ಮಂಡ್ಯ: ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 13 ಜನ ಆರೋಪಿಗಳನ್ನು ಬಂಧಿಸಿ ಅನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
ಇತ್ತ ಮಂಡ್ಯದ ಮಗ ಎಂದೇ ಖ್ಯಾತಿಯಾಗಿರುವ ದರ್ಶನ್ ವಿರುದ್ಧ ಮಂಡ್ಯದ ರೈತರೆಲ್ಲರೂ ಮುಗಿಬಿದ್ದಿದ್ದಾರೆ.
ಮಂಡ್ಯದ ಸಂಜಯ್ ವೃತ್ತದಿಂದ ವಿಶ್ವೇಶ್ವರಯ್ಯ ಪ್ರತಿಮೆಯವರೆಗೆ ಕರ್ನಾಟಕ ರಾಜ್ಯ ರೈತ ಸಂಘ ರ್ಯಾಲಿ ನಡೆಸಿ ನಟ ದರ್ಶನ್ಗೆ ಶಿಕ್ಷೆ ಆಗುವಂತೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ 420, ಕೊಲೆಗಡುಕ ದರ್ಶನ್ಗೆ ಗಲ್ಲು ಶಿಕ್ಷೆಯಾಗುವ ವರೆಗೂ ಹೋರಾಟ ಮಾಡಲಾಗುವುದು ಎಂದು ಬ್ಯಾನರ್, ನಾಮ ಫಲಕಗಳನ್ನು ಹಿಡಿದು ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ಪ್ರತಿಭಟನೆ ನಡೆಸಿದರು.
ಇತ್ತ ಚನ್ನಪಟ್ಟಣದಲ್ಲಿಯೂ ಸಹಾ ಡಾ. ರಾಜ್ಕುಮಾರ್ ಅಭಿಮಾನಿ ಬಳಗದಿಂದ ಬೃಹತ್ ಪ್ರತಿಭಟನೆ ನಡೆಯಿತು. ದರ್ಶನ್ ಸೇರಿದಂತೆ ಇತರೆ ಕನ್ನಡ ನಾಯಕ ನಟರು ಡಾ. ರಾಜ್ಕುಮಾರ್ ಆದರ್ಶ ಪಾಲಿಸಬೇಕು. ಕೇವಲ ಹಣಕ್ಕಾಗಿ ಕಲಾವಿದರಾಗುವುದು ಬೇಡ. ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಕಾನೂನಾತ್ಮಕವಾಗಿ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.
ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನಲ್ಲಿ ಹುಲಿಯೊಂದು ನೀರಿನಲ್ಲಿ ಮುಳುಗಿ ವಿಶ್ರಮಿಸುತ್ತಿರುವ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ. ರಾಜ್ಯದಲ್ಲಿ ದಿನದಿಂದ…
ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನ ಕಾಡಂಚಿನ ಪ್ರದೇಶದಲ್ಲಿ ವನ್ಯಜಜೀವಿಗಳನ್ನು ಬೇಟೆಯಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಕೂತಿ ಗ್ರಾಮದ…
ಮಡಿಕೇರಿಗೆ ಬಂದಿದ್ದ ಕೇರಳ ಮೂಲದ ಟ್ರೆಕ್ಕರ್ ಮಡಿಕೇರಿ: ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಚಾರಣಕ್ಕೆ ತೆರಳಿದ್ದಾಗ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ…
ಸೌಲಭ್ಯ ಮತ್ತೆ ಮುಂದುವರಿಯಲಿ ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ರೂ.೪೪೯.೧೩ ಕೋಟಿ ರೂಪಾಯಿಗೂ ಹೆಚ್ಚು…
ಇತ್ತೀಚಿನ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ( ಎಫ್. ಸಿ. ಆರ್. ಎ) ತಿದ್ದುಪಡಿಗಳು ಕೇವಲ ನಿಯಮಗಳಲ್ಲ, ಅವು ದಶಕಗಳಿಂದ…