ಮಂಡ್ಯ

ಇಂದಿನಿಂದ ನಾಲ್ಕು ದಿನಗಳ ಕಾಲ ಶ್ರೀರಂಗಪಟ್ಟಣ ದಸರಾ ಮಹೋತ್ಸವ

ಮಂಡ್ಯ: ಇಂದಿನಿಂದ ನಾಲ್ಕು ದಿನಗಳ ಕಾಲ ಮಂಡ್ಯದ ಶ್ರೀರಂಗಪಟ್ಟಣ ದಸರಾ ಉತ್ಸವ ನಡೆಯಲಿದೆ.

ಇಂದಿನ ನಾಲ್ಕು ದಿನಗಳ ಕಾಲ ನಡೆಯಲಿರುವ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ನಟ, ನಿರ್ದೇಶಕ ಟಿ.ಎಸ್.ನಾಗಾಭರಣ ಅವರು ಮಧ್ಯಾಹ್ನ 2.30ರಿಂದ 3 ಗಂಟೆಗೆ ಸಲ್ಲುವ ಶುಭ ಲಗ್ನದಲ್ಲಿ ಚಾಲನೆ ನೀಡಲಿದ್ದಾರೆ.

ಶ್ರೀರಂಗಪಟ್ಟಣದ ಕಿರಂಗೂರು ಬಳಿ ಬನ್ನಿಮಂಟಪದಲ್ಲಿ ಪೂಜಾ ಕೈಂಕರ್ಯ ನೆರವೇರಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಗುತ್ತದೆ.

ಇದನ್ನು ಓದಿ : ಶ್ರೀರಂಗಪಟ್ಟಣ ದಸರಾಗೆ ಮಹೇಂದ್ರ, ರೂಪ ಹಾಗೂ ಕಾವೇರಿ ಆನೆಗಳು ಆಯ್ಕೆ: ಡಿಸಿಎಫ್ ಪ್ರಭುಗೌಡ

ಇದಾದ ಬಳಿಕ ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮೂಲಕ ಜಂಬೂಸವಾರಿಗೂ ಚಾಲನೆ ನೀಡಲಾಗುತ್ತದೆ. ಶ್ರೀರಂಗಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಜಂಬೂಸವಾರಿ ಮೆರವಣಿಗೆ ಸಾಗಲಿದೆ.

ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿರುವ ಮಹೇಂದ್ರ ಆನೆ ಅಂಬಾರು ಹೊತ್ತು ಹೆಜ್ಜೆ ಹಾಕಲಿದ್ದಾನೆ. ಬನ್ನಿಮಂಟಪದಿಂದ ಶುರುವಾಗಿ ಶ್ರೀರಂಗನಾಥ ದೇವಾಲಯದವರೆಗೂ ಮೆರವಣಿಗೆ ಸಾಗಲಿದೆ.

ಜಂಬೂಸವಾರಿಗೆ ವಿವಿಧ ಕಲಾತಂಡಗಳು ಸಾಂಸ್ಕೃತಿಕ ವೈಭವದ ಮೆರುಗು ನೀಡಲಿವೆ. ಬ್ಯಾಂಡ್‌, ಪೂಜಾ ಕುಣಿತ, ವೀರಗಾಸೆ, ನಗಾರಿ, ಜಡೆ ಕೋಲಾಟ, ಗಾರುಡಿ ಗೊಂಬೆ, ತಮಟೆ, ದೊಣ್ಣೆವರಸೆ, ಡೊಳ್ಳು ಕುಣಿತ, ಕಂಸಾಳೆ, ಕೊಂಬು-ಕಹಳೆ ಹಾಗೂ ಸ್ತಬ್ಧಚಿತ್ರಗಳ ಮೆರವಣಿಗೆ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

1 hour ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

1 hour ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

2 hours ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

2 hours ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

3 hours ago

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಟಿ.ನರಸೀಪುರ: ಡೆತ್‌ನೋಟ್‌ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ…

4 hours ago