ಮಂಡ್ಯ

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ ರಸ್ತೆ ಬದಿಯ ಮರಗಳ ಸಮೀಕ್ಷೆ ನಡೆಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತ ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮದ್ದೂರಿನಲ್ಲಿಂದು ಜಿಲ್ಲಾ ಅರಣ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮಂಡ್ಯದ ೭ ವಲಯಗಳಲ್ಲಿರುವ ನರ್ಸರಿಗಳಲ್ಲಿ ತೇಗ, ಶ್ರೀಗಂಧ, ಹೊನ್ನೆ ಇತ್ಯಾದಿ ಗುಣಮಟ್ಟದ ಸಸಿಗಳನ್ನು ಬೆಳೆಸಿ ರೈತರಿಗೆ ವಿತರಿಸುವಂತೆ ಮತ್ತು ವಿತರಿಸಿದ ಸಸಿಗಳ ಪೈಕಿ ಎಷ್ಟು ಬದುಕುಳಿದಿವೆ ಎಂಬ ಬಗ್ಗೆ ಸಮೀಕ್ಷೆ ನಡೆಸುವಂತೆಯೂ ತಿಳಿಸಿದರು.

ಜಿಲ್ಲೆಯ ಹಲವೆಡೆ ಚಿರತೆಗಳ ಸಮಸ್ಯೆ ಪರಿಹಾರಕ್ಕೆ ತಕ್ಷಣವೇ ಕ್ರಮ ವಹಿಸುವಂತೆ ತಿಳಿಸಿದ ಅವರು, ಕಾಡಿನಂಚಿನ ಗ್ರಾಮದ ಜನರೊಂದಿಗೆ ಸೌಹಾರ್ಧ ಸಂಬಂಧ ಬೆಳೆಸಿಕೊಂಡರೆ, ಕಾಡ್ಗಿಚ್ಚು, ಕಳ್ಳಬೇಟೆ, ಅಕ್ರಮ ಮರ ಕಡಿತಲೆಯಂತಹ ಅಪರಾಧಗಳ ಬಗ್ಗೆ ತಕ್ಷಣದ ಮಾಹಿತಿ ಲಭಿಸುತ್ತದೆ. ವನ ಮತ್ತು ವನ್ಯಜೀವಿ ಸಂರಕ್ಷಣೆಯನ್ನು ಪರಿಣಾಮಕಾರಿಯಾಗಿ ಮಾಡಲು ಸಾಧ್ಯವಾಗುತ್ತದೆ ಎಂದರು.

ಜಿಯೋ ಟ್ಯಾಗ್ ಮಾಡಲು ಸೂಚನೆ
ಅರಣ್ಯ, ಕಾಡಿನಂಚಿನಲ್ಲಿರುವ ಪಟ್ಟಾ ಜಮೀನು, ಸರ್ಕಾರಿ ಜಾಗದಲ್ಲಿ ಬೆಳೆದಿರುವ ಶ್ರೀಗಂಧ, ರಕ್ತ ಚಂದನ, ಬೀಟೆ ಮತ್ತು ತೇಗದ ಮರಗಳ ಜಿಯೋ ಟ್ಯಾಗ್ ಮಾಡುವ ಮೂಲಕ ಯಾವುದೇ ಬೆಲೆ ಬಾಳುವ ವೃಕ್ಷ ಕಳುವಾಗದಂತೆ ಸಂರಕ್ಷಿಸಲು ಅರಣ್ಯ ಸಚಿವರು ಸೂಚಿಸಿದರು.

ಮಂಡ್ಯದಲ್ಲಿ ಮರಗಳ ಸಮೀಕ್ಷೆಗೆ ಆದೇಶ
ಮಂಡ್ಯ ನಗರದಲ್ಲಿ ಮನೆಯ ಮುಂದೆ, ರಸ್ತೆಯ ಬದಿಯಲ್ಲಿ ಬೆಳೆದ ಮರಗಳನ್ನು ಅಕ್ರಮವಾಗಿ ಕಡಿಯಲಾಗುತ್ತಿದೆ ಎಂಬ ಆರೋಪಗಳಿದ್ದು, ಮರಗಳ ಗಣತಿ ನಡೆಸಲು ಮತ್ತು ಅಕ್ರಮವಾಗಿ ಮರ ಕಡಿತಲೆ ಆಗದಂತೆ ಕ್ರಮ ವಹಿಸಲು ಸೂಚಿಸಿದರು.

೨ ಸಾವಿರ ಎಕರೆ ಅರಣ್ಯಭೂಮಿ ಒತ್ತುವರಿ
ಜಿಲ್ಲೆಯಲ್ಲಿ ಕರ್ನಾಟಕ ಅರಣ್ಯ ಕಾಯಿದೆ ಅಡಿ ಸೆಕ್ಷನ್ ೪ರ ಪ್ರಾಥಮಿಕ ಅಽಸೂಚನೆ ಆಗಿ ವರ್ಷಗಳೇ ಕಳೆದಿದ್ದರೂ ಸೆಕ್ಷನ್ ೧೭ರ ಅಡಿಯಲ್ಲಿ ಅರಣ್ಯ ಎಂದು ಘೋಷಣೆ ಆಗಿಲ್ಲ. ಎಲ್ಲೆಲ್ಲಿ ಅರಣ್ಯ ವ್ಯವಸ್ಥಾಪನಾಧಿಕಾರಿ (ಎಫ್‌ಎಸ್‌ಒ) ಇಲ್ಲವೋ ಅಲ್ಲಿಗೆ ಪ್ರಸ್ತಾವನೆ ಸಲ್ಲಿಸಿದರೆ ಅಧಿಕಾರಿಗಳನ್ನು ನೇಮಕ ಮಾಡುವುದಾಗಿ ತಿಳಿಸಿದರು. ಅದೇ ರೀತಿ ಜಿಲ್ಲೆಯಲ್ಲಿ ೨ ಸಾವಿರಕ್ಕೂ ಹೆಚ್ಚು ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದ್ದು, ಪಟ್ಟಾ ಜಮೀನೂ ಸೇರಿ ೩ ಎಕರೆಗಿಂತ ಕಡಿಮೆ ಒತ್ತುವರಿ ಹೊರತು ಪಡೆಸಿ, ಉಳಿದ ಎಲ್ಲ ಒತ್ತುವರಿ ಹಾಗೂ ೨೦೧೫ರ ನಂತರದ ಅರಣ್ಯ ಒತ್ತುವರಿ ತೆರವುಗೊಳಿಸಲು ಆದೇಶ ನೀಡಿದರು.

ಆನೆ-ಮಾನವ ಸಂಘರ್ಷ ನಿಯಂತ್ರಿಸಲು ಈ ತಿಂಗಳಲ್ಲೇ ರೈಲ್ವೆ ಬ್ಯಾರಿಕೇಡ್ ಮತ್ತು ಆನೆ ಕಂದಕ ಹಾಗೂ ಸೌರಬೇಲಿ ಕುರಿತಂತೆ ಸಭೆ ನಡೆಸುವುದಾಗಿಯೂ ಈಶ್ವರ ಖಂಡ್ರೆ ತಿಳಿಸಿದರು.
ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ರಘು, ಪ್ರಭುಗೌಡ ಪಾಟೀಲ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

20 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

20 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

20 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

20 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

20 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

20 hours ago