ಮಂಡ್ಯ :ತಾಲೂಕಿನ ಬೂದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ರಹಿತರಿಗೆ ಸರಕಾರಿ ಭೂಮಿಯಲ್ಲಿ ನಿವೇಶನ ಹಂಚಿಕೆಗೆ ಕ್ರಮ ವಹಿಸುವಂತೆ ಒತ್ತಾಯಿಸಿ ನಗರದಲ್ಲಿಅ.19ರಂದು, ಜೈಲ್ ಭರೋ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಸ್ವಂತ ಮನೆ-ನಮ್ಮ ಹಕ್ಕು ಹೋರಾಟ ಸಮಿತಿಯ ಕಾನೂನು ಸಲಹೆಗಾರ, ವಕೀಲ ಜೆ.ರಾಮಯ್ಯ ತಿಳಿಸಿದ್ದಾರೆ.
ನಮ್ಮ ಹಕ್ಕು ನಮ್ಮ ಹೋರಾಟ ಸಮಿತಿಯು ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದ ಪರಿಣಾಮ ಮಂಡ್ಯ ಜಿಲ್ಲೆ ಬೂದನೂರು ಗ್ರಾಮದ ಸರ್ವೇ ನಂ.190ರಲ್ಲಿನ 2 ಎಕರೆ ಜಮೀನನನ್ನು ಮಾನವ ಅಭಿವೃದ್ಧಿಗೆ ಪೂರಕ ಕೆಲಸಗಳಿಗೆ ಬಳಸಲು ಕಾಯ್ದಿರಿಸಲಾಗಿದೆ. ಆದರೆ ಈ ಭೂಮಿಯನ್ನು ನಿವೇಶನ ರಹಿತರಿಗೆ ಹಸ್ತಾಂತರಿಸಲು ಕಂದಾಯ ಅಧಿಕಾರಿಗಳು ತೊಡಕಾಗಿದ್ದಾರೆ ಎಂದು ಸಮಿತಿಯ ಕಾನೂನು ಸಲಹೆಗಾರ, ವಕೀಲ ಜೆ.ರಾಮಯ್ಯ ಆರೋಪಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…