ಮಂಡ್ಯ

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು ನಿರ್ಮಾಣವನ್ನು ಆರಂಭಿಸುವುದಾಗಿ ಜಲಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಸರ್.ಎಂ.ವಿ.ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿದ್ದ 80 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು, ನೂತನವಾಗಿ ಜಲಸಂಪನ್ಮೂಲ ಖಾತೆಯ ಅಧಿಕಾರ ವಹಿಸಿಕೊಂಡ 24 ಗಂಟೆಗಳಲ್ಲಿ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆದು ಮೇಕೆದಾಟು ಯೋಜನೆಯ ಪರಿಷ್ಕೃತ ಡಿಪಿಆರ್ ಸಲ್ಲಿಕೆಗೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

ಅಣೆಕಟ್ಟೆ ನಿರ್ಮಾಣಕ್ಕೆ ಇರುವ ಅಡೆತಡೆಗಳನ್ನು ನಿವಾರಿಸಿ ಅಗತ್ಯ ಅನುಮತಿ ಪಡೆದು ಮುಂದಿನ ಸ್ವಾತಂತ್ರ ದಿನಾಚರಣೆ ವೇಳೆಗೆ ಯೋಜನೆಯ ಕಾಮಗಾರಿ ಕಾರ್ಯಾರಂಭಗೊಳಿಸಲು ಉತ್ಸುಕನಾಗಿದ್ದು, ಮುಖ್ಯಮಂತ್ರಿಗಳು ಸಹ ಈ ವಿಚಾರದಲ್ಲಿ ಸಂಪೂರ್ಣ ಸಹಕಾರ ನೀಡಿದ್ಧಾರೆಂದು ತಿಳಿಸಿದರು.

ರಾಜ್ಯದ ನೀರಾವರಿ ಯೋಜನೆಗಳ ಆರಂಭಕ್ಕೆ ಉಂಟಾಗಿರುವ ತಾಂತ್ರಿಕ ತೊಡಕುಗಳನ್ನು ನಿವಾರಿಸಲು ಸಂಸದ ಪ್ರಕಾಶ್ ಹುಕ್ಕೇರಿ ನೇತೃತ್ವದಲ್ಲಿ ನೀರಾವರಿ ತಜ್ಞರು ಹಾಗೂ ಅಧಿಕಾರಿಗಳು ಸಮಿತಿ ರಚಿಸಿ ಕೃ‍ಷ್ಣ, ಕಾವೇರಿ, ಮಹದಾಯಿ ಯೋಜನೆಗಳ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ದೆಹಲಿಯಲ್ಲಿ ಅಗತ್ಯ ಕ್ರಮವಹಿಸಲಾಗುವುದು ಎಂದು ವಿವರಿಸಿದರು.

ಮೇಕೆದಾಟು ಯೋಜನೆಗೆ ಮುಳುಗಡೆಯಾಗಲಿರುವ 12.500 ಎಕರೆ ಅರಣ್ಯಭೂಮಿಗೆ ಪರ್ಯಾಯ ಜಮೀನು ನೀಡಲು ಈಗಾಗಲೇ 20 ಸಾವಿರ ಎಕರೆ ಜಮೀನು ಗುರುತಿಸಲಾಗಿದ್ದು, ಸದರಿ ಜಮೀನಿನ ಪೈಕಿ 12.500 ಎಕರೆ ಜಮೀನನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಿ ಕಾಮಗಾರಿ ಆರಂಭಕ್ಕೆ ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಕಾವೇರಿ ನದಿ ಪಾತ್ರದ 4 ಜಲಾಶಯಗಳಲ್ಲಿ ಪ್ರಸ್ತುತ 90 ಟಿಎಂಸಿ ನೀರು ಲಭ್ಯವಿದ್ದು, ಪ್ರಕೃತಿಯು ಸಹ ಪೂರಕವಾಗಿದೆ. ಆಗಸ್ಟ್ ಅಥವಾ ಸೆಪ್ಟೆಂಬರ್ ನಲ್ಲಿ ಜಲಾಶಯ ಭರ್ತಿಯಾಗುವ ನಿರೀಕ್ಷೆ ಇದ್ದು, ಈಗಾಗಲೇ ಹೇಮಾವತಿ ನದಿ ಪಾತ್ರದ ರೈತರ ಜಮೀನಿಗೆ ನೀರು ಹರಿಸಲಾಗಿದ್ದು, ಒಂಡೆರಡು ದಿನಗಳಲ್ಲಿ ಕೆ.ಆರ್.ಎಸ್. ಸಲಹಾ ಸಮಿತಿ ಸಭೆ ಕರೆದು ಅಲ್ಪಾವಧಿ ಬೆಳೆಗೆ ನೀರು ಹರಿಸಲು ಕ್ರಮ ವಹಿಸಲಾಗುವುದು ಎಂದರು.

ಕಾವೇರಿ ನದಿ ಪಾತ್ರದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಸಂಕಷ್ಟ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರಕ್ಕೆ ವಿಪಕ್ಷಗಳು ಹಾಗೂ ಸಂಘಟನೆಗಳು ಸಹಕಾರ ನೀಡಬೇಕು, ರಾಜ್ಯದ ಹಿತದೃಷ್ಠಿ ಹಾಗೂ ರೈತರ ಅಪೇಕ್ಷೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಅಗತ್ಯ ಕ್ರಮ ವಹಿಸಲಿದೆ ಎಂದರು.

 

ಆಂದೋಲನ ಡೆಸ್ಕ್

Recent Posts

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

57 mins ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

2 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

2 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

2 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

4 hours ago

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

7 hours ago