ಮಂಡ್ಯ : ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ನಾಲ್ಕು ದಿನಗಳ ಹಿಂದಷ್ಟೆ ಅಳವಡಿಸಲಾಗಿದ್ದ ಸ್ಪೀಡ್ ಡಿಟೆಕ್ಟರ್ಗಳು ಇಂದು ಕೈಕೊಟ್ಟಿವೆ.
ಹೆದ್ದಾರಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಸ್ಪೀಡ್ ಲಿಮಿಟ್ ಜಾರಿ ಮಾಡಲಾಗಿದೆ. ಇದನ್ನು ನಿಯಂತ್ರಿಸುವ ಸಲುವಾಗಿ ಮಂಡ್ಯದ ಉಮ್ಮಡಹಳ್ಳಿ ಗೇಟ್ ಬಳಿ ಸೋಲರ್ ಶಕ್ತಿಯಿಂದ ಕಾರ್ಯ ನಿರ್ವಹಿಸುವ ಸ್ಪೀಡ್ ಡಿಟೆಕ್ಟರ್ ಹಾಗೂ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಆದರೆ ಈ ಕ್ಯಾಮೆರಾಗಳು ನಾಲ್ಕೇ ದಿನಕ್ಕೆ ಹಾಳಾಗಿವೆ.
ಜುಲೈ 29 ರಿಂದ ಎಐ ಕ್ಯಾಮೆರಾಗಳ ಜೊತೆ ಸ್ಪೀಡ್ ಡಿಟೆಕ್ಟರ್ಗಳು ಕಾರ್ಯನಿರ್ವಹಿಸುತ್ತಿದ್ದವು. ಈ ಡಿಟೆಕ್ಟರ್ಗಳನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದರು. ಈ ಯೋಜನೆಗೆ ಲಕ್ಷಾಂತರ ರೂ.ಗಳನ್ನು ವಿನಿಯೋಗಿಸಲಾಗಿದೆ.
ರಾಜ್ಯ ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಆದೇಶದ ಮೇರೆಗೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವ ಕ್ಯಾಮೆರಾವನ್ನು ಅಳವಡಿಕೆ ಮಾಡಲಾಗಿತ್ತು. ವೇಗದ ಮಿತಿ ಮೀರಿದರೆ ವಾಹನದ ನಂಬರ್ನಿಂದ ಆರ್ಟಿಒ ಸಂಪರ್ಕ ಪಡೆದು ಮೊಬೈಲಿಗೆ ದಂಡ ಪಾವತಿಸುವಂತೆ ನೋಟಿಸ್ ಬರುವಂತೆ ತಂತ್ರಜ್ಞಾನ ರೂಪಿಸಲಾಗಿತ್ತು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…