ಮಂಡ್ಯ

ಮೀಸಲಾತಿ ತಿದ್ದುಪಡಿಗೆ ಮಾಜಿ ಸಚಿವ ಎನ್.ಮಹೇಶ್‌ ಆಗ್ರಹ

ಮಂಡ್ಯ : ಒಳ ಮೀಸಲಾತಿಯಲ್ಲಿ ಅಲೆಮಾರಿ ಸೇರಿದಂತೆ ಅತಿ ಹಿಂದುಳಿದ ಸಮುದಾಯಗಳಿಗೆ ಅನ್ಯಾಯವಾಗಿದ್ದು, ಕೂಡಲೇ ಮೀಸಲಾತಿಗೆ ತಿದ್ದುಪಡಿ ತಂದು ಸರಿಪಡಿಸಲು ಸರ್ಕಾರ ಮುಂದಾಗಬೇಕು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಆಗ್ರಹಿಸಿದರು.

ವಿಧಾನಸಭೆಯ ಅಧಿವೇಶನ ಮುಗಿಯುವ ಕೊನೆ ವೇಳೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಶಿಷ್ಟ ಜಾತಿ ಸಮುದಾಯದ ಒಳಮೀಸಲಾತಿಗೆ ತಾರ್ಕಿಕ ಮತ್ತು ತಾತ್ವಿಕ ಅಂತ್ಯ ನೀಡಿರುವುದಾಗಿ ಹೇಳಿಕೆ ನೀಡಿದ್ದಾರೆ. ಅದಕ್ಕೆ ಪೂರಕವಾಗಿ ಆ.೨೫ರಂದು ಆದೇಶ ಹೋರಡಿಸಿದ್ದು, ಆದೇಶದಲ್ಲಿ ಯಾವುದೇ ತಾರ್ಕಿಕ ಮತ್ತು ತಾತ್ವಿಕ ಅಂಶಗಳು ಕಾಣುತ್ತಿಲ್ಲ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಒಳಮೀಸಲಾತಿ ಸಂಬಂಧ ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗವು ಅವರು ೫ ವರ್ಗಗಳನ್ನಾಗಿ ವಿಂಗಡಿಸಿದ್ದು, ಎ ವರ್ಗದಲ್ಲಿ ಅತಿ ಹಿಂದುಳಿದ ಪರಿಶಿಷ್ಟ ಸಮುದಾಯದ ೫,೨೨,೦೯೯ ಜನಸಂಖ್ಯೆಯ ೫೯ ಜಾತಿಗಳಿಗೆ ಶೇ.೧ರಷ್ಟು, ಬಿ ವರ್ಗದಲ್ಲಿ ಹೆಚ್ಚು ಹಿಂದುಳಿದ ಪರಿಶಿಷ್ಟ ಸಮುದಾಯದ ೩೬,೬೯,೨೪೬ ಜನಸಂಖ್ಯೆಯ ೧೮ ಜಾತಿಗಳಿಗೆ ಶೇ.೬ರಷ್ಟು, ಸಿ ವರ್ಗದಲ್ಲಿ ಹಿಂದುಳಿದ ಪರಿಶಿಷ್ಟ ಸಮುದಾಯದ ೩೦,೦೮,೬೩೩ ಜನಸಂಖ್ಯೆಯ ೧೭ ಜಾತಿಗಳಿಗೆ ಶೇ.೫ರಷ್ಟು, ಡಿ ವರ್ಗದಲ್ಲಿ ಕಡಿಮೆ ಹಿಂದುಳಿದ ಪರಿಶಿಷ್ಟ ಸಮುದಾಯದ ೨೮,೨೪,೯೩೯ ಜನಸಂಖ್ಯೆಯ ೪ ಜಾತಿಗಳಿಗೆ ಶೇ.೪ರಷ್ಟು ಹಾಗೂ ಇ ವರ್ಗದಲ್ಲಿ ೪,೭೪,೯೫೪ ಜನಸಂಖ್ಯೆಯ ಮೂಲ ಜಾತಿಯ ಹೆಸರು ನಮೂದಿಸದ (ಎಕೆ, ಎಡಿ, ಎಎ) ಜಾತಿಗಳಿಗೆ ಶೇ.೨ರಷ್ಟು ಮೀಸಲಾತಿ ಶಿಫಾರಸ್ಸು ಮಾಡಿದ್ದಾರೆ ಎಂದು ವಿವರಿಸಿದರು.

ಅಲೆಮಾರಿ ಹಾಗೂ ಅರೆ ಅಲೆಮಾರಿ, ಅಸಹಾಯ ಮತ್ತು ದುರ್ಬಲ ಸಮುದಾಯಗಳನ್ನು ವಿಂಗಡಿಸಿರುವ ನಾಗಮೋಹನ್‌ದಾಸ್ ವರದಿಯಲ್ಲಿ ಶೇ.೧ರಷ್ಟು ಮೀಸಲಾತಿ ನೀಡಿದ್ದರೂ ಇತರೆ ಪ್ರಬಲ ವರ್ಗಗಳನ್ನು ಸೇರಿಸಿದ ರಾಜ್ಯ ಸರ್ಕಾರ ಮಹಾಮೋಸ ಎಸಗಿದೆ. ಇದು ತಾತ್ವಿಕ ಮತ್ತು ತಾರ್ಕಿಕ ಎಂಬುದು ಸರಿಯೇ ಎಂದು ಪ್ರಶ್ನಿಸಿದರು.

ನಾಗಮೋಹನ್‌ದಾಸ್ ವರದಿಯ ಶಿಫಾರಸ್ಸನ್ನು ತಿದ್ದುಪಡಿ ಮಾಡಿಕೊಂಡ ಕಾಂಗ್ರೆಸ್ ಸರ್ಕಾರ ಮೂರು ವರ್ಗಗಳನ್ನಾಗಿ ವಿಂಗಡಿಸಿಕೊಂಡಿದೆ. ಶೇ ೬, ೬ ಮತ್ತು ೫ ರಷ್ಟು ಮೀಸಲಾತಿ ವಿಂಗಡಿಸಿ, ೧೦೧ ಜಾತಿಗಳ ಪೈಕಿ ೯೮ ಜಾತಿಗಳನ್ನು ಮಾತ್ರ ತೋರಿಸಿದ್ದು, ಕಾನೂನುಬದ್ಧ ಪರಿಶೀಲನೆಯಲ್ಲಿ ಸಮಸ್ಯೆ ಎದುರಾಗುತ್ತದೆ. ಅನುಚ್ಛೇತ ೧೯೨ರ ಪ್ರಕಾರ ಜಾತಿಗಳನ್ನು ಸೇರಿಸಲು ಅಥವಾ ತೆಗೆಯಲು ಕೇಂದ್ರ ಸರ್ಕಾರಕ್ಕೆ ಹೊರತುಪಡಿಸಿ ರಾಜ್ಯ ಸರ್ಕಾರಕ್ಕೆ ಅವಕಾಶವಿಲ್ಲ. ಈ ಸಂಬಂಧ ಯಾರಾದರೂ ನ್ಯಾಯಾಲಯದ ಮೆಟ್ಟಿಲೇರಿದರೆ, ಸದರಿ ಮೀಸಲಾತಿಗೆ ನ್ಯಾಯಾಲಯ ತಡೆ ನೀಡಲು ಇದೋಂದು ಕಾರಣ ಸಾಕಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ತಮ್ಮ ಆದೇಶಕ್ಕೆ ತಿದ್ದುಪಡಿ ತರಬೇಕು. ಇಲ್ಲವಾದಲ್ಲಿ ತಮ್ಮ ಆದೇಶ ಊರ್ಜಿತವಾಗಬಾರದೆಂದು ತಾವೇ ಬೇಕೆಂತಲೇ ಆದೇಶ ಮಾಡಿದಂತಾಗುತ್ತದೆ. ರಾಜ್ಯ ಸರ್ಕಾರ ತನ್ನ ಹಣಕಾಸಿನ ಮುಗ್ಗಟ್ಟಿನಿಂದ ಮೀಸಲಾತಿ ಜಾರಿಯಾಗದಂತೆ ತಡೆಯಲೆಂದೇ ಒಳಮೀಸಲಾತಿ ಆದೇಶ ಮಾಡಿದಂತೆ ಕಾಣುತ್ತಿದೆ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಬಿಜೆಪಿ ಎಸ್ಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಪರಮಾನಂದ, ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಮಾಧ್ಯಮ ವಕ್ತಾರ ನಾಗಾನಂದ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

2 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

3 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

4 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

7 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

7 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

7 hours ago