ಮಂಡ್ಯ

ಮೀಸಲಾತಿ ತಿದ್ದುಪಡಿಗೆ ಮಾಜಿ ಸಚಿವ ಎನ್.ಮಹೇಶ್‌ ಆಗ್ರಹ

ಮಂಡ್ಯ : ಒಳ ಮೀಸಲಾತಿಯಲ್ಲಿ ಅಲೆಮಾರಿ ಸೇರಿದಂತೆ ಅತಿ ಹಿಂದುಳಿದ ಸಮುದಾಯಗಳಿಗೆ ಅನ್ಯಾಯವಾಗಿದ್ದು, ಕೂಡಲೇ ಮೀಸಲಾತಿಗೆ ತಿದ್ದುಪಡಿ ತಂದು ಸರಿಪಡಿಸಲು ಸರ್ಕಾರ ಮುಂದಾಗಬೇಕು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಆಗ್ರಹಿಸಿದರು.

ವಿಧಾನಸಭೆಯ ಅಧಿವೇಶನ ಮುಗಿಯುವ ಕೊನೆ ವೇಳೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಶಿಷ್ಟ ಜಾತಿ ಸಮುದಾಯದ ಒಳಮೀಸಲಾತಿಗೆ ತಾರ್ಕಿಕ ಮತ್ತು ತಾತ್ವಿಕ ಅಂತ್ಯ ನೀಡಿರುವುದಾಗಿ ಹೇಳಿಕೆ ನೀಡಿದ್ದಾರೆ. ಅದಕ್ಕೆ ಪೂರಕವಾಗಿ ಆ.೨೫ರಂದು ಆದೇಶ ಹೋರಡಿಸಿದ್ದು, ಆದೇಶದಲ್ಲಿ ಯಾವುದೇ ತಾರ್ಕಿಕ ಮತ್ತು ತಾತ್ವಿಕ ಅಂಶಗಳು ಕಾಣುತ್ತಿಲ್ಲ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಒಳಮೀಸಲಾತಿ ಸಂಬಂಧ ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗವು ಅವರು ೫ ವರ್ಗಗಳನ್ನಾಗಿ ವಿಂಗಡಿಸಿದ್ದು, ಎ ವರ್ಗದಲ್ಲಿ ಅತಿ ಹಿಂದುಳಿದ ಪರಿಶಿಷ್ಟ ಸಮುದಾಯದ ೫,೨೨,೦೯೯ ಜನಸಂಖ್ಯೆಯ ೫೯ ಜಾತಿಗಳಿಗೆ ಶೇ.೧ರಷ್ಟು, ಬಿ ವರ್ಗದಲ್ಲಿ ಹೆಚ್ಚು ಹಿಂದುಳಿದ ಪರಿಶಿಷ್ಟ ಸಮುದಾಯದ ೩೬,೬೯,೨೪೬ ಜನಸಂಖ್ಯೆಯ ೧೮ ಜಾತಿಗಳಿಗೆ ಶೇ.೬ರಷ್ಟು, ಸಿ ವರ್ಗದಲ್ಲಿ ಹಿಂದುಳಿದ ಪರಿಶಿಷ್ಟ ಸಮುದಾಯದ ೩೦,೦೮,೬೩೩ ಜನಸಂಖ್ಯೆಯ ೧೭ ಜಾತಿಗಳಿಗೆ ಶೇ.೫ರಷ್ಟು, ಡಿ ವರ್ಗದಲ್ಲಿ ಕಡಿಮೆ ಹಿಂದುಳಿದ ಪರಿಶಿಷ್ಟ ಸಮುದಾಯದ ೨೮,೨೪,೯೩೯ ಜನಸಂಖ್ಯೆಯ ೪ ಜಾತಿಗಳಿಗೆ ಶೇ.೪ರಷ್ಟು ಹಾಗೂ ಇ ವರ್ಗದಲ್ಲಿ ೪,೭೪,೯೫೪ ಜನಸಂಖ್ಯೆಯ ಮೂಲ ಜಾತಿಯ ಹೆಸರು ನಮೂದಿಸದ (ಎಕೆ, ಎಡಿ, ಎಎ) ಜಾತಿಗಳಿಗೆ ಶೇ.೨ರಷ್ಟು ಮೀಸಲಾತಿ ಶಿಫಾರಸ್ಸು ಮಾಡಿದ್ದಾರೆ ಎಂದು ವಿವರಿಸಿದರು.

ಅಲೆಮಾರಿ ಹಾಗೂ ಅರೆ ಅಲೆಮಾರಿ, ಅಸಹಾಯ ಮತ್ತು ದುರ್ಬಲ ಸಮುದಾಯಗಳನ್ನು ವಿಂಗಡಿಸಿರುವ ನಾಗಮೋಹನ್‌ದಾಸ್ ವರದಿಯಲ್ಲಿ ಶೇ.೧ರಷ್ಟು ಮೀಸಲಾತಿ ನೀಡಿದ್ದರೂ ಇತರೆ ಪ್ರಬಲ ವರ್ಗಗಳನ್ನು ಸೇರಿಸಿದ ರಾಜ್ಯ ಸರ್ಕಾರ ಮಹಾಮೋಸ ಎಸಗಿದೆ. ಇದು ತಾತ್ವಿಕ ಮತ್ತು ತಾರ್ಕಿಕ ಎಂಬುದು ಸರಿಯೇ ಎಂದು ಪ್ರಶ್ನಿಸಿದರು.

ನಾಗಮೋಹನ್‌ದಾಸ್ ವರದಿಯ ಶಿಫಾರಸ್ಸನ್ನು ತಿದ್ದುಪಡಿ ಮಾಡಿಕೊಂಡ ಕಾಂಗ್ರೆಸ್ ಸರ್ಕಾರ ಮೂರು ವರ್ಗಗಳನ್ನಾಗಿ ವಿಂಗಡಿಸಿಕೊಂಡಿದೆ. ಶೇ ೬, ೬ ಮತ್ತು ೫ ರಷ್ಟು ಮೀಸಲಾತಿ ವಿಂಗಡಿಸಿ, ೧೦೧ ಜಾತಿಗಳ ಪೈಕಿ ೯೮ ಜಾತಿಗಳನ್ನು ಮಾತ್ರ ತೋರಿಸಿದ್ದು, ಕಾನೂನುಬದ್ಧ ಪರಿಶೀಲನೆಯಲ್ಲಿ ಸಮಸ್ಯೆ ಎದುರಾಗುತ್ತದೆ. ಅನುಚ್ಛೇತ ೧೯೨ರ ಪ್ರಕಾರ ಜಾತಿಗಳನ್ನು ಸೇರಿಸಲು ಅಥವಾ ತೆಗೆಯಲು ಕೇಂದ್ರ ಸರ್ಕಾರಕ್ಕೆ ಹೊರತುಪಡಿಸಿ ರಾಜ್ಯ ಸರ್ಕಾರಕ್ಕೆ ಅವಕಾಶವಿಲ್ಲ. ಈ ಸಂಬಂಧ ಯಾರಾದರೂ ನ್ಯಾಯಾಲಯದ ಮೆಟ್ಟಿಲೇರಿದರೆ, ಸದರಿ ಮೀಸಲಾತಿಗೆ ನ್ಯಾಯಾಲಯ ತಡೆ ನೀಡಲು ಇದೋಂದು ಕಾರಣ ಸಾಕಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ತಮ್ಮ ಆದೇಶಕ್ಕೆ ತಿದ್ದುಪಡಿ ತರಬೇಕು. ಇಲ್ಲವಾದಲ್ಲಿ ತಮ್ಮ ಆದೇಶ ಊರ್ಜಿತವಾಗಬಾರದೆಂದು ತಾವೇ ಬೇಕೆಂತಲೇ ಆದೇಶ ಮಾಡಿದಂತಾಗುತ್ತದೆ. ರಾಜ್ಯ ಸರ್ಕಾರ ತನ್ನ ಹಣಕಾಸಿನ ಮುಗ್ಗಟ್ಟಿನಿಂದ ಮೀಸಲಾತಿ ಜಾರಿಯಾಗದಂತೆ ತಡೆಯಲೆಂದೇ ಒಳಮೀಸಲಾತಿ ಆದೇಶ ಮಾಡಿದಂತೆ ಕಾಣುತ್ತಿದೆ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಬಿಜೆಪಿ ಎಸ್ಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಪರಮಾನಂದ, ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಮಾಧ್ಯಮ ವಕ್ತಾರ ನಾಗಾನಂದ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

10 hours ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

11 hours ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

11 hours ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

11 hours ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

11 hours ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

11 hours ago