ಮದ್ದೂರು : ಸರಕು ಸಾಗಾಣಿಕೆ ಟೆಂಪೋ ಹಿಂದಕ್ಕೆ ಸಂಚರಿಸುವ ವೇಳೆ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸಾವನಪ್ಪಿದ ಘಟನೆ ತಾಲೂಕಿನ ಡಿ.ಹೊಸೂರು ಗ್ರಾಮದಲ್ಲಿ ನಡೆದಿದೆ.
ಮೂರು ವರ್ಷದ ರೀಫಾ ಸಾವನ್ನಪ್ಪಿದ ದುರ್ದೈವಿ ಬಾಲಕಿ ಯಾಗಿದ್ದು, ಹಾಲು ತರಲು ಹೊಗಿದ್ದ ಬಾಲಕಿ ಕ್ಷಣಾರ್ಧದಲ್ಲಿ ಸಾವನ್ನಪ್ಪಿರುವುದು ದುರ್ದೈವದ ಸಂಗತಿಯಾಗಿದೆ.
ಸರ್ವರ್ ಖಾನ್ ಗ್ರಾಮದ ರಾಜಶೇಖರ್ ರವರ ಮನೆಯಲ್ಲಿ ಬಾಡಿಗೆಗೆ ಇದ್ದರು, ಇವರ ಪುತ್ರಿ ರೀಫಾ ದಿನನಿತ್ಯದಂತೆ ಹಾಲು ತರಲು ಡೈರಿಗೆ ಬೆಳಿಗ್ಗೆ ಹೋಗಿದ್ದಳು. ಹಾಲು ಖರೀದಿಸಿ ಮನೆಗೆ ಪಾಪಸ್ಸಾಗುವಾಗ ರಸ್ತೆಯಲ್ಲಿ ನಿಂತಿದ್ದ ಮಹೇಂದ್ರ ಮಿನಿ ಗೂಡ್ಸ್ ವಾಹನ ( KA06-AB-0154)ವನ್ನು ಚಾಲಕ ಗಂಗಾಧರ್ ಹಿಂದಕ್ಕೆ ಚಲಾಯಿಸುತ್ತಿದ್ದು,ಹಿಂದೆ ಇದ್ದ ಬಾಲಕಿಗೆ ಡಿಕ್ಕಿ ಹೊಡೆದಿದೆ,ನೆಲಕ್ಕೆ ಬಿದ್ದ ಬಾಲಕಿಯ ಮೇಲೆ ವಾಹನದ ಚಕ್ರ ಹರಿದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದ್ದಾಳೆ.
ಬಾಲಕಿ ಪೋಷಕರು ಮತ್ತು ಸಂಬಂಧಿಕರ ರೋಧನ ಮುಗಿಲು ಮುಟ್ಟಿತ್ತು, ಚಾಲಕನ ಅಜಾಗರೂಕತೆ ವಿರುದ್ಧ ಆಕ್ರೋಶಿಸಿದ ಸ್ಥಳೀಯರು ಕ್ರಮಕ್ಕೆ ಒತ್ತಾಯಿಸಿದರು.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಬಾಲಕಿಯ ಮೃತದೇಹವನ್ನು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದು,ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…