ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಮಂಡ್ಯದಲ್ಲಿ ಭರ್ಜರಿ ಪ್ರಚಾರ ಆರಂಭ ಮಾಡಿದ್ದಾರೆ. ಮಂಡ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ನಾನು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನನ್ನ ಮೇಲೆ ವಿಶ್ವಾಸವಿಟ್ಟು ಈ ಬಾರಿ ಚುನಾವಣೆಯಲ್ಲಿ ಮತ ನೀಡಿ ಎಂದು ಎಚ್ಡಿಕೆ ಮನವಿ ಮಾಡಿಕೊಂಡಿದ್ದಾರೆ.
ಮಂಡ್ಯ ಜನರು ನನ್ನ ಮೇಲೆ ವಿಶ್ವಾಸ ಇಟ್ಟಿದ್ದಿರಾ. ನನ್ನಷ್ಟು ಬೇರೆ ಯಾವ ರಾಜಕೀಯ ನಾಯಕರು ಮಂಡ್ಯ ಜನರ ಕಷ್ಟಗಳಿಗೆ ಸ್ಪಂದಿಸಿಲ್ಲ. ಹಲವು ಜಿಲ್ಲೆಯಿಂದ ಮೈತ್ರಿ ನಾಯಕರು ನನ್ನನ್ನು ಚುನಾವಣಾ ಪ್ರಚಾರಕ್ಕೆ ಆಹ್ವಾನಿಸುತ್ತಿದ್ದಾರೆ. ಈ ಬಾರಿ ನನಗೆ ಮತ ನೀಡಿ ಗೆಲ್ಲಿಸಿ. ನಿಮಗಾಗಿ ದುಡಿಯಲು ಇನ್ನೊಮ್ಮೆ ಅವಕಾಶ ನೀಡಿ ಎಂದು ಕುಮಾರಸ್ವಾಮಿ ವಿನಂತಿಸಿದ್ದಾರೆ.
ಜೆಡಿಎಸ್ ಈಗ ಮುಗಿದೇ ಹೋಯ್ತು ಎಂದು ಕೆಲವರು ಹೇಳುತ್ತಿದ್ದಾರೆ. ನಮ್ಮ ಕಾರ್ಯಕರ್ತರು ನಮಗೆ ಯಾರು ಅನ್ಯಾಯ ಮಾಡಿಲ್ಲ. ಎಲ್ಲರಿಗೂ ನಮ್ಮ ಪಕ್ಷದ ಪರ ಒಲವು ಇದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಸ್ವಯಂಕೃತ ಅಪಾರಾಧಗಳಿಂದ ಸೋತಿದ್ದೇವೆ ಅಷ್ಟೆ.
ನನ್ನ ಕನಕಪುರ ಸ್ನೇಹಿತ ನನಗೆ ಅಮೃತ ಹಾಕಿದ್ದೇನೆ ಎಂದು ಹೇಳಿದ್ದಾರೆ. ಅದ್ಯಾವ ಅಮೃತ ಹಾಕಿದ್ದಾನೋ ಗೊತ್ತಿಲ್ಲ. ಇಂದು ಮಂಡ್ಯಕ್ಕೆ ಬಂದು ಏನೇನೋ ಹೇಳಿದ್ದಾರೆ. ಏನು ಹೇಳ್ತಾರೋ ಹೇಳಲಿ, ಈ ಎಲ್ಲಾ ಅಪಾದನೆಗಳಿಗೂ ಮಂಡ್ಯ ಜನರು ಉತ್ತರ ಕೊಡುತ್ತಾರೆ ಎನ್ನುವ ಮೂಲಕ ಡಿಕೆ ಶಿವಕುಮಾರ್ಗೆ ಟಾಂಗ್ ಕೊಟ್ಟಿರು.
ಮಡಿಕೇರಿ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬಾಳೆಲೆ ಗ್ರಾಮದಲ್ಲಿ ನಡೆದಿದೆ. ಕೃಷ್ಣ(11), ಹಾಗೂ ಗೌತಮ್(21)…
ಹನೂರು: ಗ್ರಾಮಕ್ಕೆ ವಿದ್ಯುತ್ ಸರಬರಾಜು ಕಲ್ಪಿಸಬೇಕೆಂದು ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಧರಣಿಯಲ್ಲಿ ವೃದ್ಧನೊಬ್ಬ ಅಸ್ವಸ್ಥಗೊಂಡು ಡೋಲಿಯಲ್ಲಿ ಆಸ್ಪತ್ರೆಗೆ ಕರೆತಂದಿರುವ ಘಟನೆ…
ಮುಂಬೈ: ಭಾರತೀಯ ಚಿತ್ರರಂಗದ ಗಾಯಕಿ ಆಶಾ ಭೋಸ್ಲೆ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಆಶಾ ಭೋಸ್ಲೆ ಅವರು…
ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ…
ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ಧಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಣಗುಪ್ಪೆ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್.15ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…