ಮಂಡ್ಯ

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ ರಸ್ತೆ ಬದಿಯ ಮರಗಳ ಸಮೀಕ್ಷೆ ನಡೆಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತ ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮದ್ದೂರಿನಲ್ಲಿಂದು ಜಿಲ್ಲಾ ಅರಣ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮಂಡ್ಯದ ೭ ವಲಯಗಳಲ್ಲಿರುವ ನರ್ಸರಿಗಳಲ್ಲಿ ತೇಗ, ಶ್ರೀಗಂಧ, ಹೊನ್ನೆ ಇತ್ಯಾದಿ ಗುಣಮಟ್ಟದ ಸಸಿಗಳನ್ನು ಬೆಳೆಸಿ ರೈತರಿಗೆ ವಿತರಿಸುವಂತೆ ಮತ್ತು ವಿತರಿಸಿದ ಸಸಿಗಳ ಪೈಕಿ ಎಷ್ಟು ಬದುಕುಳಿದಿವೆ ಎಂಬ ಬಗ್ಗೆ ಸಮೀಕ್ಷೆ ನಡೆಸುವಂತೆಯೂ ತಿಳಿಸಿದರು.

ಜಿಲ್ಲೆಯ ಹಲವೆಡೆ ಚಿರತೆಗಳ ಸಮಸ್ಯೆ ಪರಿಹಾರಕ್ಕೆ ತಕ್ಷಣವೇ ಕ್ರಮ ವಹಿಸುವಂತೆ ತಿಳಿಸಿದ ಅವರು, ಕಾಡಿನಂಚಿನ ಗ್ರಾಮದ ಜನರೊಂದಿಗೆ ಸೌಹಾರ್ಧ ಸಂಬಂಧ ಬೆಳೆಸಿಕೊಂಡರೆ, ಕಾಡ್ಗಿಚ್ಚು, ಕಳ್ಳಬೇಟೆ, ಅಕ್ರಮ ಮರ ಕಡಿತಲೆಯಂತಹ ಅಪರಾಧಗಳ ಬಗ್ಗೆ ತಕ್ಷಣದ ಮಾಹಿತಿ ಲಭಿಸುತ್ತದೆ. ವನ ಮತ್ತು ವನ್ಯಜೀವಿ ಸಂರಕ್ಷಣೆಯನ್ನು ಪರಿಣಾಮಕಾರಿಯಾಗಿ ಮಾಡಲು ಸಾಧ್ಯವಾಗುತ್ತದೆ ಎಂದರು.

ಜಿಯೋ ಟ್ಯಾಗ್ ಮಾಡಲು ಸೂಚನೆ
ಅರಣ್ಯ, ಕಾಡಿನಂಚಿನಲ್ಲಿರುವ ಪಟ್ಟಾ ಜಮೀನು, ಸರ್ಕಾರಿ ಜಾಗದಲ್ಲಿ ಬೆಳೆದಿರುವ ಶ್ರೀಗಂಧ, ರಕ್ತ ಚಂದನ, ಬೀಟೆ ಮತ್ತು ತೇಗದ ಮರಗಳ ಜಿಯೋ ಟ್ಯಾಗ್ ಮಾಡುವ ಮೂಲಕ ಯಾವುದೇ ಬೆಲೆ ಬಾಳುವ ವೃಕ್ಷ ಕಳುವಾಗದಂತೆ ಸಂರಕ್ಷಿಸಲು ಅರಣ್ಯ ಸಚಿವರು ಸೂಚಿಸಿದರು.

ಮಂಡ್ಯದಲ್ಲಿ ಮರಗಳ ಸಮೀಕ್ಷೆಗೆ ಆದೇಶ
ಮಂಡ್ಯ ನಗರದಲ್ಲಿ ಮನೆಯ ಮುಂದೆ, ರಸ್ತೆಯ ಬದಿಯಲ್ಲಿ ಬೆಳೆದ ಮರಗಳನ್ನು ಅಕ್ರಮವಾಗಿ ಕಡಿಯಲಾಗುತ್ತಿದೆ ಎಂಬ ಆರೋಪಗಳಿದ್ದು, ಮರಗಳ ಗಣತಿ ನಡೆಸಲು ಮತ್ತು ಅಕ್ರಮವಾಗಿ ಮರ ಕಡಿತಲೆ ಆಗದಂತೆ ಕ್ರಮ ವಹಿಸಲು ಸೂಚಿಸಿದರು.

೨ ಸಾವಿರ ಎಕರೆ ಅರಣ್ಯಭೂಮಿ ಒತ್ತುವರಿ
ಜಿಲ್ಲೆಯಲ್ಲಿ ಕರ್ನಾಟಕ ಅರಣ್ಯ ಕಾಯಿದೆ ಅಡಿ ಸೆಕ್ಷನ್ ೪ರ ಪ್ರಾಥಮಿಕ ಅಽಸೂಚನೆ ಆಗಿ ವರ್ಷಗಳೇ ಕಳೆದಿದ್ದರೂ ಸೆಕ್ಷನ್ ೧೭ರ ಅಡಿಯಲ್ಲಿ ಅರಣ್ಯ ಎಂದು ಘೋಷಣೆ ಆಗಿಲ್ಲ. ಎಲ್ಲೆಲ್ಲಿ ಅರಣ್ಯ ವ್ಯವಸ್ಥಾಪನಾಧಿಕಾರಿ (ಎಫ್‌ಎಸ್‌ಒ) ಇಲ್ಲವೋ ಅಲ್ಲಿಗೆ ಪ್ರಸ್ತಾವನೆ ಸಲ್ಲಿಸಿದರೆ ಅಧಿಕಾರಿಗಳನ್ನು ನೇಮಕ ಮಾಡುವುದಾಗಿ ತಿಳಿಸಿದರು. ಅದೇ ರೀತಿ ಜಿಲ್ಲೆಯಲ್ಲಿ ೨ ಸಾವಿರಕ್ಕೂ ಹೆಚ್ಚು ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದ್ದು, ಪಟ್ಟಾ ಜಮೀನೂ ಸೇರಿ ೩ ಎಕರೆಗಿಂತ ಕಡಿಮೆ ಒತ್ತುವರಿ ಹೊರತು ಪಡೆಸಿ, ಉಳಿದ ಎಲ್ಲ ಒತ್ತುವರಿ ಹಾಗೂ ೨೦೧೫ರ ನಂತರದ ಅರಣ್ಯ ಒತ್ತುವರಿ ತೆರವುಗೊಳಿಸಲು ಆದೇಶ ನೀಡಿದರು.

ಆನೆ-ಮಾನವ ಸಂಘರ್ಷ ನಿಯಂತ್ರಿಸಲು ಈ ತಿಂಗಳಲ್ಲೇ ರೈಲ್ವೆ ಬ್ಯಾರಿಕೇಡ್ ಮತ್ತು ಆನೆ ಕಂದಕ ಹಾಗೂ ಸೌರಬೇಲಿ ಕುರಿತಂತೆ ಸಭೆ ನಡೆಸುವುದಾಗಿಯೂ ಈಶ್ವರ ಖಂಡ್ರೆ ತಿಳಿಸಿದರು.
ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ರಘು, ಪ್ರಭುಗೌಡ ಪಾಟೀಲ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

3 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

3 hours ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

3 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಮೂಳೆಗಳು ಮುರಿಯುತ್ತಿದ್ದರೂ ಬದುಕು ಕಟ್ಟಿಕೊಂಡ ರಾಧಿಕಾ

ಪಂಜುಗಂಗೊಳ್ಳಿ  ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…

3 hours ago

ಪಣ್ಣೇದೊಡ್ಡಿ ಡೇರಿ ಆಡಳಿತ-ಹಾಲು ಉತ್ಪಾದಕರ ಮಾರಾಮಾರಿ

ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…

3 hours ago