shriranga pattan dasara
ಮಂಡ್ಯ: ಇಂದಿನಿಂದ ನಾಲ್ಕು ದಿನಗಳ ಕಾಲ ಮಂಡ್ಯದ ಶ್ರೀರಂಗಪಟ್ಟಣ ದಸರಾ ಉತ್ಸವ ನಡೆಯಲಿದೆ.
ಇಂದಿನ ನಾಲ್ಕು ದಿನಗಳ ಕಾಲ ನಡೆಯಲಿರುವ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ನಟ, ನಿರ್ದೇಶಕ ಟಿ.ಎಸ್.ನಾಗಾಭರಣ ಅವರು ಮಧ್ಯಾಹ್ನ 2.30ರಿಂದ 3 ಗಂಟೆಗೆ ಸಲ್ಲುವ ಶುಭ ಲಗ್ನದಲ್ಲಿ ಚಾಲನೆ ನೀಡಲಿದ್ದಾರೆ.
ಶ್ರೀರಂಗಪಟ್ಟಣದ ಕಿರಂಗೂರು ಬಳಿ ಬನ್ನಿಮಂಟಪದಲ್ಲಿ ಪೂಜಾ ಕೈಂಕರ್ಯ ನೆರವೇರಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಗುತ್ತದೆ.
ಇದನ್ನು ಓದಿ : ಶ್ರೀರಂಗಪಟ್ಟಣ ದಸರಾಗೆ ಮಹೇಂದ್ರ, ರೂಪ ಹಾಗೂ ಕಾವೇರಿ ಆನೆಗಳು ಆಯ್ಕೆ: ಡಿಸಿಎಫ್ ಪ್ರಭುಗೌಡ
ಇದಾದ ಬಳಿಕ ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮೂಲಕ ಜಂಬೂಸವಾರಿಗೂ ಚಾಲನೆ ನೀಡಲಾಗುತ್ತದೆ. ಶ್ರೀರಂಗಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಜಂಬೂಸವಾರಿ ಮೆರವಣಿಗೆ ಸಾಗಲಿದೆ.
ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿರುವ ಮಹೇಂದ್ರ ಆನೆ ಅಂಬಾರು ಹೊತ್ತು ಹೆಜ್ಜೆ ಹಾಕಲಿದ್ದಾನೆ. ಬನ್ನಿಮಂಟಪದಿಂದ ಶುರುವಾಗಿ ಶ್ರೀರಂಗನಾಥ ದೇವಾಲಯದವರೆಗೂ ಮೆರವಣಿಗೆ ಸಾಗಲಿದೆ.
ಜಂಬೂಸವಾರಿಗೆ ವಿವಿಧ ಕಲಾತಂಡಗಳು ಸಾಂಸ್ಕೃತಿಕ ವೈಭವದ ಮೆರುಗು ನೀಡಲಿವೆ. ಬ್ಯಾಂಡ್, ಪೂಜಾ ಕುಣಿತ, ವೀರಗಾಸೆ, ನಗಾರಿ, ಜಡೆ ಕೋಲಾಟ, ಗಾರುಡಿ ಗೊಂಬೆ, ತಮಟೆ, ದೊಣ್ಣೆವರಸೆ, ಡೊಳ್ಳು ಕುಣಿತ, ಕಂಸಾಳೆ, ಕೊಂಬು-ಕಹಳೆ ಹಾಗೂ ಸ್ತಬ್ಧಚಿತ್ರಗಳ ಮೆರವಣಿಗೆ ನಡೆಯಲಿದೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…