ಮಂಡ್ಯ

ಅರಣ್ಯ ಹಾಗೂ ಸಾರ್ವಜನಿಕ ಹಿತಾಸಕ್ತಿಗಳೆರೆಡೂ ಮುಖ್ಯ: ಎನ್ ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಸಾರ್ವಜನಿಕ ಹಿತಾಸಕ್ತಿ ಹಾಗೂ ಅರಣ್ಯ ಸಂರಕ್ಷಣೆಗಳೆರೆಡೂ ಮುಖ್ಯ. ಸಮತೋಲನ ಕಾಯ್ದುಕೋಂಡು ಪರಸ್ಪರ ಸಮನ್ವಯದಿಂದ ಯೋಜನೆಗಳನ್ನು ಅನುಷ್ಠಾನ ಗೊಳಿಸಿ ಎಂದು ಕೃಷಿ ಸಚಿವರು ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಸೂಚನೆ ನೀಡಿದ್ದಾರೆ.

ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರ ಉಪಸ್ಥಿತಿಯಲ್ಲಿ ಮಂಡ್ಯ ಜಿಲ್ಲೆಯ ಜನ ಪ್ರತಿನಿಧಿಗಳು ಹಾಗೂ ಕಂದಾಯ ಅರಣ್ಯ ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಕೃಷಿ ಸಚಿವರು ಮಾತನಾಡಿದರು.

ಮಂಡ್ಯ ಜಿಲ್ಲೆಯಲ್ಲಿ ವಿವಿಧ ಯೋಜನೆಗಳ ಅನುಷ್ಠಾನ ಸಂದರ್ಭಗಳಲ್ಲಿ ಅರಣ್ಯದ ವಿಚಾರವಾಗಿ ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವ ಕುರಿತು ಉಭಯ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದು ಹಲವು ಸಲಹೆ, ಸೂಚನೆ ನಿರ್ದೇಶನಗಳನ್ನು ನೀಡಿದರು.

ಅರಣ್ಯ ನಿಯಮಾವಳಿಗಳ ಬಗ್ಗೆ ಸರ್ವೊಚ್ಚ ನ್ಯಾಯಾಲಯ ಬಿಗಿ ನಿಲುವು ಹೊಂದಿರುವುದು ಗಮನಾರ್ಹ ಅದರೆ ಕುಡಿಯುವ ನೀರು,ವಿದ್ಯುತ್ ಸಂಪರ್ಕಗಳಂತಹ ಮೂಲಭೂತ ಸೌಕರ್ಯಗಳಿಗೆ ಮಾನವೀಯ ದೃಷ್ಟಿ ಅಗತ್ಯ ಎಂದು ಚಲುವರಾಯಸ್ವಾಮಿ ಹೇಳಿದರು.

ಕುಡಿಯುವ ನೀರು ವಿದ್ಯುತ್ ಸರಬರಾಜಿನಂತಹ ಮೂಲಭೂತ ಸೌಕರ್ಯ ಪೂರೈಕೆಗೆ ಅಡ್ಡಿ ಮಾಡಡೆ ಅರಣ್ಯ ಹಿತಾಸಕ್ತಿಗಳನ್ನು ಕಾಯ್ದುಕೊಳ್ಳುವಂತೆ ಸೂಚನೆ ನೀಡಿದರು.

ಶ್ರೀರಂಗಪಟ್ಟಣ ತಾಲ್ಲೂಕಿನ ಹಂಗರಹಳ್ಳಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಪರಿಭಾವಿತ ಅರಣ್ಯ ಪ್ರದೇಶಗಳ ನಕಾಶೆ ಸರಿಪಡಿಸಬೇಕಿದೆ ಎಂದು ಅಧಿಕಾರಿಗಳು ಶಾಸಕರು ಅಭಿಪ್ರಾಯ ಪಟ್ಟಿದ್ದು ಕಂದಾಯ ಇಲಾಖೆಯೊಂದಿಗೆ ಜಂಟಿ ಸರ್ವೆ ನಡೆಸಿ ಗೊಂದಲಗಳನ್ನು ಇತ್ಯರ್ಥ ಪಡಿಸುವಂತೆ ಸೂಚಿಸಲಾಯಿತು.

ಬೆಂಗಳೂರು ಸೋಮವಾರ ಪೇಟೆ ರಾಜ್ಯ ಹೆದ್ದಾರಿ ಕಾಮಗಾರಿ, ವಿವಿಧ ರಸ್ತೆ ಕಾಮಗಾರಿಗಳು ನೀರು ಸರಬರಾಜು ಯೋಜನೆಗಳ ಅನುಷ್ಠಾನಕ್ಕೆ ಉಂಟಾಗಿರುವ ಅಡ್ಡಿಯ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಅಧಿಕಾರಿಗಳು ನಿಯಮಾವಳಿಗಳ ವ್ಯಾಪ್ತಿಯೊಳಗೆ ಇರುವ ಪರಿಹಾರ ಮಾರ್ಗಗಳನ್ನು ಕಂಡಕೊಳ್ಳುಬೇಕು. ಪರಸ್ಪರ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಹಾಗೂ ಮಾನವ ವನ್ಯಜೀವಿ ಸಂಘರ್ಷ ತಡೆಗೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಿ ಎಂದು ಸಚಿವರಾದ ಎನ್. ಚಲುವರಾಯಸ್ವಾಮಿ ಹಾಗೂ ಈಶ್ವರ್ ಖಂಡ್ರೆ ಅವರು ನಿರ್ದೇಶನ ನೀಡಿದರು.

ನಿಯಮಾವಳಿಗಳ ಒಳಗೆ ರಾಜ್ಯ ವ್ಯಾಪ್ತಿಯಲ್ಲಿ ಕೈಗೊಳ್ಳಬಹುದಾದ ಪರಿಹಾರದ ಕ್ರಮಗಳು,ಬದಲಿ ಜಾಗ ಪಡೆದು‌ ಮಾಡಬಹುದಾದ ಮಾರ್ಪಾಡುಗಳ ಬಗ್ಗೆ ಪರಿಶೀಲಿಸಿ ಕ್ರಮ ವಹಿಸುವಂತೆ ಅರಣ್ಯ ಸಚಿವರಾದ ಈಶ್ಚರ್ ಖಂಡ್ರೆ ಸೂಚನೆ ನೀಡಿದರು

ಮಂಡ್ಯ ಜಿಲ್ಲಾಧಿಕಾರಿ ಕುಮಾರ್ ಅವರು ಜಿಲ್ಲೆಯ ವ್ಯಾಪ್ತಿ ಅರಣ್ಯ ಇಲಾಖೆಯಿಂದ ಅನುಮತಿ ಬೇಕಿರುವ ಕಾಮಗಾರಿಗಳ ವಿವರ ಮಂಡಿಸಿದರು. ಚೆಸ್ಕಾಂ ಅಧ್ಯಕ್ಷರು ಹಾಗೂ ಶ್ರೀರಂಗಪಟ್ಟಣ ಶಾಸಕರಾದ ರಮೇಶ್‌ ಬಾಬು ಬಂಡಿಸಿದ್ದೇಗೌಡ, ಶಾಸಕರಾರ ಕೆ.ಎಂ ಉದಯ್ ,ದರ್ಶನ್ ಪುಟ್ಟಣಯ್ಯ,ಪಿ ರವಿಕುಮಾರ್ , ಹೆಚ್.ಟಿ ಮಂಜು, ಮಧು‌ಮಾದೇಗೌಡ ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…

8 hours ago

ಮಹಾರಾಷ್ಟ್ರ | ಮುಸ್ಲಿಮರಿಗೆ ನೀಡಲಾಗಿದ್ದ ಶೇ.5ಮೀಸಲಾತಿ ರದ್ದು

ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…

8 hours ago

ಮೈಸೂರು | ಹೀಲಿಯಂ ಅನಿಲ ಬಲೂನ್‌ ನಿಷೇಧ ; ಕಮಿಷನರ್‌ ಆದೇಶ

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…

8 hours ago

ನಮೀಬಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…

8 hours ago

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

9 hours ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

9 hours ago