ಮದ್ದೂರು : ಸರಕು ಸಾಗಾಣಿಕೆ ಟೆಂಪೋ ಹಿಂದಕ್ಕೆ ಸಂಚರಿಸುವ ವೇಳೆ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸಾವನಪ್ಪಿದ ಘಟನೆ ತಾಲೂಕಿನ ಡಿ.ಹೊಸೂರು ಗ್ರಾಮದಲ್ಲಿ ನಡೆದಿದೆ.
ಮೂರು ವರ್ಷದ ರೀಫಾ ಸಾವನ್ನಪ್ಪಿದ ದುರ್ದೈವಿ ಬಾಲಕಿ ಯಾಗಿದ್ದು, ಹಾಲು ತರಲು ಹೊಗಿದ್ದ ಬಾಲಕಿ ಕ್ಷಣಾರ್ಧದಲ್ಲಿ ಸಾವನ್ನಪ್ಪಿರುವುದು ದುರ್ದೈವದ ಸಂಗತಿಯಾಗಿದೆ.
ಸರ್ವರ್ ಖಾನ್ ಗ್ರಾಮದ ರಾಜಶೇಖರ್ ರವರ ಮನೆಯಲ್ಲಿ ಬಾಡಿಗೆಗೆ ಇದ್ದರು, ಇವರ ಪುತ್ರಿ ರೀಫಾ ದಿನನಿತ್ಯದಂತೆ ಹಾಲು ತರಲು ಡೈರಿಗೆ ಬೆಳಿಗ್ಗೆ ಹೋಗಿದ್ದಳು. ಹಾಲು ಖರೀದಿಸಿ ಮನೆಗೆ ಪಾಪಸ್ಸಾಗುವಾಗ ರಸ್ತೆಯಲ್ಲಿ ನಿಂತಿದ್ದ ಮಹೇಂದ್ರ ಮಿನಿ ಗೂಡ್ಸ್ ವಾಹನ ( KA06-AB-0154)ವನ್ನು ಚಾಲಕ ಗಂಗಾಧರ್ ಹಿಂದಕ್ಕೆ ಚಲಾಯಿಸುತ್ತಿದ್ದು,ಹಿಂದೆ ಇದ್ದ ಬಾಲಕಿಗೆ ಡಿಕ್ಕಿ ಹೊಡೆದಿದೆ,ನೆಲಕ್ಕೆ ಬಿದ್ದ ಬಾಲಕಿಯ ಮೇಲೆ ವಾಹನದ ಚಕ್ರ ಹರಿದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದ್ದಾಳೆ.
ಬಾಲಕಿ ಪೋಷಕರು ಮತ್ತು ಸಂಬಂಧಿಕರ ರೋಧನ ಮುಗಿಲು ಮುಟ್ಟಿತ್ತು, ಚಾಲಕನ ಅಜಾಗರೂಕತೆ ವಿರುದ್ಧ ಆಕ್ರೋಶಿಸಿದ ಸ್ಥಳೀಯರು ಕ್ರಮಕ್ಕೆ ಒತ್ತಾಯಿಸಿದರು.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಬಾಲಕಿಯ ಮೃತದೇಹವನ್ನು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದು,ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…