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮೇಘಾಲಯ ರಾಜ್ಯದ ಶಿಕ್ಷಣ ಇಲಾಖೆಯ ಪೀಟರ್ ಸುನ್, ರುಡಿ ಕ್ರಿಯಲ್, ಮಕ್ಕಳ ರಕ್ಷಣಾ ಸಮಿತಿ ಅಧ್ಯಕ್ಷೆ ಸುಮಿತ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಮೂರ್ತಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

4 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

4 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

5 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

5 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

5 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

5 hours ago