ಮಂಡ್ಯ

ಇಂದಿನಿಂದ ನಾಲ್ಕು ದಿನಗಳ ಕಾಲ ಶ್ರೀರಂಗಪಟ್ಟಣ ದಸರಾ ಮಹೋತ್ಸವ

ಮಂಡ್ಯ: ಇಂದಿನಿಂದ ನಾಲ್ಕು ದಿನಗಳ ಕಾಲ ಮಂಡ್ಯದ ಶ್ರೀರಂಗಪಟ್ಟಣ ದಸರಾ ಉತ್ಸವ ನಡೆಯಲಿದೆ.

ಇಂದಿನ ನಾಲ್ಕು ದಿನಗಳ ಕಾಲ ನಡೆಯಲಿರುವ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ನಟ, ನಿರ್ದೇಶಕ ಟಿ.ಎಸ್.ನಾಗಾಭರಣ ಅವರು ಮಧ್ಯಾಹ್ನ 2.30ರಿಂದ 3 ಗಂಟೆಗೆ ಸಲ್ಲುವ ಶುಭ ಲಗ್ನದಲ್ಲಿ ಚಾಲನೆ ನೀಡಲಿದ್ದಾರೆ.

ಶ್ರೀರಂಗಪಟ್ಟಣದ ಕಿರಂಗೂರು ಬಳಿ ಬನ್ನಿಮಂಟಪದಲ್ಲಿ ಪೂಜಾ ಕೈಂಕರ್ಯ ನೆರವೇರಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಗುತ್ತದೆ.

ಇದನ್ನು ಓದಿ : ಶ್ರೀರಂಗಪಟ್ಟಣ ದಸರಾಗೆ ಮಹೇಂದ್ರ, ರೂಪ ಹಾಗೂ ಕಾವೇರಿ ಆನೆಗಳು ಆಯ್ಕೆ: ಡಿಸಿಎಫ್ ಪ್ರಭುಗೌಡ

ಇದಾದ ಬಳಿಕ ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮೂಲಕ ಜಂಬೂಸವಾರಿಗೂ ಚಾಲನೆ ನೀಡಲಾಗುತ್ತದೆ. ಶ್ರೀರಂಗಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಜಂಬೂಸವಾರಿ ಮೆರವಣಿಗೆ ಸಾಗಲಿದೆ.

ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿರುವ ಮಹೇಂದ್ರ ಆನೆ ಅಂಬಾರು ಹೊತ್ತು ಹೆಜ್ಜೆ ಹಾಕಲಿದ್ದಾನೆ. ಬನ್ನಿಮಂಟಪದಿಂದ ಶುರುವಾಗಿ ಶ್ರೀರಂಗನಾಥ ದೇವಾಲಯದವರೆಗೂ ಮೆರವಣಿಗೆ ಸಾಗಲಿದೆ.

ಜಂಬೂಸವಾರಿಗೆ ವಿವಿಧ ಕಲಾತಂಡಗಳು ಸಾಂಸ್ಕೃತಿಕ ವೈಭವದ ಮೆರುಗು ನೀಡಲಿವೆ. ಬ್ಯಾಂಡ್‌, ಪೂಜಾ ಕುಣಿತ, ವೀರಗಾಸೆ, ನಗಾರಿ, ಜಡೆ ಕೋಲಾಟ, ಗಾರುಡಿ ಗೊಂಬೆ, ತಮಟೆ, ದೊಣ್ಣೆವರಸೆ, ಡೊಳ್ಳು ಕುಣಿತ, ಕಂಸಾಳೆ, ಕೊಂಬು-ಕಹಳೆ ಹಾಗೂ ಸ್ತಬ್ಧಚಿತ್ರಗಳ ಮೆರವಣಿಗೆ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

8 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

9 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

10 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

10 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

10 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

11 hours ago